ಚಾಂಪಿಯನ್ಸ್ ಟ್ರೋಫಿ: ಯುಎಇಯಲ್ಲಿ ಭಾರತ-ಪಾಕ್ ಪಂದ್ಯದ ದಿನಾಂಕ ನಿಗದಿ

Date:

Advertisements

ಹೈಬ್ರೀಡ್ ಮಾದರಿಯಲ್ಲಿ ನಡೆಯುವ 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ವಹಿಸಲಿರುವ ಪಾಕಿಸ್ತಾನ, ಭಾರತದ ವಿರುದ್ಧದ ತನ್ನ ಪಂದ್ಯಗಳಿಗೆ ತಟಸ್ಥ ತಾಣಗಳನ್ನು ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಸಲ್ಲಿಸಿದೆ.

ಈ ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿವೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಯುಎಇಯನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡಿಕೊಂಡಿದ್ದು, ಅಧಿಕೃತವಾಗಿ ಈ ಬಗ್ಗೆ ಐಸಿಸಿಗೆ ತನ್ನ ನಿರ್ಧಾರವನ್ನು ತಿಳಿಸಿದೆ. ಇದೀಗ ಭಾರತ-ಪಾಕಿಸ್ತಾನ ನಡುವಿನ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ ಎಂದು ಪಿಸಿಬಿ ವಕ್ತಾರರು ಹೇಳಿದ್ದಾಗಿ ವರದಿ ವಿವರಿಸಿದೆ.

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

Advertisements

ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಕ್ವಿ, ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶೇಖ್ ಮುಬಾರಕ್ ಅಲ್ ನಹ್ಯಾನ್ ಅವರು ಈ ನಿರ್ಧಾರವನ್ನು ಅಂತಿಮಪಡಿಸಿದ್ದಾರೆ. ಐಸಿಸಿ ಮಂಡಳಿಯ ನಿಯಮಾವಳಿ ಅನುಸಾರ ಜಾಗತಿಕ ಟೂರ್ನಿಗಳಲ್ಲಿ ಆತಿಥ್ಯ ವಹಿಸುವ ದೇಶದ ಮಂಡಳಿ ತಟಸ್ಥ ತಾಣಗಳನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತದೆ. ಇದರಿಂದಾಗಿ ಭಾರತದ ವಿರುದ್ಧದ ಪಂದ್ಯಗಳಿಗೆ ದುಬೈ ತಾಣವಾಗಿರುತ್ತದೆ.

ಪ್ರೇಕ್ಷಕರ ಬಹುನಿರೀಕ್ಷಿತ ಪಾಕಿಸ್ತಾನ ವಿರುದ್ಧದ ಪಂದ್ಯ ಫೆಬ್ರುವರಿ 23ರಂದು ನಡೆಯಲಿದೆ. ಯುಎಇ ಅಬುದಾಭಿ ಮತ್ತು ಶಾರ್ಜಾದಲ್ಲೂ ಎರಡು ಕ್ರೀಡಾಂಗಣಗಳಿದ್ದು, ದುಬೈ ಸ್ಟೇಡಿಯಂ ಅತಿದೊಡ್ಡ ಕ್ರೀಡಾಂಗಣವಾಗಿದೆ. ಯುಎಇ ಬದಲಾಗಿ ಶ್ರೀಲಂಕಾವನ್ನು ತಟಸ್ಥ ತಾಣವಾಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಪಿಸಿಬಿ ತಳ್ಳಿಹಾಕಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X