ಕ್ರಿಸ್ಮಸ್, ಹೊಸ ವರ್ಷಾಚರಣೆ‌ | ಪೊಲೀಸ್ ಬಂದೋಬಸ್ತ್‌ಗೆ ಸೂಚನೆ, ಸಚಿವ ಪರಮೇಶ್ವರ್ ಸಭೆ

Date:

Advertisements

ಬೆಂಗಳೂರು ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸೂಚಿಸಿದರು.

ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, “ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು” ಎಂದರು.

“ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು” ಎಂದು ಸೂಚಿಸಿದರು‌.

Advertisements

“ಅಗತ್ಯ ಬಂದೋಬಸ್ತ್ ಹಿನ್ನೆಲೆಯಲ್ಲಿ ನಗರ‌ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಜೆ ನೀಡುವುದು ಬೇಡ. ತೀರ ಅಗತ್ಯತೆ ಮತ್ತು ಅನಿವಾರ್ಯತೆ ಇದ್ದವರಿಗೆ ರಜೆ ನೀಡಿ. ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆ ವೇಳೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಡಿಸಿಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳನ್ನೇ ಹೊಣೆ ಮಾಡಲಾಗುವುದು. ಈ ವಿಚಾರದಲ್ಲಿ ಯಾರು ಏನೇ ಹೇಳಿದರು ಕೇಳುವುದಿಲ್ಲ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಹಾರ ಹಕ್ಕಿಗೆ ಮಂಡ್ಯ ನಾಂದಿ; ಮುಂದಿದೆ ಸರ್ಕಾರಿ ಸವಾಲು

“ಬಿಬಿಎಂಪಿ, ಬಿಎಂಟಿಸಿ ಬಿಎಂಆರ್‌ಸಿಎಲ್, ಆರೋಗ್ಯ ಮತ್ತು ಅಗ್ನಿಶಾಮಕ ಇಲಾಖೆಯ ನೆರವು ಪಡೆದುಕೊಳ್ಳಬೇಕು. ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಬೇಕು. ಡ್ರಂಕ್ ಆ್ಯಂಡ್ ಡ್ರೈವ್, ಬೈಕ್ ವ್ಹೀಲಿಂಗ್ ಮಾಡುವ ಕಿಡಿಗೇಡಿಗಳು ಹಾಗೂ ಹಳೇ‌ ಪ್ರಕರಣಗಳ ಆರೋಪಿಗಳ ಮೇಲೆ ನಿಗಾ ಇರಿಸಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳುವಂತೆ” ಸೂಚಿಸಿದರು.

ಏಳು ಲಕ್ಷ ಜನ ಸೇರುವ ಸಾಧ್ಯತೆ

“ನಗರದಲ್ಲಿ ಹೊಸ ವರ್ಷ ಆಚರಣೆಗೆ 7 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಲಾಗಿದೆ.‌ ಎಲ್ಲರು ಸಂತೋಷದಿಂದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಿಸಲು ಸಹಕರಿಸಲಾಗುವುದು‌. ಮಹಿಳಾ‌ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೆಟ್ರೋ ವ್ಯವಸ್ಥೆ, ಓಲಾ, ಊಬರ್ ಮುಂತಾದ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗಿದೆ” ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್‌ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಸಿಬಿ ವಿಭಾಗದ ಹೆಚ್ಚುವರಿ ಆಯುಕ್ತ ಡಾ. ಚಂದ್ರಗುಪ್ತ ಹಾಗೂ ಎಲ್ಲ ವಿಭಾಗದ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X