ರಾಯಚೂರು | ಬಾಲಕಿಯರ ವಸತಿ ನಿಲಯದಲ್ಲಿ ಮೊಬೈಲ್ ಇಟ್ಟ ಆರೋಪಿಯನ್ನು ಕೂಡಲೇ ಬಂಧಿಸಿ: ಕರವೇ ಆಗ್ರಹ

Date:

Advertisements

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ವಸತಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು ಹಾಗೂ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಿಷಪೂರಿತ ಆಹಾರ ಸೇವನೆ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥವಾಗಿದ್ದ ಘಟನೆ ನಡೆದಿತ್ತು. ಈಗ ಬಾಲಕಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಘಟನೆ ನಡೆದಿದೆ. ಶಾಲೆ ಮೇಲುಸ್ತುವಾರಿ ವೈಫಲ್ಯದಿಂದ ಮೇಲಿಂದ ಮೇಲೆ ಘಟನೆ ನಡೆಯುತ್ತಿವೆ ಎಂದು ದೂರಿದರು.

ಘಟನೆ ನಡೆದರೂ ಶಾಲೆ ಪ್ರಿನ್ಸಿಪಾಲ್‌, ಮೇಲ್ವಿಚಾರಕರು ದೂರು ನೀಡದೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಸಂಘಟನೆ ನಡೆಸಿದ ನಂತರ ಅಪರಿಚಿತ ವ್ಯಕ್ತಿ ಹೆಸರಿನಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಯಾರೆಂಬುದು ಶಾಲೆಯ ಮುಖ್ಯಸ್ಥರಿಗೆ ಗೊತ್ತಿದೆ. ಈ ಹಿಂದೆಯೂ ಇದೇ ರೀತಿ ಪ್ರಕರಣ ನಡೆದಿತ್ತು. ಆದರೂ ಕ್ರಮಕ್ಕೆ ಮುಂದಾಗದೇ ಇರುವುದರಿಂದ ಮತ್ತೊಂದು ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕರ್ತವ್ಯ ಲೋಪ ಎಸಗಿ ಅಧಿಕಾರಿಗಳನ್ನು ಅಮಾನತುಗೊಳಿಸಿ ವಸತಿ ನಿಲಯದಲ್ಲಿ ಸುರಕ್ಷತೆ, ಸೌಲಭ್ಯ ಒದಗಿಸಬೇಕು ಎಂದರು.

Advertisements

ತಾಲೂಕು ಅಧ್ಯಕ್ಷ ಆನಂದ ಸ್ವಾಮಿ ಮಾತನಾಡಿ, 6 ರಿಂದ 10ನೇ ತರಗತಿ ಮಕ್ಕಳು ಅಭ್ಯಾಸ ಮಾಡುತ್ತಿರುವ ಮೊರಾರ್ಜಿ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಪಟ್ಟಣಕ್ಕೆ ಹೊಂದಿಕೊಂಡಿರುವ ವಸತಿ ಶಾಲೆಯಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಘಟನೆಯಿಂದ ಪಾಲಕರು ಆತಂಕ ಪಡುವಂತಾಗಿದೆ. ಅಪರಿಚಿತ ವ್ಯಕ್ತಿ ಯಾರೆಂಬುದು ಶಾಲೆ ಮುಖ್ಯಸ್ಥರಿಗೆ ತಿಳಿದಿದೆ. ಈ ಹಿಂದೆ ಘಟನೆ ನಡೆದಾಗ ತಿಳುವಳಿಕೆ ನೀಡಿ ಕಳುಹಿಸಲಾಗಿತ್ತು. ಈಗ ಅದೇ ರೀತಿ ಘಟನೆ ಮರುಕಳಿಸಿದೆ. ಕೂಡಲೇ ಬೇಜವಾಬ್ದಾರಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಬೇಕು. ವಸತಿ ಶಾಲೆ ಕಾಂಪೌಂಡ್ ಎತ್ತರವಾಗಿ ನಿರ್ಮಿಸಬೇಕು. ಅಗತ್ಯ ಅಡುಗೆ ಸಿಬ್ಬಂದಿ, ಭದ್ರತೆ ಒದಗಿಸಬೇಕು ಹಾಗೂ ವಸತಿ ನಿಲಯವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಎನ್‌ಐಟಿಕೆಯಲ್ಲಿ 1999 ಬ್ಯಾಚ್ ಹಳೆಯ ವಿದ್ಯಾರ್ಥಿಗಳ ಪುನರ್‌ ಮಿಲನ

ಸಂಗಮೇಶ ಮಂಗಾನವರ ಮಾತನಾಡಿ, ಮೊರಾರ್ಜಿ ವಸತಿ ಶಾಲೆ ಖಾಯಂ ಪ್ರಿನ್ಸಿಪಾಲ ರಜೆಯ ಮೇಲೆ ತೆರಳಿದ್ದಾರೆ. ದೈಹಿಕ ಶಿಕ್ಷಕರಿಗೆ ಪ್ರಭಾರ ಹುದ್ದೆ ನೀಡಿ ವಸತಿ ನಿಲಯ ನಿರ್ವಹಿಸಲಾಗುತ್ತಿದೆ. ಆಡಳಿತ ವ್ಯವಸ್ಥೆ ವೈಫಲ್ಯದಿಂದ ಬಾಲಕಿಯರು ಆತಂಕದಲ್ಲಿ ಅಭ್ಯಾಸ ಮಾಡುವಂತಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಪರಿಶಿಷ್ಟ ಪಂಗಡದ ಇಲಾಖೆ ಅಧಿಕಾರಿಗಳ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಭೀಮಣ್ಣ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X