ವಿಜಯನಗರ | ಮನರೇಗಾ ಯೋಜನೆ; ಸಮರ್ಪಕ ಅನುಷ್ಠಾನಕ್ಕೆ ‘ಗ್ರಾಕೂಸ’ ಒತ್ತಾಯ

Date:

Advertisements

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ಮನರೇಗಾ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಪರಿಹಾರ ಇಲ್ಲದೆ ಹೈರಾಣಾಗುತ್ತಿದ್ದೇವೆ. ಹಾಗಾಗಿ ಪ್ರತಿ ಸಮಸ್ಯೆಗೂ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಬಗೆಹರಿಸಬೇಕು. ಇಲ್ಲವೇ ಪರಿಹಾರ ಬಗೆಹರಿಸಲು ಸ್ಥಳೀಯ ಸರ್ಕಾರ ಗ್ರಾಮ ಪಂಚಾಯಿತಿಗೆ ಅಧಿಕಾರ ಕೊಡಬೇಕು” ಎಂದು ಆಗ್ರಹಿಸಿದರು.

“ಹಳೆ ಉದ್ಯೋಗ ಚೀಟಿ(ಜಾಬ್ ಕಾರ್ಡ್) ರದ್ದು ಮಾಡಿ ಹೊಸ ಜಾಬ್ ಕಾರ್ಡ್ ನೀಡುವುದು, ಆಧಾರ್ ಕಾರ್ಡ್ ಲಿಂಕ್ ಮಾಡುವುದು, ಇನ್ನಿತರ ಕೆಲಸಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಬೇಕು” ಎಂದು ಒತ್ತಾಯಿಸಿದರು.

Advertisements

ತಾಲೂಕು ಗ್ರಾಕೂಸ ಕಾರ್ಯಕರ್ತೆ ಅಕ್ಕಮ್ಮ ಮರಬ್ಬಿ ಹಾಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮನರೇಗಾ ಬಜೆಟ್ ಅತಿ ಕಡಿಮೆ ಇದೆ. ಕೆಲಸ ಮಾಡಿದ 2 ತಿಂಗಳ ಕೂಲಿ ಹಣದಲ್ಲಿ ಒಂದು ವಾರ ಹಾಗೂ ಎರಡು ವಾರದ ಹಣ ಖಾತೆಗೆ ಜಮಾ ಆಗಿದ್ದು , ಕಾರ್ಮಿಕರಿಗೆ 15 ದಿನಗಳ ಒಳಗಾಗಿ ಹಣ ಪಾವತಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರಂತರ 100 ದಿನಗಳ ಕೆಲಸಕ್ಕೆ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸುವಂತೆ ಬಜೆಟ್ ಹಣವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಸದಂತೆ ರೈತ ಸಂಘ ಆಗ್ರಹ

“200 ಮಾನವ ದಿನಗಳ ಕೂಲಿ ಕೊಡಬೇಕು. ಕೂಲಿ ₹600ಕ್ಕೆ ಹೆಚ್ಚಳ ಮಾಡಬೇಕು. ಕೂಲಿ ಕೆಲಸ ಮಾಡುವಾಗ ಕಾರ್ಮಿಕರು ಮೃತಪಟ್ಟರೆ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಬೇಕು” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X