ಬೀದರ್ | ಆನ್‌ಲೈನ್ ಗೇಮಿಂಗ್‌ : ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

Date:

Advertisements

ಆನ್‌ಲೈನ್ ಗೇಮಿಂಗ್‌ನಲ್ಲಿ‌ ಹಣ ಕಳೆದುಕೊಂಡ ಯುವಕನೊಬ್ಬ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾಲ್ಕಿ ತಾಲ್ಲೂಕಿನ ಮೆಹಕರ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮದ ಸಮೀಪ ಜ್ಯೋತಿ ತಾಂಡಾ ಬಳಿ ಘಟನೆ ಜರುಗಿದ್ದು, ಹುಲಸೂರ ತಾಲ್ಲೂಕಿನ ಬೇಲೂರ ಗ್ರಾಮದ ವಿಜಯಕುಮಾರ್‌ ಹೊಳ್ಳೆ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ.

ಡಿ. ಫಾರ್ಮ್‌ ಪದವೀಧರನಾದ ಯುವಕ ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ ಆನ್‌ಲೈನ್ ಗೇಮಿಂಗ್‌ ವ್ಯಾಮೋಹಕ್ಕೆ ಸಿಲುಕಿ ₹1.50 ಲಕ್ಷ ಹಣ ಕಳೆದುಕೊಂಡಿದ್ದ. ಎರಡ್ಮೂರು ದಿನಗಳಲ್ಲಿ ಹಣ ಕೊಡುತ್ತೇವೆ ಎಂದು ಪೋಷಕರು ಹೇಳಿದ್ದರು. ಆದರೆ ಸಾಲಕ್ಕೆ ಹೆದರಿದ ಯುವಕ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Advertisements

ವಿಜಯಕುಮಾರ್ ಈ ಹಿಂದೆ ಕೂಡ ಆನ್‌ಲೈನ್ ಗೇಮಿಂಗ್‌ನಲ್ಲಿ ₹7-8 ಲಕ್ಷ ಹಣ ಕಳೆದುಕೊಂಡಿದ್ದ, ಅದನ್ನು ಪೋಷಕರು ತೀರಿಸಿದ್ದಾರೆ ಎಂಬ ಮಾಹಿತಿ ಇದೆ. ಮತ್ತೆ ಈಗ ಆನ್‌ಲೈನ್ ಆಟದಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಮೆಹಕರ್‌ ಠಾಣೆ ಪಿಎಸ್‌ಐ ಶಿವಕುಮಾರ್‌ ಬಳತೆ ಈದಿನ.ಕಾಮ್‌ ಗೆ ತಿಳಿಸಿದ್ದಾರೆ.

ಶೇ.80% ಸುಟ್ಟ ಗಾಯಗಳಿಂದ ನರಳುತ್ತಿದ್ದ ಯುವಕನನ್ನು ಸ್ಥಳೀಯರು ಭಾಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೀದರ್ ಬ್ರಿಮ್ಸ್‌ಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯುವಜನರ ಜೀವಕ್ಕೆ ಕುತ್ತು ತರುತ್ತಿರುವ ಮೋಸದಾಟ: ಆನ್‌ಲೈನ್ ಗೇಮಿಂಗ್‌ ಬಗ್ಗೆ ಇರಲಿ ಎಚ್ಚರ

ಮೆಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X