ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ; ಟ್ರೋಲ್ ಆದ ನಿರ್ಮಲಾ ಸೀತಾರಾಮನ್

Date:

Advertisements

ಪಾಪ್‌ಕಾರ್ನ್‌ಗೂ ಜಿಎಸ್‌ಟಿ ವಿಧಿಸುವ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್‌ಗೆ ಒಳಗಾಗಿದ್ದಾರೆ. ಜಿಎಸ್‌ಟಿ ಕೌನ್ಸಿಲ್ ಈ ಬಗ್ಗೆ ಸ್ಪಷ್ಟನೆ ನೀಡಿರುವುದನ್ನು ಕೂಡಾ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಪಾಪ್‌ಕಾರ್ನ್‌ ಮೇಲೆ ಮೂರು ರೀತಿಯ ಜಿಎಸ್‌ಟಿ ಹಾಕಿರುವುದೇ ನಿರ್ಮಲಾ ಸೀತಾರಾಮನ್ ಅವರು ಟ್ರೋಲ್ ಆಗಲು ಕಾರಣ. 55ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಬಳಿಕ ಪಾಪ್‌ಕಾರ್ನ್ ಮೇಲಿನ ತೆರಿಗೆ ರಚನೆಯನ್ನು ಸ್ಪಷ್ಟಪಡಿಸಲಾಗಿದೆ. ಅಸ್ತಿತ್ವದಲ್ಲಿರುವ ದರಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ಫೋನ್ ಪೇ, ಗೂಗಲ್ ಪೇ ಬಳಕೆಗೂ ಜಿಎಸ್‌ಟಿ ಬಿದ್ದರೆ ಮುಂದೇನು?

Advertisements

‘ಸಕ್ಕರೆ ಮಿಠಾಯಿ’ ಎಂದು ವರ್ಗೀಕರಿಸಲಾದ ಕಾರಣ ಕ್ಯಾರಮೆಲೈಸ್ಡ್ ಪಾಪ್‌ಕಾರ್ನ್ ಮೇಲೆ ಸಾಲ್ಟೆಡ್ (ಉಪ್ಪು ಮಿಶ್ರಿತ) ಮತ್ತು ಸಾದಾ ಪಾಪ್‌ಕಾರ್ನ್‌ಗಿಂತ ವಿಭಿನ್ನವಾಗಿ ತೆರಿಗೆ ವಿಧಿಸಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.

ಪ್ಯಾಕ್ ಮಾಡದ, ಲೇಬಲ್ ಇಲ್ಲದ ಸಾಲ್ಟೆಡ್ ಪಾಪ್‌ಕಾರ್ನ್‌ಗೆ ಶೇಕಡ 5ರಷ್ಟು ಜಿಎಸ್‌ಟಿ, ಪ್ಯಾಕ್ ಮಾಡಲಾದ, ಲೇಬಲ್ ಮಾಡಿದ ಪಾಪ್‌ಕಾರ್ನ್‌ಗೆ ಶೇಕಡ 12ರಷ್ಟು ಜಿಎಸ್‌ಟಿ, ಕ್ಯಾರಮೆಲೈಸ್ಡ್ ಪಾಪ್‌ಕಾರ್ನ್‌ಗೆ ಶೇಕಡ 18ರಷ್ಟು ಜಿಎಸ್‌ಟಿ ಎಂದು ಕೇಂದ್ರ ವಿತ್ತ ಸಚಿವೆ ವಿವರಿಸಿದ್ದಾರೆ. ಇದಾದ ಬಳಿಕ ಭಾರೀ ಟ್ರೋಲ್‌ಗೆ ಒಳಗಾಗಿದ್ದಾರೆ.

ಕೆಲವು ಟ್ರೋಲ್‌ಗಳನ್ನು ನೋಡಿ

ಹಲವು ನೆಟ್ಟಿಗರು ಪಾಪ್‌ಕಾರ್ನ್‌ಗೆ ವಿವಿಧ ರೀತಿಯ ಜಿಎಸ್‌ಟಿ ವಿಧಿಸಿರುವುದಕ್ಕೆ ಗೊಂದಲ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೇಂದ್ರ ಸಚಿವೆಯ ಹೇಳಿಕೆ ಇನ್ನಷ್ಟು ಗೊಂದಲಕಾರಿಯಾಗಿದೆ ಎಂದು ಹೇಳಿದ್ದಾರೆ. “ಕ್ಯಾರಮೆಲೈಸ್ಡ್, ಸಾಲ್ಟೆಡ್, ಚೀಸ್ – ಹೀಗೆ ಎಲ್ಲಾ ರೀತಿಯ ಪಾಪ್‌ಕಾರ್ನ್‌ ಅನ್ನು ನಾನು ಮಿಕ್ಸ್ ಮಾಡಿಕೊಂಡಿದ್ದೇನೆ. ಈಗ ಹೇಗೆ ಜಿಎಸ್‌ಟಿ ಹಾಕುತ್ತೀರಿ” ಎಂದು ಪ್ರಶ್ನಿಸುವ ಮೂಲಕ ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ.

“ಸಾಲ್ಟೆಡ್ ಪಾಪ್‌ಕಾರ್ನ್‌ಗೆ ಶೇಕಡ 5ರಷ್ಟು ಜಿಎಸ್‌ಟಿ, ಕ್ಯಾರಮೆಲೈಸ್ಡ್ ಪಾಪ್‌ಕಾರ್ನ್‌ಗೆ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. ಸಿಹಿ ಇಷ್ಟ ಪಡುವ ಜನರಿಗೆ ನ್ಯಾಯ ಎಲ್ಲಿದೆ” ಎಂದು ಮತ್ತೋರ್ವ ನೆಟ್ಟಿಗರು ಪ್ರಶ್ನಿಸಿದ್ದಾರೆ. “ಶೀಘ್ರದಲ್ಲೇ ಪಾಪ್‌ಕಾರ್ನ್ ಜಿಎಸ್‌ಟಿಯನ್ನು ಇಎಂಐ ಮೂಲಕ ಪಾವತಿಸುವ ವ್ಯವಸ್ಥೆ ಬರಬಹುದು” ಎಂದಿದ್ದಾರೆ.

ಇನ್ನು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಕೆವಿ ಸುಬ್ರಹ್ಮಣ್ಯಂ ಅವರೂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಒಟ್ಟು ಜೋಳ ಮಾರಾಟ ಪ್ರಮಾಣ, ತೆರಿಗೆ ಲಾಭ ಮೊದಲಾದವುಗಳ ಲೆಕ್ಕಾಚಾರವನ್ನು ವಿವರಿಸಿದ್ದಾರೆ. ಪಾಪ್‌ಕಾರ್ನ್‌ ಮೇಲೆ ಜಿಎಸ್‌ಟಿ ವಿಧಿಸುವ ಸರ್ಕಾರದ ಈ ಕ್ರಮದಿಂದ ಶೇಕಡ 0.013ರಷ್ಟು ತೆರಿಗೆ ಲಭಿಸುತ್ತದೆ. ಆದರೆ ಅದಕ್ಕಾಗಿ ಜನರಿಗೆ ಆಗುವ ಕಷ್ಟವೆಷ್ಟು? ಇದು ಯಾವ ತಾರ್ಕಿಕತೆ ಎಂದು ಪ್ರಶ್ನಿಸಿದ್ದಾರೆ.

ಇನ್ನು ಅದಕ್ಕೂ ಹಿಂದಿನ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, “ಇದು ರಾಷ್ಟ್ರೀಯ ದುರಂತವಾಗಿದ್ದು, ಸರಳ ತೆರಿಗೆ ಎಂಬ ಜಿಎಸ್‌ಟಿ ಪರಿಕಲ್ಪನೆಯನ್ನು ಉಲ್ಲಂಘಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜಿಎಸ್ ಟಿ 1
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X