ಡಿಎಂಕೆ ಸರ್ಕಾರವನ್ನು ಕಿತ್ತೊಗೆಯುವವರೆಗೆ ಪಾದರಕ್ಷೆ ಧರಿಸಲ್ಲ ಎಂದ ಅಣ್ಣಾಮಲೈ

Date:

Advertisements

ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ಕಿರುಕುಳ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯನ್ನು ವಿರೋಧಿಸಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಅವರು,“ಎಫ್‌ಐಆರ್ ಹೇಗೆ ಸಾರ್ವಜನಿಕ ಡೊಮೇನ್ ಅನ್ನು ಪ್ರವೇಶಿಸಿತು? ಎಫ್‌ಐಆರ್ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದೀರಿ.ಇಂತಹ ಎಫ್‌ಐಆರ್ ಬರೆದು ಸೋರಿಕೆ ಮಾಡಿದ್ದಕ್ಕೆ ಪೊಲೀಸರು ಮತ್ತು ಡಿಎಂಕೆಗೆ ನಾಚಿಕೆಯಾಗಬೇಕು,’’ ಎಂದು ಕಾನೂನು ಸಚಿವ ಎಸ್ ರೇಗುಪತಿ ವಿರುದ್ಧ ವಾಗ್ದಾಳಿ ನಡೆಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬರಿ ಮಸೀದಿ ಕೆಡವಿದಾಗಲೇ ‘ಸಾಮರಸ್ಯ’ ಸಮಾಧಿಯಾಗಿತ್ತಲ್ಲವೇ?

ನಿರ್ಭಯಾ ನಿಧಿ ಎಲ್ಲಿಗೆ ಹೋಯಿತು? ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾ ಏಕೆ ಇರಲಿಲ್ಲ?” ಎಂದು ಅವರನ್ನು ಪ್ರಶ್ನಿಸಿದ್ದಾರೆ.“ಇನ್ನು ಮುಂದೆ ಸಾರ್ವಜನಿಕ ಪ್ರತಿಭಟನೆಗಳಿಲ್ಲ, ಏಕೆಂದರೆ ನೀವು ಪ್ರತಿಭಟನೆಗೆ ಸೇರುವ ಎಲ್ಲ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಮದುವೆ ಮಂಟಪದಲ್ಲಿ ಇರಿಸುತ್ತೀರಿ. ಹೀಗಾಗಿ ನಾಳೆಯಿಂದ ಕಾರ್ಯಕರ್ತರು ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ,’’ ಎಂದು ಅವರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X