ವಿಜಯಪುರ | ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ದಸಂಸ ಆಗ್ರಹ

Date:

Advertisements

ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ಕೂಡಲೇ ವಜಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ. ಡಿಜಿ ಸಾಗರ್ ಬಣ) ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದರು.

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ತೆರಳಿ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

“ಲೋಕಸಭೆ ಅಧಿವೇಶನದಲ್ಲಿ ಕೇಂದ್ರ ಸಚಿವ ಅಮಿತ್ ಶಾ, ವಿಶ್ವರತ್ನ ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮತ್ತು ಅವಹೇಳನಕರವಾಗಿ ಮಾತನಾಡಿರುವ ಘಟನೆ ಇಡೀ ಮಾನವ ಕುಲ ತಲೆತಗ್ಗಿಸುವ ವಿಷಯವಾಗಿದ್ದು, ಇದೊಂದು ದೇಶದ್ರೋಹಿ ಕೆಲಸವಾಗಿದೆ” ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಖಂಡಿಸಿದೆ.

Advertisements

“ಸ್ವಾತಂತ್ರ್ಯ, ಸಮಾನತೆ, ಭಾತೃತ್ವ ಜಾತ್ಯತೀತ ಪ್ರಜಾಸತ್ತಾತ್ಮಕ 10 ಹಲವಾರು ವಿಷಯಗಳನ್ನು ಒಗ್ಗೂಡಿಸಿಕೊಂಡು ವಿಶ್ವಕ್ಕೆ ಮಾದರಿಯಾಗಿರುವ ಸಂವಿಧಾನವನ್ನು ವಿಶ್ವರತ್ನ ಬಾಬಾ ಸಾಹೇಬ ಅಂಬೇಡ್ಕರ್ ಅವರು ತಮ್ಮ ಅವಿರತ ಪ್ರಯತ್ನದಿಂದ ಸಂವಿಧಾನವನ್ನು ದೊರಕಿಸಿ ಕೊಟ್ಟಿದ್ದಾರೆ. ಸವಿಧಾನ ಈ ದೇಶದ ಜೀವಾಳವಾಗಿದೆ. ಸವಿಧಾನ ನಿರ್ಮಾತೃ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರದ ಅಗ್ರಗಣ್ಯ ನಾಯಕರಾಗಿದ್ದಾರೆ. ಅಲ್ಲದೆ ಈ ಬಹುತೇಕ ಜನರ ಉಸಿರಾಗಿದ್ದಾರೆ. ಅವರನ್ನು ಸ್ಮರಣೆ ಮಾಡೋದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಹೀಗಿದ್ದು ಡಾ. ಅಂಬೇಡ್ಕರ್ ಅವರ ಹೆಸರನ್ನು ಶೋಕಿಗಾಗಿ ಹೇಳಲಾಗುತ್ತಿದೆ. ಅದರ ಬದಲು ದೇವರ ಹೆಸರು ಹೇಳಿದರೆ ಏಳು ಜನ್ಮಕ್ಕೆ ಪುಣ್ಯಪ್ರಾಪ್ತಿಯಾಗುತ್ತಿತ್ತು ಎಂದು ಕಲ್ಪನಾತೀತವಾಗಿ ಮತ್ತು ಬೇಜವಾಬ್ದಾರಿತನದಿಂದ ಹೇಳಿರುವ ಅಮಿತ್ ಶಾ ಮಾತು ದೇಶ ವಿರೋಧಿ ಕೃತ್ಯವಾಗಿದೆ. ಹೀಗಾಗಿ ಅವರು ದೇಶವಾಸಿಗಳಿಗೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಪ್ರಧಾನಿ ಮೋದಿಯವರೂ ರಾಜೀನಾಮೆ ನೀಡಬೇಕು. ರಾಷ್ಟ್ರಪತಿಗಳು ಅವರನ್ನು ವಜಗೊಳಿಸಬೇಕು. ಇಲ್ಲವಾದಲ್ಲಿ ಸಮಿತಿಯು ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗರತ್ತಿಕೊಳ್ಳಬೇಕಾಗುತ್ತದೆ” ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಅಪಮಾನ; ಎಸ್‌ಡಿಪಿಐ ತೀವ್ರ ಖಂಡನೆ

ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರುಗಳಾದ ಸಿದ್ದು ರಾಯಣ್ಣನವರು, ವೈ ಸಿ ಮಯೂರ, ಮಹಾಂತೇಶ ಸಾಹಸಬಾಳ, ಬಾಬುರಾವ್ ಗುಡಿಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X