ಧಾರವಾಡ | ನಾಳೆ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

Date:

Advertisements

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ತುಂಬಿದ ನೆನಪಿನಲ್ಲಿ ಈದಿ‌ನ.ಕಾಮ್ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ಎಂಬ ಶೀರ್ಷಿಕೆಯ ವಿಶೇಷ ಸಂಚಿಕೆಯನ್ನು ಡಿಸೆಂಬರ್ 29ರಂದು ಬಿಡುಗಡೆಗೊಳಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ಈದಿನ ತಂಡದ ವತಿಯಿಂದ ಧಾರವಾಡದ ನಿವೃತ್ತ ನೌಕರರ ಭವನದಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಲೇಖಕರು, ಸಾಹಿತಿಗಳು, ಸಾಮಾಜಿಕ, ರಾಜಕೀಯ ವಿಶ್ಲೇಶಕರನ್ನು ಒಳಗೊಂಡು ಸುಮಾರು 60 ಬರಹಗಾರರ ವಿವಿಧ ಲೇಖನಗಳನ್ನು ವಿಶೇಷ ಸಂಚಿಕೆ ಒಳಗೊಂಡಿದೆ. ಒಟ್ಟಾರೆಯಾಗಿ 50 ವರ್ಷಗಳಲ್ಲಿ ನಡೆದ ಏರು ಪೇರು, ಬೆಳವಣಿಗೆ, ದಲಿತರು, ಮಹಿಳೆಯರು, ಹೋರಾಟ ಇತ್ಯಾದಿ ಬರಹಗಳನ್ನು ಈ ವಿಶೇಷ ಸಂಚಿಕೆಯಲ್ಲಿ ಓದಬಹುದು.

ವಿಶೇಷ ಸಂಚಿಕೆಯನ್ನು ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಡಾ. ಚಂದ್ರ ಪೂಜಾರಿ ಬಿಡುಗಡೆ ಮಾಡಲಿದ್ದು, ಈದಿನ ನ್ಯೂಸ್ ಆ್ಯಪ್ ಅನ್ನು ಕಳಸಾ ಬಂಡೂರಿ ರೈತ ಹೊರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಬಿಡುಗಡೆಗೊಳಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಬಸವಥ್ವ ಪ್ರಚಾರಕ ಮಲ್ಲೇಸ್ ಹಳಕಟ್ಟಿ ಮಾತಾನಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ವಹಿಸಲಿದ್ದಾರೆ.

Advertisements

ಈ ವರದಿ ಓದಿದ್ದೀರಾ? ಡಿ. 29: ರಾಜ್ಯದ ಹಲವೆಡೆ ಈ ದಿನ.ಕಾಮ್‌ನಿಂದ ‘ನಮ್ಮ ಕರ್ನಾಟಕ, ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

ಇನ್ನು ಮುಖ್ಯ ಅತಿಥಿಗಳಾಗಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ್ ಮತ್ತು ಕವಿವಿ ಸಿಂಡಿಕೇಟ್ ಸದಸ್ಯ ಡಾ. ಬಸವರಾಜ ಗೊರವರ ಇರುವರು. ಮತ್ತು ವಿವಿಧ ಸಮಘಟನೆಗಳಿಂದ ಮುಸ್ತಾಕ್ ಹಾವೇರಿಪೇಟ್, ನಿಂಗಮ್ಮ ಸವಣೂರ, ರವಿ ಬಾಗೋಡಿ, ಎಮ್ ಕೆ ನದಾಫ್ ಇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X