ಧಾರವಾಡ | ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕೌಶಲ್ಯದ ಅವಶ್ಯವಿದೆ: ಡಾ. ಶಂಭು ಹೆಗಡ್ಯಾಳ

Date:

Advertisements

ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಬದುಕಿನ ಕೌಶಲ್ಯಗಳನ್ನು ಕಲಿಸಬೇಕಾಗಿದೆ. ನಾವು ಪ್ರತಿ ದಿನ ಪ್ರಚಲಿತ ವಿದ್ಯಮಾನಗಳನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳಿಗೆ ಬದುಕಿನ ಭರವಸೆಯನ್ನು ತುಂಬಬೇಕೆಂದು ಧಾರವಾಡದ ಸಿ.ಎಸ್.ಐ ಕಾಲೇಜಿನ ಪ್ರಾಧ್ಯಾಪಕ ಡಾ. ಶಂಭು ಹೆಗಡ್ಯಾಳ ಹೇಳಿದರು.

ನಗರದ ಅಂಜುಮನ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡ “ಎಂಪ್ಲಾಯ್‌ಮೆಂಟ್ ಎಂಪ್ಲಾಯ್ದಿಲಿಟಿ ಆ್ಯಂಡ್ ಹೈಯರ್ ಎಜ್ಯುಕೇಶನ್ ಇನ್ ಇಂಡಿಯಾ: ದಿ ಮಿಸ್ಸಿಂಗ್ ಲಿಂಕ್” ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭದ ಅತಿಥಿಗಳಾಗಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ಓದುವುದರಿಂದ ಅವರಿಗೆ ಮುಂದಿನ ಬದುಕಿನ ಬಗ್ಗೆ ಭರವಸೆಯನ್ನು ತುಂಬುತ್ತಾ ಪಠ್ಯೆಯನ್ನು ಬೋಧಿಸಬೇಕು ಎಂದರು.

ಮೊದಲನೆ ವಿಚಾರ ಸಂಕಿರಣದ ಅವಧಿಯಲ್ಲಿ ಡಾ. ಎ.ಎಸ್. ಶಿರಾಳಶೆಟ್ಟಿ, ಡಾ. ಬಸವರಾಜ ತಲ್ಲೂರ, ಪ್ರೊ. ಅಬ್ದುಲ್ ಮತೀನ್ ಎಮ್. ಬಿಡಿವಾಲೆ, ಎನ್.ಹೆಚ್. ಪಾಟೀಲ್ ಭಾಗವಹಿಸಿದರು. ಡಾ. ಬಿ.ಹೆಚ್. ನಾಗೂರ್. ಡಾ. ಶ್ಯಾಮಲಾ ರತ್ನಾಕರ, ಪ್ರೊ. ಮೋಹನ್ ಸಿದ್ಧಾಂತಿ. ರವೀಂದ್ರ ದ್ಯಾಬೇರಿ, ಅಫ್ತಾಬ್ ಬಾಯ್ ಅಂತಿಮ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

Advertisements

ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಹಗೀರದಾರ್, ಪ್ರಾಚಾರ್ಯ ಡಾ. ಎನ್.ಎಮ್. ಮಕಾಂದಾರ, ಕೆಯುಡಿ ಪ್ರಾಧ್ಯಾಪಕರು ಪ್ರೊ. ಎ.ಎಸ್. ಶಿರಾಳಶೆಟ್ಟಿ, ಡಾಎ.ಎಸ್. ಬಳ್ಳಾರಿ, ಡಾ ಆಯ್.ಎ.ಮುಲ್ಲಾ, ಡಾ.ಎನ್.ಬಿನಾಲತವಾಡ, ಮೇಟಿ ರುದ್ರೇಶ ಮತ್ತು ನಾಡಿನ ಅನೇಕ ವಿದ್ವಾಂಸರು, ಸಂಶೋಧಕರು, ಕಾಲೇಜಿನ ಪ್ರಾಧ್ಯಾಪಕ ವೃಂದ, ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X