ಧಾರವಾಡ | ಸಾಮಾಜಿಕ ಬದ್ಧತೆ ಮತ್ತು ಜೀವನದ ಬದ್ಧತೆ ವಿರುದ್ಧಾರ್ಥಕ ಪದಗಳಲ್ಲ: ಡಾ. ವಿನಯಾ ವಕ್ಕುಂದ

Date:

Advertisements

ಸಾಮಾಜಿಕ ಬದ್ಧತೆ ಮತ್ತು ಜೀವನದ ಬದ್ಧತೆ ಎನ್ನುವುದು ವಿರುದ್ಧಾರ್ಥಕ ಶಬ್ಧಗಳಲ್ಲ ಎಂದು ಖ್ಯಾತ ಸಾಹಿತಿ ಹಾಗೂ ಮಹಿಳಾಪರ ಚಿಂತಕಿ ಡಾ.‌ವಿನಯಾ‌ ವಕ್ಕುಂದ ಧಾರವಾಡದ ಸಮುದಾಯ ಹಾಗೂ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿದ್ಯಾವರ್ಧಕ ಸಂಘ, ರಾ.ಹ. ದೇಶಪಾಂಡೆ ಭವನದಲ್ಲಿ ಜೋಸೆಫ್ ಮಲ್ಲಾಡಿ ರಚಿತ ಸುಡುವ ಕನಸುಗಳು ಎಂಬ ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಬದ್ಧತೆ ಬಗ್ಗೆ ಮಾತಾಡುವುದೇ ತಪ್ಪೇನೋ? ಅಪರಾಧವೇನೋ? ಸಾಮಾಜಿಕ ಬದ್ಧತೆ ಇರುವುದು ಒಳ್ಳೆಯ ಕವಿತೆ ಆಗಲಾರದೇನೋ? ಎನ್ನುವಂತ ತೊಳಲಾಟಕ್ಕೆ ಈಗಿನ ಕವಿಗಳು ಬಿದ್ದಿದ್ದಾರೆ. ಸಾಮಾಜಿಕ ಬದ್ಧತೆ ಮತ್ತು ಜೀವನ ಬದ್ಧತೆ ಎರಡೂ ಬೇರೆ ಬೇರೆಯಲ್ಲ. ಎಷ್ಟೋ ಸಲ ದೊಡ್ಡ ದೊಡ್ಡ ಕವಿಗಳು ಕೂಡ ನಾನು ಬದ್ಧ ಕವಿಯಲ್ಲ, ಆದರೆ ನಾನು ಜೀವನಕ್ಕೆ ಬದ್ಧನಾಗಿದ್ದಿನಿ ಎಂದು ಹೇಳುತ್ತಾರೆ. ಅಂದರೆ ಧಮನಿತರ ಪರವಾಗಿದ್ದೇನೆ ಎಂದರ್ಥವಲ್ಲವೇ? ನಾನೊಬ್ಬ ಬದುಕಬೇಕೆನ್ನುವ ಅವಕಾಶವಾದಿತನವನ್ನು ಕಳೆದುಕೊಳ್ಳದೇ ಮನುಷ್ಯನಾಗುವ ಪ್ರಕ್ರಿಯೆ.

ಸಮಾಜದಲ್ಲಿ ಮೌನವು ಕೆಡಕನ್ನು ಬೆಳೆಸುತ್ತಲೇ ಇರುತ್ತದೆ. ನಾನು ಕೂಡ ತಪ್ಪಿತಸ್ಥನೆ ಎನ್ನುವ ಪ್ರಶ್ನೆ ತುಂಬಾ ತೀವ್ರವಾಗಿ ಇಲ್ಲಿ ಹಲವಾರು ಕವನಗಳಲ್ಲಿ ವ್ಯಕ್ತವಾಗಿದೆ. ವರ್ತಮಾನ ಎದುರಿಟ್ಟುಕೊಂಡು ಕಾವ್ಯವನ್ನು ರಚನೆ ಮಾಡುವುದು ಬಹಳ ಸವಾಲಿನ ಕೆಲಸ, ಆ ಸವಾಲನ್ನು ಕವಿ ಜೋಸೆಫ್ ತುಂಬಾ ಮುಖ್ಯವಾದ ಧಾತುವಿನಲ್ಲಿ ಎದುರಿಸಿದ್ದಾರೆ. ಸಮಾಜದ ಪರವಾಗಿ ನಿಂತು ಕೆಲಸಮಾಡುವ ವ್ಯಕ್ತಿ, ರಾಜ್ಯಮಟ್ಟದ ಪ್ರಶಸ್ತಿಗಳು ಬಂದರೂ ಕೂಡ ಅವರಲ್ಲಿರುವ ವಿನಮ್ರತೆ, ಧನ್ಯತೆ ಕಡಿಮೆ ಆಗುವುದಿಲ್ಲ ಎಂದರು.

Advertisements

ಕಲಘಟಗಿಯ ಗುಡ್ ನ್ಯೂಸ್ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ. ಬಿ.ಜಿ. ಬಿರಾದಾರ ಮಾತನಾಡಿ, ಮಲ್ಲಾಡಿಯವರಿಗಿರುವ ಸಾಮಾಜಿಕ ಕಳಕಳಿಯೇ ಅವರನ್ನು ಉತ್ತಮ ಕವಿಯಾಗಿಸಿದೆ ಎಂದರು. ನ್ಯಾಯವಾದಿ ಹಾಗೂ ಚಿಂತಕ ಅಮೋಘಸಿದ್ಧ ಮಾ. ಖೋಬ್ರಿ ಅವರು ವಿವಿಧ ಮಗ್ಗಲುಗಳ ಅನುಭವಗಳನ್ನು ಚಿಂತನೆಮಾಡಿ ಅನುಭವದಿಂದ ಬಂದಂತಹ ಅತ್ಯುತ್ತಮ ಸಾಹಿತ್ಯವನ್ನು ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಿಲಿಂಡರ್ ಸ್ಫೋಟ: 10 ಮಂದಿಗೆ ಗಾಯ; ಓರ್ವ ವೃದ್ಧ ಗಂಭೀರ

ಸಮುದಾಯ ಸಂಘದ ಅಧ್ಯಕ್ಷ ಬಿ.ಐ. ಈಳಿಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೀಗೀ ಪದ ಕಲಾವಿದರಾದ ಯಲ್ಲಪ್ಪ ತಿರ್ಲುಕೊಪ್ಪ ಮತ್ತು ಸಂಗಡಿಗರಿಂದ ಗೀತಗಾಯನ ನಡೆಯಿತು. ಜೋಸೆಫ್ ಮಲ್ಲಾಡಿಯವರ ಎರಡು ಕವನಗಳನ್ನು ಹೇಮಂತ ಲಮಾಣಿ ಹಾಗೂ ಸಂಗಡಿಗರು ಶಾಸ್ತ್ರೀಯ ಸಂಗೀತದಲ್ಲಿ ಪ್ರಸ್ತುತ ಪಡಿಸಿದರು.

ಸಮುದಾಯದ ಕಾರ್ಯದರ್ಶಿ ಈರಣ್ಣ ಐನಾಪೂರ ಸ್ವಾಗತಿಸಿದರು. ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಬಿ. ಹೆಚ್. ಕುರಿ ನಿರೂಪಿಸಿದರು. ಭೂಮಿ ಪತ್ತಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X