ಶೇಖ್ ಹಸೀನಾರನ್ನು ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾ ಪತ್ರ

Date:

Advertisements

ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ (ಬಾಂಗ್ಲಾದೇಶ) ವಾಪಸ್‌ ಕಳಿಸುವಂತೆ ಭಾರತಕ್ಕೆ ಬಾಂಗ್ಲಾದ ಮಧ್ಯಂತರ ಸರ್ಕಾರ ಪತ್ರ ಬರೆದಿದೆ.

ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಮೀಸಲಾತಿಯ ವಿರುದ್ಧ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು. ಹಸೀನಾ ಅವರ ರಾಜನಾಮೆ ಆಗ್ರಹಿಸಿ ವಿದ್ಯಾರ್ಥಿ, ಯುವಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಲಾರಂಭಿಸಿದ್ದರು. ಹಿಂಸಾಚಾರದಿಂದಾಗಿ ಹಸೀನಾ ಅವರು ಆಗಸ್ಟ್‌ 5ರಂದು ಬಾಂಗ್ಲಾ ತೊರೆದಿದ್ದು, ಭಾರತದಲ್ಲಿ ಉಳಿದುಕೊಂಡಿದ್ದಾರೆ.

ಇದೀಗ, ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಬಾಂಗ್ಲಾ ಆಡಳಿತ ನಡೆಸುತ್ತಿದೆ. ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ನರಮೇಧ ಆರೋಪದ ಮೇಲೆ ಶೇಖ್ ಹಸೀನಾ ಮತ್ತು ಅವರ ಮಂತ್ರಿಗಳು, ಸಲಹೆಗಾರರು ಹಾಗೂ ಮಾಜಿ ಮಿಲಿಟರಿ ಅಧಿಕಾರಿಗಳನ್ನು ಬಂಧಿಸಲು ಬಾಂಗ್ಲಾದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ವಾರಂಟ್‌ ಜಾರಿ ಮಾಡಿದೆ. ಹೊರಡಿಸಿದೆ.

Advertisements

ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, “ನ್ಯಾಯಾಂಗ ಪ್ರಕ್ರಿಯೆಗಾಗಿ ಹಸೀನಾರನ್ನು ಬಾಂಗ್ಲಾಗೆ ವಾಪಸ್ ಕಳಿಸುವಂತೆ ನಾವು ಭಾರತ ಸರ್ಕಾರಕ್ಕೆ ಮೌಖಿಕ (ರಾಜತಾಂತ್ರಿಕ ಸಂದೇಶ) ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X