ಕೋಲಾರ | ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆ ಶಾಲೆ ಕಾಲೇಜುಗಳಿಗೆ ರಜೆ; ಬೆಂಗಳೂರು ಉತ್ತರ ವಿವಿಯಲ್ಲಿ ಪರೀಕ್ಷೆ!

Date:

Advertisements

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರವು ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ.

ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರಿನ ಕೆ ಆರ್‌ ಪುರ ಬಳಿಯ ಎರಡು ಕಾಲೇಜುಗಳಲ್ಲಿ ಸ್ನಾತಕ ಪದವಿ(ಯುಜಿ)ಯ ಬಿಬಿಎ ಕೋರ್ಸ್‌ನ ಪ್ರವಾಸೋದ್ಯಮ ಹಾಗೂ ಹೋಟೆಲ್‌ ಮ್ಯಾನೇಜ್‌ಮೆಂಟ್‌ಗೆ ಸಂಬಂಧಿಸಿದ ವಿಷಯಗಳ ಪರೀಕ್ಷೆ ನಡೆಸಲಾಗಿದೆ.

ಮನಮೋಹನ್ ಸಿಂಗ್‌ ನಿಧನದ ಗೌರವಾರ್ಥ ಸರ್ಕಾರಿ ರಜೆ ಇದ್ದರೂ ಪರೀಕ್ಷೆ ನಡೆಸಿದ್ದು, ಅಗೌರವ ತೋರಲಾಗಿದೆ ಎಂದು ಕೆಲ ಪೋಷಕರು ಹಾಗೂ ಉಪನ್ಯಾಸಕರು ಆರೋಪಿಸಿದ್ದಾರೆ.

Advertisements

ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ(ಮೌಲ್ಯಮಾಪನ) ಪ್ರೊ. ಕೆ ತಿಪ್ಪೇಸ್ವಾಮಿ, “ಪ್ರಶ್ನೆ ಪತ್ರಿಕೆಯನ್ನು ಗುರುವಾರವೇ ಯುಯುಸಿಎಂಎಸ್‌ ಆನ್‌ಲೈನ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಿಯೂ ಆಗಿತ್ತು. ಹೀಗಾಗಿ, ಶುಕ್ರವಾರ ಪರೀಕ್ಷೆ ನಡೆಸಲೇಬೇಕಾದ ಅನಿವಾರ್ಯ ಸೃಷ್ಟಿಯಾಯಿತು. ಎರಡು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಸುಮಾರು 40 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಲೇಖನಿಯನ್ನು ಪರಿಣಾಮಕಾರಿಯಾಗಿ ಬಳಸಿ ದೇಶ ಮುನ್ನಡೆಸಿದ ಡಾ.ಸಿಂಗ್: ಮಾಜಿ ಶಾಸಕ ಕೆ ಎಸ್ ಕಿರಣಕುಮಾರ್

ಬೇರೆ ವಿವಿಗಳಲ್ಲಿ ಮುಂದೂಡಿಕೆ: “ಶುಕ್ರವಾರ(ಡಿ.27)ದಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಮುಂದಕ್ಕೆ ಹಾಕಿವೆ. ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ಈ ಸಂಬಂಧ ವೆಬ್‌ಸೈಟ್‌ನಲ್ಲೂ ಪ್ರಕಟಣೆ ನೀಡಿದೆ. ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆ ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂಬುದಾಗಿಯೂ ಆಯಾಯ ವಿಶ್ವವಿದ್ಯಾಲಯಗಳ ಕುಲಸಚಿವರು ತಿಳಿಸಿದ್ದಾರೆ” ಎಂದು ಉಪನ್ಯಾಸಕರೊಬ್ಬರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X