ರಾಯಚೂರು | ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಪ್ರಯತ್ನ; ಪೊಲೀಸರಿಗೆ ದೂರು

Date:

Advertisements

ಹಿಂದುಳಿದ ವರ್ಗದ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗದಲ್ಲಿ ಮೂಬೈಲ್ ಇಟ್ಟು ವಿದ್ಯಾರ್ಥಿನಿಯರು ಶೌಚ ಮಾಡುವ ಚಿತ್ರೀಕರಣ ಸೆರೆ ಹಿಡಿಯಲು ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿನಿಲಯದ ಶೌಚಾಲಯದ ಹಿಂಭಾಗದಲ್ಲಿ ಚಿತ್ರೀಕರಣ ಮಾಡಲು ಡಿಸೆಂಬರ್‌ 19 ರಂದು ರಾತ್ರಿ 10ಕ್ಕೆ ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಕಿಡಿಗೇಡಿಗಳು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಘಟನೆಯ ದಿನ ಶುಕ್ರವಾರ ರಾತ್ರಿ ವಾರ್ಡನ್‌ ಶಂಕ್ರಪ್ಪ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ 112 ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಇದು ಹೆಣ್ಣುಮಕ್ಕಳ ವಸತಿನಿಲಯ. ಈ ಕಡೆ ಯಾರೂ ಬರುವಂತಿಲ್ಲ ಎಂದು ಸುತ್ತಮುತ್ತ ಇರುವಂತಹ ಜನರಿಗೆ, ಯುವಕರಿಗೆ ಎಚ್ಚರಿಕೆ ನೀಡಿದ್ದಾರೆ.

Advertisements

ಪಟ್ಟಣದ ಕರಡಿಗುಡ್ಡ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಬಾಲಕಿಯರು ಹಾಗೂ ಬಾಲಕರು ಇರುವಂತಹ ಹಾಸ್ಟೆಲ್ ಎಂದಿನಂತೆ ಬಾಲಕಿಯರು ರಾತ್ರಿ ತಮ್ಮ ದಿನನಿತ್ಯದ ಕಾರ್ಯ ಮುಗಿಸಲು ಶೌಚಾಲಯಕ್ಕೆ ಹೋಗಿರುವಾಗ ಶೌಚಾಲಯದ ಕಿಟಕಿಯ ಭಾಗದಲ್ಲಿ ಮೊಬೈಲ್ ಇಟ್ಟಿರುವುದನ್ನು ಗಮನಿಸಿದ ವಿದ್ಯಾರ್ಥಿನಿ ತಕ್ಷಣ ತರಗತಿ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿಸಿದರು. ವಿಷಯ ತಿಳಿಯುತ್ತಿದ್ದಂತೆ ವಸತಿ ಬಾಲಕರು, ವಾರ್ಡನ್ ಹಾಗೂ ಪ್ರಾಂಶುಪಾಲರು ಹಾಸ್ಟೆಲ್ ಕಾಂಪೌಂಡ್ ಹೊರಗೆ ತೆರಳಿ ಮೂಬೈಲ್ ಇಟ್ಟಿದ್ದ ಯುವಕನನ್ನು ಕಂಡುಹಿಡಿಯುವ ಪ್ರಯತ್ನ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕೇಂದ್ರ ಗೃಹಸಚಿವ ಅಮಿತ್‌ ಶಾ ವಜಾಕ್ಕೆ ದಸಂಸ ಆಗ್ರಹ

ಮರುದಿನ ಶನಿವಾರ ರಾತ್ರಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಪಿ ಐ ವೀರಭದ್ರಯ್ಯ ಹಿರೇಮಠ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ವಾರ್ಡನ್‌ ಶಂಕ್ರಪ್ಪ ನೀಡಿದ ದೂರಿನ ಆಧಾರದ ಮೇಲೆ ಅನುಮಾನಾಸ್ಪದ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X