ಗುಬ್ಬಿ | ಮನುಸ್ಮೃತಿಯ ಅಮಿತ್ ಷಾ ಅವರನ್ನು ಕೇಂದ್ರ ಗೃಹ ಮಂತ್ರಿ ಸ್ಥಾನದಿಂದ ಕೆಳಗಿಳಿಸಿ : ದಸಂಸ ನೇತೃತ್ವದ ಸಂಘಟನೆಗಳ ಒತ್ತಾಯ

Date:

Advertisements

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಮಾಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರ ಮನುಸ್ಮೃತಿ ಭಾವನೆ ಹೊರ ಬಂದಿದೆ. ಸಂವಿಧಾನದಡಿಯಲ್ಲಿ ಅಧಿಕಾರ ಪಡೆದು ಅವರ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂತಹ ವ್ಯಕ್ತಿಯನ್ನು ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಸಿ ಎಂದು ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದು ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ದಲಿತ ಸಂಘರ್ಷ ಸಮಿತಿ, ಆದಿಜಾಂಬವ ಯುವ ಬ್ರಿಗೇಡ್ ಹಾಗೂ ಭಾರತ್ ಭೀಮ್ ಸೇನ್ ಸೇರಿದಂತೆ ಇನ್ನಿತರ ಅಂಬೇಡ್ಕರ್ ಅನುಯಾಯಿಗಳು ಒಗ್ಗೂಡಿ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಮುಂದೆ ಸಭೆ ನಡೆಸಿ ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ನಂತರ ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾ ಸಭೆಯಲ್ಲಿ ದಸಂಸ ತಾಲ್ಲೂಕು ಸಂಚಾಲಕ ಮಾರಶೆಟ್ಟಿಹಳ್ಳಿ ಬಸವರಾಜ್ ಮಾತನಾಡಿ ಅಂಬೇಡ್ಕರ್ ರಚಿತ ಸಂವಿಧಾನ ನಮ್ಮ ದೇಶದ ಅಡಿಪಾಯವಾಗಿದೆ. ನಮ್ಮ ದೇಶದ ಸಾಮಾಜಿಕ ನ್ಯಾಯ ಬದ್ಧತೆ ತೋರಿದ ಅಂಬೇಡ್ಕರ್ ಶೋಷಿತರು, ದೀನ ದಲಿತರ ಪಾಲಿನ ದೇವರು ಎಂಬುದು ಸತ್ಯ. ಅವರ ಸ್ಮರಣೆಯನ್ನು ವ್ಯಸನ ಎನ್ನುವುದು ಅವರ ಕೆಟ್ಟ ಮನಸ್ಥಿತಿ ತೋರುತ್ತದೆ ಎಂದು ಕಿಡಿಕಾರಿದರು.

Advertisements
1000796691 1

ದಲಿತ ಮುಖಂಡ ಎನ್.ಎ.ನಾಗರಾಜ್ ಮಾತನಾಡಿ ಕೀಳು ಸಂಸ್ಕೃತಿ ಅಮಿತ್ ಷಾ ಅವರಿಂದ ವ್ಯಕ್ತವಾಗಿದೆ. ಅಂಬೇಡ್ಕರ್ ಬಗ್ಗೆ ಲಘುವಾಗಿ ಮಾತನಾಡಿದ್ದಲ್ಲದೆ ಅವರ ಅನುಯಾಯಿಗಳನ್ನು ಅವಹೇಳನ ಮಾಡಿದ್ದಾರೆ. ದೇವರ ಸ್ಮರಣೆ ಮಾಡಿ ಏಳು ಜನ್ಮ ಪುಣ್ಯ ಬರುತ್ತೆ ಅಂತ ಹೇಳುವ ಅವರ ಜಾತಿ ಬುದ್ಧಿ ಖಂಡನಾರ್ಹ. ಈ ಕೂಡಲೇ ಅವರು ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ರಾಷ್ಟ್ರಪತಿಗಳು ಅವರನ್ನು ಕೇಂದ್ರ ಸರ್ಕಾರದ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡ ಕಿಟ್ಟದಕುಪ್ಪೆ ನಾಗರಾಜ್ ಮಾತನಾಡಿ ಅಂಬೇಡ್ಕರ್ ಎಂಬ ಪದ ಫ್ಯಾಶನ್ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾಡಿದ ಅವಮಾನವಾಗಿದೆ. ವಿಶ್ವವೇ ಅಂಬೇಡ್ಕರ್ ಅವರನ್ನು ಹೊಗಳುವ ಈ ಸಂದರ್ಭದಲ್ಲಿ ನಮ್ಮ ದೇಶದ ಕೆಲ ಮಂದಿ ಮನುಸ್ಮೃತಿ ಪಾಲಕರು ಅವರಿಗೆ ಅಪಮಾನಿಸುತ್ತಿರುವುದು ಸರಿಯಲ್ಲ. ಮುಂದಿನ ಚುನಾವಣಾ ಸಂದರ್ಭದಲ್ಲಿ ಈ ಮಾತಿಗೆ ತಕ್ಕ ಉತ್ತರ ಅಂಬೇಡ್ಕರ್ ಅನುಯಾಯಿಗಳು ಕೊಡುತ್ತಾರೆ. ಸಂವಿಧಾನದ ಪ್ರಕಾರ ಅಧಿಕಾರ ಪಡೆದು ಅವರ ಬಗ್ಗೆ ಅವಹೇಳನ ಖಂಡನೀಯ. ಈ ತಕ್ಷಣದಿಂದ ಗೃಹ ಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.

ಮೆರವಣಿಗೆಯಲ್ಲಿ ಅಮಿತ್ ಷಾ ಅವರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಬಸವರಾಜು, ಹರಿವೇಸಂದ್ರ ಕೃಷ್ಣಪ್ಪ, ನರೇಂದ್ರಕುಮಾರ್, ಶಿವರಾಜ್, ಸಚಿನ್, ಮಧು, ಸಾವಿತ್ರಮ್ಮ, ನಂದಿನಿ, ಮಂಜುಳಾ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಕಾಂಗ್ರೆಸ್ ಕೊಡುವ ಹಣ ಮತ್ತು ಹೆಂಡಕ್ಕಾಗಿ ಅಂಬೇಡ್ಕರ್ ಹೆಸರು ಕಿಡಿಸಬೇಡಿ
    ಪ್ರತಿಭಟನೆ ಮಾಡಿದರೆ ಯಾರೇ ತಪ್ಪು ಮಾಡಿದರು ಮಾಡಿ.
    ಕೋಟಿ ಕೋಟಿ ವಾಲ್ಮೀಕಿ ಹಗರಣ. ಮೂಡ ಸೈಟ್ ವಾಪಾಸ್ ಯಾರು ಪ್ರತಿಭಟನೆ ಮಾಡಿಲ್ಲ.

    ಅಂಬೇಡ್ಕರ್ ಬಗ್ಗೆ ex mla ರಮೇಶ್ ಮಾತು ಕೇಳಿ.

    ದಯವಿಟ್ಟು ಅಂಬೇಡ್ಕರ್ ಹೆಸರಲ್ಲಿ ರಾಜಕೀಯ ಮತ್ತು ಹಣ ಮಾಡ್ಬೇಡಿ

  2. ಕೆಲವು ಜನ ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಅಂತಹವರನ್ನು ದೂರವಿಡಿ.ಎಂದು ಅಮಿತ್ ಷಾ ಹೇಳಿದ್ದಾರೆ ಅದರಲ್ಲಿ ತಪ್ಪು ಏನಿದೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X