ವಿದ್ಯಾರ್ಥಿ ವೇತನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ: ಎಚ್‌ ಸಿ ಮಹದೇವಪ್ಪ

Date:

Advertisements

ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲ ಅಧಿಕಾರಿಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ ಮಹದೇವಪ್ಪ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡದೇ ತಮ್ಮದೇ ದುರಾಡಳಿತದಲ್ಲಿ ಮುಳುಗಿದ್ದ ಈ ಹಿಂದಿನ ಸರ್ಕಾರದ ಅರಾಜಕತೆಯನ್ನು ಖಂಡಿಸುತ್ತಾ ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿ ವೇತನ ದೊರೆಯುವಂತೆ ಎಲ್ಲ ಅಧಿಕಾರಿಗಳಿಗೂ ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು” ಎಂದಿದ್ದಾರೆ.

“ವಿದ್ಯಾರ್ಥಿ ವೇತನದ ವಿಷಯದಲ್ಲಿ ತೊಂದರೆ ಉಂಟು ಮಾಡಿದರೆ ಅದನ್ನು ವಿದ್ಯಾರ್ಥಿಗಳು ನಮ್ಮ ಗಮನಕ್ಕೆ ತರಬೇಕು ಎಂದು ಈ ಮೂಲಕ ವಿನಂತಿಸುತ್ತೇನೆ ಹಾಗೂ ಕಠಿಣ ಶ್ರಮದ ಮೂಲಕ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಮನದುಂಬಿ ಹಾರೈಸುತ್ತೇನೆ” ಎಂದು ಶುಭಕೋರಿದ್ದಾರೆ.

Advertisements

“ಕಳೆದ ಸರ್ಕಾರದ ಅವಧಿಯಲ್ಲಿ ಬಡ ಮಕ್ಕಳು ಶುಲ್ಕ ಪಾವತಿಸದೇ ಇದ್ದರೆ ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅಡ್ಡಿ ಮಾಡಲಾಗುತ್ತಿತ್ತು. ಆದರೆ ಶಿಕ್ಷಣ ಎನ್ನುವುದು ಪ್ರಾಥಮಿಕವಾದ ಹಕ್ಕಾಗಿದ್ದು, ಶುಲ್ಕದ ನೆಪವೊಡ್ಡಿ ಯಾವುದೇ ವಿದ್ಯಾರ್ಥಿಗೂ ಯಾರೂ ಶಿಕ್ಷಣದ ಸೌಲಭ್ಯವನ್ನು ವಂಚಿಸುವಂತಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X