ನಿತೀಶ್ – ವಾಷಿಂಗ್ಟನ್‌ ಶತಕದ ಜೊತೆಯಾಟ: ಟೀಂ ಇಂಡಿಯಾ ಫಾಲೋ ಆನ್‌ನಿಂದ ಪಾರು

Date:

Advertisements

ಟೀಂ ಇಂಡಿಯಾ ಯುವ ಆಟಗಾರರಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್‌ ಸುಂದರ್‌ ಅವರ 8ನೇ ವಿಕೆಟ್‌ಗೆ ಶತಕದ ಜೊತೆಯಾಟದಿಂದ ಟೀಂ ಇಂಡಿಯಾ ಬಾರ್ಡರ್‌ – ಗವಾಸ್ಕರ್ ಟ್ರೋಫಿಯ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಫಾಲೋ ಆನ್‌ನಿಂದ ಪಾರಾಗಿದೆ.

ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನ ಮೂರನೆ ದಿನದಾಟದಲ್ಲಿ ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಉತ್ತಮ ಆಟವಾಡಿ ಮುರಿಯದ 8ನೇ ವಿಕೆಟ್‌ ನಷ್ಟಕ್ಕೆ 193 ಎಸೆತಗಳಲ್ಲಿ 105 ರನ್‌ ಕಲೆ ಹಾಕಿದರು.

ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ನಿತೀಶ್ , 119 ಚೆಂಡುಗಳಲ್ಲಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ ಅಜೇಯ 85 ರನ್ ಗಳಿಸಿ, ಶತಕದತ್ತ ದಾಪುಗಾಲು ಹಾಕಿದ್ದಾರೆ. ಇವರೊಂದಿಗೆ ರಕ್ಷಣಾತ್ಮಕ ಆಟವಾಡಿದ ವಾಷಿಂಗ್ಟನ್ ಸುಂದರ್, 115 ಎಸೆತಗಳಲ್ಲಿ ಒಂದು ಬೌಂಡರಿ ನೆರವಿನಿಂದ ಅಜೇಯ 40 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

ಭಾರತವು ಟೀ ವಿರಾಮದ ವೇಳೆಗೆ 98 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 326 ರನ್‌ ಗಳಿಸಿದೆ. ಆಸೀಸ್‌ನ ಮೊದಲ ಇನಿಂಗ್ಸ್‌ ಸರಿಗಟ್ಟಲು 148 ರನ್‌ ಗಳಿಸಬೇಕಿದೆ. ಎರಡನೇ ದಿನ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಫಾಲೋ ಆನ್ ಭೀತಿಗೆ ಒಳಗಾಗಿದ್ದ ಟೀಂ ಇಂಡಿಯಾ ಇಂದು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ಬಹುಬೇಗನೆ ಕಳೆದುಕೊಂಡಿತು.

ಆದರೆ ಈ ಸಂದರ್ಭದಲ್ಲಿ ಅಪಾಯದಿಂದ ಪಾರು ಮಾಡಿದವರು ಆಲ್‌ರೌಂಡರ್‌ಗಳಾದ ನಿತೀಶ್ ಕುಮಾರ್ ರೆಡ್ಡಿ (ಅಜೇಯ 85) ಹಾಗೂ ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯ ತಂಡದ ಪರ ಕೇವಲ 49 ರನ್ ನೀಡಿ ಮೂರು ಪ್ರಮುಖ ವಿಕೆಟ್ ಗಳನ್ನು ಕಿತ್ತ ಸ್ಕಾಟ್ ಬೋಲಂಡ್ ಯಶಸ್ವಿ ಬೌಲರ್ ಆದರು.ಉಳಿದಂತೆ ಪ್ಯಾಟ್ ಕಮಿನ್ಸ್ 2 ವಿಕೆಟ್ ಹಾಗೂ ನಥಾನ್ ಲಿಯೋನ್ ಒಂದು ವಿಕೆಟ್ ಪಡೆದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X