ಮಂಡ್ಯ | ದ್ರಾವಿಡ ಕನ್ನಡಿಗರ ಒತ್ತಾಯಕ್ಕೆ ಮಣಿದು ಬೋಧನಾವಧಿ ಹೆಚ್ಚಿಸಿದ ಮಂಡ್ಯ ವಿಶ್ವವಿದ್ಯಾಲಯ

Date:

Advertisements

ಮಂಡ್ಯಕ್ಕೆ ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಇನ್ನಿತರೆ ವಿಶ್ವವಿದ್ಯಾಲಯಕ್ಕಿಂತ ಹೆಚ್ಚು ಸಮಯ ಕನ್ನಡ ವಿಷಯವನ್ನ ಬೋಧಿಸುವ ಬೋಧಿಸಬೇಕು. ಈ ಮ‌ೂಲಕ ಮಂಡ್ಯದ ಕನ್ನಡತನವನ್ನ ಮತ್ತಷ್ಟು ಗಟ್ಟಿಗೊಳಿಸಬೇಕು ಮತ್ತು ಕನ್ನಡತನದ ಹಿರಿಮೆಯನ್ನು ಎತ್ತಿ ಹಿಡಿಯಬೇಕು ಎಂದು ಮಂಡ್ಯದ ವಿಶ್ವ ವಿದ್ಯಾಲಯದ ಕುಲಪತಿಗಳನ್ನು ನಾವು ದ್ರಾವಿಡ ಕನ್ನಡಿಗರು ಸಂಚಾಲರಾದ ಅಭಿಗೌಡ ಒತ್ತಾಯಿಸದ್ದರು.

ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಒತ್ತಾಯಕ್ಕೆ ಮಣಿದ ಮಂಡ್ಯ ವಿಶ್ವ ವಿಶ್ವವಿದ್ಯಾಲಯದ ಕುಲಪತಿಗಳು ಬೋಧನಾ ಅವಧಿಯನ್ನು ಹೆಚ್ಚಿಸಿದ್ದಾರೆ. ಬೇರೆಲ್ಲಾ ವಿಶ್ವವಿದ್ಯಾಲಯಗಳಲ್ಲಿ ಬೋಧನಾ ಅವಧಿ ವಾರಕ್ಕೆ 6 ಗಂಟೆ ಇತ್ತು. ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಕಡಿಮೆ ಅವಧಿಯ ಬೋಧನಾ ಅವಧಿ ಇತ್ತು.

ತುಮಕೂರು, ಬೆಂಗಳೂರು, ಮಂಗಳೂರು, ರಾಣಿ ಚೆನ್ನಮ್ಮ ಮತ್ತಿತರ ವಿಶ್ವ ವಿದ್ಯಾಲಯಗಳಲ್ಲಿ 6 ಗಂಟೆಗಳ ಕಾಲ ಬೋಧಿನಾ ಅವಧಿ ಇದೆ. ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹಿರಿಮೆಯನ್ನು ಎತ್ತಿ ಹಿಡಿಯಲು ಪದವಿ ತರಗತಿಗಳಲ್ಲಿ ಕನ್ನಡ ವಿಷಯ ಬೋಧನಾ ಸಮಯವನ್ನು 5 ಗಂಟೆಗಳಿಂದ 7ಗಂಟೆಗೆ ಏರಿಸಬೇಕೆಂದು ಒತ್ತಾಯಿದ್ದರು.

Advertisements

ಇದನ್ನು ಓದಿದ್ದೀರಾ? ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ

ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ತಿಳಿಯಪಡಿಸುವುದೇನೆಂದರೆ, 2024-25ನೇ ಶೈಕ್ಷಣಿಕ ಸಾಲಿನಿಂದ ರಾಜ್ಯ ಶಿಕ್ಷಣ ನೀತಿ ಅನ್ವಯದಂತೆ ಕಲಾ ನಿಕಾಯದ ಪ್ರಮುಖ ವಿಷಯಗಳಿಗೆ ಬೋಧನಾವಧಿಯನ್ನು 05 ಗಂಟೆಗೆ ನಿಗಧಿಪಡಿಸಲಾಗಿರುತ್ತದೆ. ಆದರೆ ಉಲ್ಲೇಖ 01ರ ಸಿಂಡಿಕೇಟ್ ಸಭೆಯ ತೀರ್ಮಾನದಂತೆ ಹಾಗೂ ಕನ್ನಡ ಅಧ್ಯಯನ ಮಂಡಳಿ ಶಿಫಾರಸ್ಸು ಹಾಗೂ ಇತರ ವಿಶ್ವವಿದ್ಯಾಲಯಗಳ ತೀರ್ಮಾನದಂತೆ ಸದರಿ ವಿಷಯದ ಬಗ್ಗೆ 2024- 25ನೇ ಶೈಕ್ಷಣಿಕ ಸಾಲಿನ ಮೊದಲನೇ ಮತ್ತು ಎರಡನೇ ಸೆಮಿಸ್ಟರ್ಗೆ ಐಚ್ಚಿಕ ಕನ್ನಡ, ಅರ್ಥಶಾಸ್ತ್ರ ಹಾಗೂ ಸಮಾಜ ವಿಜ್ಞಾನಗಳ ವಿಷಯದ ಬೋಧನಾವಧಿಯನ್ನು 05 ಗಂಟೆಯಿಂದ 06 ಗಂಟೆಯವರೆಗೆ ಹೆಚ್ಚಿಸಲಾಗಿದೆ ಎಂದು ಕುಲಪತಿಗಳು ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X