ರಾಯಚೂರು | ಸಿ ಟಿ ರವಿ ಕ್ಷಮೆಯಾಚಿಸದಿದ್ದರೆ ಆತನ ಮನೆ ಮುಂದೆ ಧರಣಿ: ನಿರ್ಮಲಾ ಬೆಣ್ಣೆ ಎಚ್ಚರಿಕೆ

Date:

Advertisements

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವಿರುದ್ಧ ಅವಾಚ್ಯ ಪದ ಬಳಸಿರುವ ಬಿಜೆಪಿ ಸದಸ್ಯ ಸಿ ಟಿ ರವಿ ಮತ್ತು ಆತನ ಮನೆಯ ಹೆಣ್ಣುಮಕ್ಕಳು ಕ್ಷಮೆಯಾಚಿಸದಿದ್ದರೆ ಮುಂದಿನ ದಿನಗಳಲ್ಲಿ ಸಿ ಟಿ ರವಿ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡೆ ನಿರ್ಮಲಾ ಬೆಣ್ಣೆ ಎಚ್ಚರಿಕೆ ನೀಡಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಪ್ರಜಾಪ್ರಭುತ್ವದ ಹೆಬ್ಬಾಗಿಲಾಗಿರುವ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಬಿಜೆಪಿ ಸದಸ್ಯ ಸಿ ಟಿ ರವಿ ಅವಾಚ್ಯ ಪದ ಬಳಸಿ ನಿಂದಿಸಿರುವುದು ಇಡೀ ರಾಜ್ಯದ ಮಹಿಳೆಯರಿಗೆ ಕೆಟ್ಟ ಸಂದೇಶವಾಗಿದೆ. ದೇಗುಲ ಎಂದೇ ಭಾವಿಸುವ ಬೆಳಗಾವಿ ಸುವರ್ಣ ಸೌಧದಲ್ಲಿ ಸಚಿವೆ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವುದು ಸಭ್ಯತೆಯಲ್ಲ. ಸಿ ಟಿ ರವಿ ನಡೆ ತೀವ್ರ ಖಂಡನೀಯ” ಎಂದರು.

“ಒಬ್ಬ ಮಹಿಳಾ ಪ್ರತಿನಿಧಿಗೆ ಈ ರೀತಿ ಹೇಳಿಕೆ ನೀಡಿ ತನ್ನ ಸ್ಥಾನಕ್ಕೆ ಅವಮಾನ ಮಾಡಿಕೊಂಡಿದ್ದಾರೆ. ಈ ಹಿಂದೆ ರಮೇಶ್ ಜಾರಕಿಹೊಳಿ ಮಹಿಳೆಯರ ವಿರುದ್ಧ ಅವಾಚ್ಯ ಪದ ಬಳಸಿದ್ದರು. ಅದೇ ರೀತಿ ಈಗ ಸಿ ಟಿ ರವಿ ಬಳಸಿದ್ದಾರೆ. ಹೆಣ್ಣುಮಕ್ಕಳಿಗೆ ಕೆಟ್ಟ ಪದಗಳನ್ನು ಬಳಸಿರುವುದನ್ನು ಬಿಜೆಪಿ ಬೆಂಬಲಿಸುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಮಿತ್ ಶಾ ರಾಜೀನಾಮೆಗೆ ಆಗ್ರಹ; ಡಿ.27ರಂದು ಬೃಹತ್‌ ಪ್ರತಿಭಟನೆ

“ಬಿಜೆಪಿಗರಿಗೆ ಮಹಿಳೆಯರ ಮೇಲೆ ಗೌರವವಿಲ್ಲ. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳೆಯರ ವಿರುದ್ಧ ಅಗೌರವದಿಂದ ನಡೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಅಪಾರ ಗೌರವವಿದೆ. ಆದರೆ ಸಿ ಟಿ ರವಿಯ ಅವಾಚ್ಯ ಪದ ತೀವ್ರ ಖಂಡನೀಯ” ಎಂದರು.

ಈ ಸಂದರ್ಭದಲ್ಲಿ ಎಸ್ ಪ್ರತಿಭಾ ರೆಡ್ಡಿ, ಜ್ಯೋತಿ, ಭಾರತಿ, ವಂದನಾ ಶಿವುಕುಮಾರ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X