ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂಟಿ ವಾಸುದೇವನ್ ನಾಯರ್ ನಿಧನ

Date:

Advertisements

ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

91 ವರ್ಷದ ವಾಸುದೇವನ್ ಅವರು ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ತಜ್ಞರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು.

ಇದನ್ನು ಓದಿದ್ದೀರಾ? ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

Advertisements

ಎಂ ಟಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅವರು ಒಂಬತ್ತು ಕಾದಂಬರಿಗಳನ್ನು, 19 ಸಣ್ಣ ಕಥೆಗಳ ಸಂಗ್ರಹಗಳನ್ನು ಬರೆದಿದ್ದಾರೆ. ಆರು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸುಮಾರು 54 ಚಿತ್ರಕಥೆಗಳನ್ನು ಬರೆದಿದ್ದಾರೆ. ಏಳು ದಶಕಗಳ ವೃತ್ತಿಜೀವನದಲ್ಲಿ ಹಲವಾರು ಪ್ರಬಂಧಗಳು ಮತ್ತು ಆತ್ಮಚರಿತ್ರೆಗಳನ್ನು ಪ್ರಕಟಿಸಿದ್ದಾರೆ.

ಅವರ ಕಾದಂಬರಿ ನಾಲುಕೆಟ್ (ಪೂರ್ವಜರ ಮನೆ) ಅತೀ ಜನಪ್ರಿಯವಾಗಿದೆ. ಮಲಯಾಳಂ ಸಾಹಿತ್ಯ ಕ್ಷೇತ್ರದಲ್ಲಿ ಶ್ರೇಷ್ಠ ಕೃತಿ ಎಂದು ಪರಿಗಣಿಸಲಾಗಿದೆ. ಅಸುರವಿತ್ತು, ಮಂಜು ಮತ್ತು ಕಾಲಂ ಸೇರಿದಂತೆ ಹಲವು ಕೃತಿಗಳನ್ನು ಬರೆದಿದ್ದಾರೆ.

ಎಂಟಿ ಅವರ ಸಾಹಿತ್ಯಿಕ ಸಾಧನೆಗೆ ಅವರಿಗೆ 1995ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಯಲಾರ್ ಪ್ರಶಸ್ತಿ, ವಲ್ಲತ್ತೋಲ್ ಪ್ರಶಸ್ತಿ, ಎಳುತಚ್ಚನ್ ಪ್ರಶಸ್ತಿ, ಮಾತೃಭೂಮಿ ಸಾಹಿತ್ಯ ಪ್ರಶಸ್ತಿ, ಮತ್ತು ಓ ಎನ್. ಸಾಹಿತ್ಯ ಪ್ರಶಸ್ತಿ ಲಭಿಸಿದೆ. 2005ರಲ್ಲಿ ಎಂಟಿ ಅವರಿಗೆ ಪದ್ಮಭೂಷಣ ಗೌರವ ಸಂದಿದೆ.

ಇದನ್ನು ಓದಿದ್ದೀರಾ? ಹರಿಯಾಣ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ನಿಧನ

2013ರಲ್ಲಿ ಮಲಯಾಳಂ ಚಿತ್ರರಂಗದಲ್ಲಿ ಜೀವಮಾನದ ಸಾಧನೆಗಾಗಿ ಜೆ ಸಿ ಡೇನಿಯಲ್ ಪ್ರಶಸ್ತಿಯನ್ನು ಪಡೆದರು. ಮತ್ತು 2022ರಲ್ಲಿ ಅವರು ಕೇರಳ ಸರ್ಕಾರದಿಂದ ಉದ್ಘಾಟನಾ ಕೇರಳ ಜ್ಯೋತಿ ಪ್ರಶಸ್ತಿಯನ್ನು ಪಡೆದರು. ಹಲವಾರು ವರ್ಷಗಳ ಕಾಲ ಮಾತೃಭೂಮಿ ವಾರಪತ್ರಿಕೆಯ ಸಂಪಾದಕರಾಗಿಯೂ ಎಂ ಟಿ ಸೇವೆ ಸಲ್ಲಿಸಿದ್ದಾರೆ.

ಎಂಟಿ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X