ಬಳ್ಳಾರಿಯಿಂದ ನಾಪತ್ತೆಯಾಗಿದ್ದ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಪತ್ತೆ

Date:

Advertisements

ಬಳ್ಳಾರಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಬಳ್ಳಾರಿಯಿಂದ ವಿಡಿಯೋ ಕಾಲ್ ಮೂಲಕ ತಾಯಿಯನ್ನು ನೋಡಿದ ಮಕ್ಕಳು ದುಃಖಿತರಾದರು.

ಬಳ್ಳಾರಿ ಮೂಲದ ಸಾಕಮ್ಮ ಅವರು 25 ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಮಹಿಳೆಯ ಸುಳಿವು ಸಿಗದ ಕಾರಣ ಕುಟುಂಬಸ್ಥರು ಮೃತಪಟ್ಟಿದ್ದಾಳೆ ಎಂದು ತಿಳಿದು ಆಕೆಯ ತಿಥಿ ಕಾರ್ಯವನ್ನೂ ಮಾಡಿದ್ದರು. ಆದರೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಹಾಗೂ ಹಿಮಾಚಲ ಪ್ರದೇಶದ ಕನ್ನಡಿಕ ಐಪಿಎಸ್‌ ಅಧಿಕಾರಿ ರವಿನಂದನ್‌ ಅವರ ನೆರವಿನಿಂದ ಮೃತಪಟ್ಟಿದ್ದಾಳೆ ಎಂದುಕೊಂಡಿದ್ದ ಮಹಿಳೆ ಹಿಮಾಚಲ ಪ್ರದೇಶದ ಮಂಡಿ ನಗರದಲ್ಲಿ ಪತ್ತೆಯಾಗಿದ್ದಾರೆ.

ಸಾಕಮ್ಮ ಅವರು ಹಿಮಾಚಲ ಪ್ರದೇಶದ ಮಂಡಿಯ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯ ತಾಯಿಯಾಗಿದ್ದ ಇವರು ಮಾನಸಿಕ ಸಮಸ್ಯೆ ಹೊಂದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ಮಕ್ಕಳಾದ ವಿಕ್ರಮ್, ಬೋಧರಾಜ್, ಲಕ್ಷ್ಮಿ ಸಣ್ಣವರಿರುವಾಗಲೇ ಬಳ್ಳಾರಿಯ ಹೊಸಪೇಟೆಯಿಂದ ಆಕಸ್ಮಿಕವಾಗಿ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದರು. ಅನಾಥವಾಗಿದ್ದ ಸಾಕಮ್ಮ ಹಿಮಾಚಲ ಪ್ರದೇಶದ ಮಂಡಿಯ ನಿರಾಶ್ರಿತ ಶಿಬಿರದಲ್ಲೇ ಉಳಿದುಕೊಂಡಿದ್ದರು. ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮಂಡ್ಯ ಮೂಲದ ಐಪಿಎಸ್ ಅಧಿಕಾರಿ ರವಿನಂದನ್ ಅವರು ಸಾಕಮ್ಮ ಅವರ ಬಗ್ಗೆ ಬೆಂಗಳೂರಿನಲ್ಲಿರುವ ತಮ್ಮ ಸ್ನೇಹಿತರಿಗೆ ವಿಡಿಯೋ ಮೂಲಕ ಮಾಹಿತಿ ನೀಡಿದ್ದರು. ಐಪಿಎಸ್ ಅಧಿಕಾರಿಯ ಸ್ನೇಹಿತ ಸಾಕಮ್ಮ ಅವರ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ಗಮನಿಸಿದ್ದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಐಪಿಎಸ್ ಅಧಿಕಾರಿ ರವಿನಂದನ್ ಜೊತೆ ಚರ್ಚಿಸಿ ಮಾಹಿತಿ ಪಡೆದಿದ್ದರು. ಬಳ್ಳಾರಿ ಮೂಲದ ಸಾಕಮ್ಮ ಅವರ ಬಗ್ಗೆ ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಣಿವಣ್ಣನ್ ನಿರ್ದೇಶನದ ಮೇರೆಗೆ ಮೂವರು ಸಿಬ್ಬಂದಿಗಳ ತಂಡ ಹಿಮಾಚಲ ಪ್ರದೇಶದ ಮಂಡಿಗೆ ತೆರಳಿತ್ತು.

ಅಲ್ಲಿಗೆ ತೆರಳಿದಾಗ ಸಾಕಮ್ಮ ಅವರಿಗೆ ಮಕ್ಕಳು, ಕುಟುಂಬ ಇದೆ ಎಂಬ ಮಾಹಿತಿ ದೊರಕಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಕುಟುಂಬಸ್ಥರನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಮಂಡಿಯಿಂದಲೇ ವಿಡಿಯೋ ಕಾಲ್ ಮೂಲಕ ಮಕ್ಕಳ ಜೊತೆ ತಾಯಿ ಸಾಕಮ್ಮ ಅವರನ್ನು ಮಾತನಾಡಿಸಿದರು. ತಾಯಿ ಜೊತೆ ಮಾತನಾಡುವಾಗ ಮಕ್ಕಳು ಕೂಡ ಭಾವುಕರಾಗಿ ಕಣ್ಣೀರು ಹಾಕಿದರು. ಸಾಕಮ್ಮ ಕೂಡ ಬೆಂಗಳೂರಿಗೆ ಆಗಮಿಸಿ ಮಕ್ಕಳ ಮನೆ ಸೇರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X