ಕಾಂಗ್ರೆಸ್ಸಿಗರಿಗೆ ಅಂಬೇಡ್ಕರ್‌ ಹೆಸರು ಹೇಳುವ ನೈತಿಕತೆ ಇಲ್ಲ: ಡಾ.ಪಿ.ಸುಧಾಕರ ರೆಡ್ಡಿ

Date:

Advertisements

ಅಂಬೇಡ್ಕರ್‌ ಅವರನ್ನು ನಿರಂತರವಾಗಿ ಅಪಮಾನ ಮಾಡಿದ್ದ ಕಾಂಗ್ರೆಸ್‌. ಅವರ ಹೆಸರು ಹೇಳುವ ನೈತಿಕತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಾ.ಪಿ.ಸುಧಾಕರ ರೆಡ್ಡಿ ಹೇಳಿದರು.

ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಸೋಲಿನ ನಂತರ ಕಾಂಗ್ರೆಸ್‌ನವರು ಹತಾಶರಾಗಿದ್ದಾರೆ. ಡಾ. ಅಂಬೇಡ್ಕರ್‌ ಅವರನ್ನು ಲೋಕಸಭಾ ಚುನಾವಣೆಯಲ್ಲಿ 2 ಬಾರಿ ಸೋಲಿಸಿ ಅವಮಾನಿಸಿದ್ದ ಕಾಂಗ್ರೆಸ್ ಪಕ್ಷವು ಇದೀಗ ತಮ್ಮ ನಾಯಕರನ್ನು ಉಳಿಸಿಕೊಳ್ಳಲು ಅದೇ ಬಾಬಾಸಾಹೇಬರ ಹೆಸರನ್ನು ಬಳಸಿಕೊಳ್ಳುತ್ತಿದೆ” ಎಂದರು.

“ದೇಶ ವಿಭಜಿಸುವುದನ್ನು ಸಂವಿಧಾನ ಶಿಲ್ಪಿ ಅಂಬೇಡ್ಕರರು ವಿರೋಧಿಸಿದ್ದರು. 370ನೇ ವಿಧಿ ಹೇರುವುದನ್ನೂ ಅವರು ವಿರೋಧಿಸಿದ್ದರು. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ದೇಶವನ್ನೇ ಜೈಲಾಗಿ ಪರಿವರ್ತಿಸಿತ್ತು ಎಂದು ಟೀಕಿಸಿದರು. ಈಗ ಕಾಂಗ್ರೆಸ್ ಮುಖಂಡರು ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ” ಎಂದು ಆಕ್ಷೇಪಿಸಿದರು.

Advertisements

“ಬಡ ಕುಟುಂಬದಿಂದ ಬಂದ ವ್ಯಕ್ತಿ 10 ವರ್ಷಕ್ಕೂ ಹೆಚ್ಚು ಕಾಲ ಪ್ರಧಾನಿ ಆಗಿ ಇರುವುದನ್ನು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ರಾಹುಲ್ ಗಾಂಧಿಯವರು ತಮ್ಮದೇ ಯುಪಿಎ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವಮಾನಿಸಿದ ವ್ಯಕ್ತಿ” ಎಂದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಮಾತನಾಡಿ, “ರಾಜ್ಯದ ಎಲ್ಲ 30 ಜಿಲ್ಲೆಗಳಿಂದ ಯುವ ಮೋರ್ಚಾ ಅಧ್ಯಕ್ಷರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನ ಕಾರ್ಯಕ್ರಮದ ಅಂಗವಾಗಿ ಸುಶಾಸನ ವಿಚಾರದಲ್ಲಿ ಡಾ.ಪಿ.ಸುಧಾಕರ ರೆಡ್ಡಿ ಅವರ ನೇತೃತ್ವದಲ್ಲಿ ಒಳ್ಳೆಯ ಕಾರ್ಯಕ್ರಮ ನಡೆದಿದೆ. ವರ್ಷ ಪೂರ್ತಿ ವಾಜಪೇಯಿಯವರ ಜನ್ಮ ಶತಮಾನೋತ್ಸವದ ಕಾರ್ಯಕ್ರಮ ಏರ್ಪಡಿಸುವ ಕುರಿತು ಚರ್ಚಿಸಲಾಗಿದೆ” ಎಂದರು.

“ಡಾ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಪಕ್ಷ ಯಾವ ರೀತಿ ಅವಮಾನ ಮಾಡಿದೆ. ಯಾವ ರೀತಿ ಅವರನ್ನು ಅಗೌರವದಿಂದ ನಡೆಸಿಕೊಂಡಿದೆ ಎಂಬ ಬಗ್ಗೆ ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದರು. ಇವತ್ತು ಕಾಂಗ್ರೆಸ್ ಪಕ್ಷ ಅಂಬೇಡ್ಕರರ ಜಪ ಮಾಡುತ್ತಿದೆ” ಎಂದು ಟೀಕಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X