ರಾಯಚೂರು | ಕಲಾವಿದರಿಗೆ ಧನ ಸಹಾಯ ನೀಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ

Date:

Advertisements

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಕಲಾವಿದರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಧನ ಸಹಾಯ ನೀಡಲು ಒತ್ತಾಯಿಸಿ ಜಿಲ್ಲಾ ಸಾಂಸ್ಕೃತಿಕ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ರಾಯಚೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದೇಶದಲ್ಲಿ ಅಗತ್ಯ ವಸ್ತುಗಳು, ಡೀಸೆಲ್, ಪೆಟ್ರೋಲ್, ಗ್ಯಾಸ್ ದರಗಳ ಏರಿಕೆಗಳಿಂದಾಗಿ ದಿನದ ದುಡಿಮೆಯಲ್ಲಿ ಬದುಕುತ್ತಿರುವ ಶ್ರಮಿಕ ವರ್ಗ, ಸಣ್ಣ ರೈತರು, ಕೂಲಿಕಾರ್ಮಿಕರು ಮತ್ತು ಕಲಾವಿದರ ಬದುಕು ಅಸಹನೀಯವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಕಲೆಯನ್ನೇ ನಂಬಿ ಬದುಕುತ್ತಿರುವ ಕಲಾವಿದರು ಜೀವನ ತೀರಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತಿವರ್ಷ ಆನ್‌ಲೈನ್‌ನಲ್ಲಿ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿ ಧನಸಹಾಯ ನೀಡುತ್ತಿತ್ತು. ಇದು ಕಲಾವಿದರ ಬದುಕಿಗೆ ಕಾರ್ಯ ಚಟುವಟಿಕೆ ನಿರಂತರವಾಗಿ ಉತ್ತೇಜನ ನೀಡುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಕಲಾವಿದರಿಗೆ, ಸಂಘ ಸಂಸ್ಥೆಗಳಿಗೆ ನೀಡುವ ಧನಸಹಾಯದ ಪ್ರಮಾಣ ಕಡಿಮೆಯಾಗಿದೆ. ಇದು ಕಲಾವಿದರನ್ನು ಚಿಂತೆಗೀಡು ಮಾಡಿದೆ ಎಂದರು.

Advertisements

ಪ್ರತಿ ವರ್ಷ ಅಕ್ಟೋಬರ್ ನವೆಂಬರ್ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲ್ಲ. ಕೂಡಲೇ ಅರ್ಜಿ ಆಹ್ವಾನಿಸಿ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಆಕ್ರೋಶ

ಈ ಸಂದರ್ಭದಲ್ಲಿ ಕಲಾವಿದರಾದ ವಿಎನ್ ಅಕ್ಕಿ, ರಂಗಸ್ವಾಮಿ, ಲಕ್ಷ್ಮಣ ಮಂಡಲಗೇರಾ, ಅಣವೀರಯ್ಯ, ಶರಣಪ್ಪ ಗೋನಾಳ, ವೇಣುಗೋಪಾಲ, ನರಸಿಂಹ, ರಾಘವೇಂದ್ರ, ವೆಂಟಕ ನರಸಿಂಹ, ವಿಜಯಲಕ್ಷ್ಮಿ, ದೇವಣ್ಣ, ಜೋಸೆಫ್, ನರೇಂದ್ರ ಕುಮಾರ, ಲಕ್ಷ್ಮಿ ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X