ʻದಿ ಕೇರಳ ಸ್ಟೋರಿʼ : ಷಡ್ಯಂತ್ರದ ಸಿನಿಮಾ ಎಂದ ಕಮಲ್‌ ಹಾಸನ್‌

Date:

Advertisements

ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ

ತಿರುಚಿದ ಕಥಾಹಂದರದ ಕಾರಣಕ್ಕೆ ಸುದ್ದಿಯಲ್ಲಿರುವ ಚಿತ್ರ

ತಿರುಚಿದ ಕಥಾಹಂದರದ ಕಾರಣಕ್ಕೆ ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಬಗ್ಗೆ ಸಾಮಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ತಮಿಳಿನ ದಿಗ್ಗಜ ನಟ ಕಮಲ್‌ ಹಾಸನ್‌, ʼದಿ ಕೇರಳ ಸ್ಟೋರಿʼ ಬಗ್ಗೆ ಮಾತನಾಡಿದ್ದು, ಅದೊಂದು ಷಡ್ಯಂತ್ರದ ಸಿನಿಮಾ ಎಂದಿದ್ದಾರೆ.

Advertisements

ಇತ್ತೀಚೆಗೆ ಅಬುದಾಬಿಯಲ್ಲಿ ನಡೆದ 2023ನೇ ಸಾಲಿನ ʼಐಫಾʼ (ಇಂಟರ್‌ನ್ಯಾಶನಲ್‌ ಇಂಡಿಯನ್‌ ಫಿಲ್ಮ್‌ ಅಕಾಡೆಮಿ ಅವಾರ್ಡ್ಸ್‌) ಸಮಾರಂಭದಲ್ಲಿ ಕಮಲ್‌ ಹಾಸನ್‌ ಭಾಗಿಯಾಗಿದ್ದರು. ʼಭಾರತೀಯ ಚಿತ್ರರಂಗದಲ್ಲಿ ಅತ್ಯುತ್ತಮ ಸಾಧನೆಗೈದ ನಟʼ ಎಂಬ ವಿಶೇಷ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ʼದಿ ಕೇರಳ ಸ್ಟೋರಿʼ ಚಿತ್ರದ ಬಗ್ಗೆ ಮಾಧ್ಯಮದವರಿಂದ ಎದುರಾದ ಪ್ರಶ್ನೆಗೆ ಉತ್ತರಿಸಿರುವ ಕಮಲ್‌ ಹಾಸನ್‌, “ನಾನು ನಿಮಗೆ ಮೊದಲೇ ಹೇಳಿದಂತೆ ಅದೊಂದು ಷಡ್ಯಂತ್ರದ ಸಿನಿಮಾ. ಇಂತಹ ಸಿನಿಮಾಗಳನ್ನು ನಾನು ವಿರೋಧಿಸುತ್ತೇನೆ. ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಎಂದು ಕೇವಲ ಟೈಟಲ್‌ ಕೆಳಗಡೆ ಬರೆದುಕೊಂಡರೆ ಸಾಲದು. ಸಿನಿಮಾದ ಕಥೆಯಲ್ಲೂ ಸತ್ಯಾಂಶ ಇರಬೇಕು” ಎಂದಿದ್ದಾರೆ.

ಕೇವಲ ಕಮಲ್‌ ಹಾಸನ್‌ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಹಲವು ತಾರೆಯರು ʼದಿ ಕೇರಳ ಸ್ಟೋರಿʼ ಚಿತ್ರದ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ವಿವಾದಿತ ಚಿತ್ರದ ಪ್ರದರ್ಶನವನ್ನು ನಿಷೇಧಿಸಿದ್ದ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ ಖಂಡಿಸಿದ್ದರು. ಸಿನಿಮಾ ಷಡ್ಯಂತ್ರದ ಭಾಗವಾಗಿದ್ದರೂ ನಿಷೇಧ ಹೇರುವುದು ತಪ್ಪು ಎಂದಿದ್ದರು.

ʼದಿ ಕೇರಳ ಸ್ಟೋರಿʼ ಚಿತ್ರದ ವಿವಾದದ ಕುರಿತು ಮಾಡನಾಡಿದ್ದ ನವಾಜುದ್ದೀನ್‌ ಸಿದ್ದಿಕಿ, “ಯಾವುದೇ ಚಿತ್ರ ಅಥವಾ ಕೃತಿ ಯಾರಿಗಾದರೂ ನೋವುಂಟು ಮಾಡುತ್ತಿದ್ದರೆ, ಅದು ತಪ್ಪು. ನಾವು ಪ್ರೇಕ್ಷಕರನ್ನು ನೋಯಿಸುವ ಸಲುವಾಗಿ ಅಥವಾ ಅವರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಸಲುವಾಗಿ ಸಿನಿಮಾಗಳನ್ನು ಮಾಡುವುದಿಲ್ಲ” ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ಮೂಡಿಬಂದಿರುವ ʼದಿ ಕೇರಳ ಸ್ಟೋರಿʼ ಚಿತ್ರವನ್ನು ಮೇ 8ರಂದು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿತ್ತು. ಚಿತ್ರದ ನಿಷೇಧವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌, ಪಶ್ಚಿಮ ಬಂಗಾಳ ಸರ್ಕಾರದ ನಿಷೇಧದ ಆದೇಶಕ್ಕೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಒಂದು ಸಮುದಾಯದ ಜನರ ಭಾವನೆಗಳ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವಂತ ಚಿತ್ರ ನಿರ್ಮಾಣ ಮಾಡಬಾರದು
    ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X