ಉತ್ತರ ಕನ್ನಡ | 13 ವರ್ಷಗಳಿಂದ ರಾಶಿ ಬಿದ್ದಿದ್ದ ಕಬ್ಬಿಣದ ಅದಿರು ಚೀನಾಗೆ ರಫ್ತು

Date:

Advertisements

ಕಾರವಾರ ಬಂದರಿನಲ್ಲಿ ರಾಶಿ ಹಾಕಿದ್ದ ಕಬ್ಬಿಣದ ಅದಿರು ಹದಿಮೂರು ವರ್ಷಗಳ ನಂತರ ಚೀನಾದತ್ತ ಸಾಗುತ್ತಿದೆ. 2010ರಲ್ಲಿ ಅಕ್ರಮವಾಗಿ ಅದಿರು ಸಾಗಾಟ ನಡೆಸುತ್ತಿದೆ ಎಂಬ ಆರೋಪದ ಮೇಲೆ ಬಂದರಿನ ಮೇಲೆ ದಾಳಿ ಮಾಡಿದ್ದ, ಅರಣ್ಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಅದಿರನ್ನು ಜಪ್ತಿ ಮಾಡಿದ್ದರು.

ಜಪ್ತಿ ಮಾಡಿದ್ದ 50,000 ಮೆಟ್ರಿಕ್ ಟನ್‌ ಅದಿರನ್ನು 18 ರಾಶಿಗಳಲ್ಲಿಡಲಾಗಿತ್ತು. ಆ ಅದಿರನ್ನು ಸುಪ್ರೀಂ ಕೋರ್ಟ್‌ ನಿರ್ದೇಶದ ಮೇಲೆ ಹರಾಜು ಹಾಕಲಾಗಿತ್ತು. ಹರಾಜು ಪ್ರಕ್ರಿಯೆಲ್ಲಿ16 ರಾಶಿಗಳು ಅಂದರೆ 37,320 ಮೆಟ್ರಿಕ್ ಟನ್ ಅದಿರನ್ನ ಮಂಗಳೂರಿನ ಗ್ಲೋರಿ ಶಿಪ್ಪಿಂಗ್ ಸಂಸ್ಥೆ ಪಡೆದುಕೊಂಡಿದೆ. ಆ ಅದಿರನ್ನು ಚೀನಾಗೆ ರಫ್ತು ಮಾಡುತ್ತಿದೆ.

ಉಳಿದ 2 ರಾಶಿ ಅಂದರೆ 12,680 ಮೆಟ್ರಿಕ್ ಟನ್ ಅದಿರನ್ನು ವೇದಾಂತ ಸೆಸೆಗೋವಾ ಕಂಪನಿ ಖರೀದಿಸಿದೆ. ಆದರೆ, ಕಂಪನಿಯು ಇನ್ನೂ ಹಣ ಪಾವತಿ ಮಾಡದ ಹಿನ್ನೆಲೆಯಲ್ಲಿ ಆ ಎರಡು ರಾಶಿಗಳು ಬಂದರಿನಲ್ಲಿಯೇ ಉಳಿಯಲಿವೆ.

Advertisements

ಹರಾಜಿಗೆ 13 ವರ್ಷಗಳೇಕೆ?

ಕಾರವಾರ ಬಂದರಿನಲ್ಲಿ 2010ರವರೆಗೂ ಕಬ್ಬಿಣದ ಅದಿರು ರಫ್ತು ಮಾಡಲಾಗುತ್ತಿತ್ತು. ಆದರೆ, ಅಕ್ರಮವಾಗಿಯೂ ಅದಿರು ರಫ್ತಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ದೂರಿನ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಅದಿರನ್ನು ವಶಪಡಿಸಿಕೊಂಡಿದ್ದರು.

ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್‌, ಕರ್ನಾಟಕದ ಅದಿರನ್ನು ಯಾವುದೇ ಕಾರಣಕ್ಕೂ ರಫ್ತು ಮಾಡಿಸುವಂತಿಲ್ಲವೆಂದು ಆದೇಶ ನೀಡಿತ್ತು. ಆದರೆ, ಬಂದರಿನಲ್ಲಿ ಅದಿರು ಹಾಳಾಗುತ್ತಿದೆ. ಗಾಳಿ-ಮಳೆಯಿಂದ ರಾಶಿ ಕರಗುತ್ತಿದೆ ಎಂದು ಆದೇಶವನ್ನು ಮರುಪರಿಶೀಲಿಸುವಂತೆ ಅಧಿಕಾರಿಗಳು ನ್ಯಾಯಾಲಯದಲ್ಲಿ ಕೋರಿದ್ದರು.

ಬಳಿಕ, 2020ರಲ್ಲಿ ತನ್ನ ಆದೇಶವನ್ನು ಹಿಂಪಡೆದ ಸುಪ್ರೀಂ ಕೋರ್ಟ್‌, ಹರಾಜು ಪ್ರಕ್ರಿಯೆ ನಡೆಸಲು ಅನುಮತಿ ನೀಡಿತ್ತು. ಉತ್ತರ ಕನ್ನಡ ಜಿಲ್ಲಾ ಟಾಸ್ಕಫೋಸ್೯ ಅದಿರನ್ನ ಹರಾಜು ಪ್ರಕ್ರಿಯೆಗೆ ಬಿಡ್‌ ಕರೆದಿತ್ತು. ಹಲವಾರು ಗೊಂದಲಗಳ ಬಳಿಕ ಅಂತಿಮವಾಗಿ ಹರಾಜು ಪ್ರಕ್ರಿಯೆ ಮುಗಿದಿದ್ದು, 13 ವರ್ಷಗಳಿಂದ ರಾಶಿ ಉಳಿದಿದ್ದ ಅದಿರು, ರಫ್ತಾಗಲು ಸಿದ್ದವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X