ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

Date:

Advertisements

ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್ ಬಳಿ ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿಕೊಂಡು ತಿರುಗಾಡಿರುವ ಘಟನೆ ನಡೆದಿದೆ. ನಾಯಿಯು ಶಾಲೆಯ ಆವರಣದೊಳಗೆ ಬಂದಿದ್ದು ಭದ್ರತಾ ಸಿಬ್ಬಂದಿ ಬೆದರಿಸಿದಾಗ ಅರ್ಧಂಬರ್ಧ ಇರುವ ನವಜಾತ ಶಿಶುವಿನ ದೇಹವನ್ನು ಬಿಟ್ಟು ಓಡಿಹೋಗಿದೆ.

ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಬಡಾವಣೆ ಪೊಲೀಸ್ ಠಾಣೆ ಅಧಿಕಾರಿಗಳು, ಸಿಬ್ಬಂದಿಗಳು ತನಿಖೆ ಕೈಗೊಂಡಿದ್ದಾರೆ. ನಾಯಿ ಕಚ್ಚಿ ಹಿಡಿದಿದ್ದ ದೇಹವು ಅರ್ಧ ಮಾತ್ರ ಇದ್ದು ಇನ್ನರ್ಧ ಕೆಳಗಿನ ಭಾಗವನ್ನು ನಾಯಿ ತಿಂದಿರಬಹುದು ಎಂದು ಶಂಕಿಸಲಾಗಿದೆ.

Advertisements

“ಮಗು ಎರಡರಿಂದ ಮೂರು ದಿನಗಳ ಹಿಂದೆ ಜನಿಸಿರಬಹುದೆಂದು ಅಂದಾಜಿಸಲಾಗಿದೆ. ಮೃತಪಟ್ಟ ಮಗುವನ್ನು ಅಥವಾ ಜೀವಂತ ಶಿಶುವನ್ನು ಪೋಷಕರೇ ಎಲ್ಲೋ ಎಸೆದು ಹೋಗಿರಬಹುದು. ಇದರಿಂದ ಮಗುವಿನ ದೇಹ ನಾಯಿಗಳಿಗೆ ಸಿಕ್ಕಿದೆ. ನಂತರ ನಾಯಿಯ ಬಾಯಿಗೆ ಆಹಾರವಾಗಿ ದೇಹ ಛಿದ್ರವಾಗಿರಬಹುದು” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

“ಶಿಶುವಿನ ಉಳಿದ ದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಶಿಶುವಿನ ಕೆಳಗಿನ ಅರ್ಧಭಾಗ ಇಲ್ಲದಿರುವುದರಿಂದ ಮಗು ಗಂಡು ಅಥವಾ ಹೆಣ್ಣೋ ಎಂದು ಗುರುತಿಸಲು ಸಾಧ್ಯವಾಗಿಲ್ಲ. ಲಿಂಗ, ಗುರುತು ಪತ್ತೆಗೆ ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ, ಡಿಎನ್ಎ ವರದಿ ಮತ್ತು ತನಿಖೆ ವರದಿ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ.‌ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ” ಎಂದು ಬಡಾವಣೆ ಠಾಣೆ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X