ಚಿಕ್ಕಮಗಳೂರು | ಸೆರೆಹಿಡಿದಿದ್ದ ನಾಗರ ಹಾವು ಕಚ್ಚಿ ಉರಗ ತಜ್ಞ ಸಾವು

Date:

Advertisements

ಹಾವು ಹಿರಿಯುವ ಸಂದರ್ಭದಲ್ಲಿ ಹಾವು ಕಚ್ಚಿ ಉರಗ ತಜ್ಞ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ.

ಸ್ನೇಕ್ ನರೇಶ್ (51) ಮೃತ ದುರ್ದೈವಿ. ಇವರು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದರು.

2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನರೇಶ್, ಜಿಲ್ಲೆಯಲ್ಲಿ ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡುತ್ತಿದ್ದರು. ಹಾವುಗಳ ರಕ್ಷಣೆಯೊಂದಿಗೆ ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದರು.

Advertisements

ಮಂಗಳವಾರ ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ನರೇಶ್ ತಂದಿದ್ದರು. ಮಧ್ಯಾಹ್ನ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿತ್ತು. ಆದರೆ, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ಹಾವು ನರೇಶ್ ಅವರಿಗೆ ಕಚ್ಚಿತ್ತು.

ಡಿಕ್ಕಿ ಓಪನ್ ಆದ ಕೂಡಲೇ ನಾಗರ ಹಾವು ಕಚ್ಚಿದ ಪರಿಣಾಮ ಅವರು ಅಸ್ವಸ್ಥರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಜಿಲ್ಲೆ ವಿಭಜನೆಗೆ ಬದ್ಧರಿದ್ದೇವೆ: ಸತೀಶ್‌ ಜಾರಕಿಹೊಳಿ

ಬೈಕ್ ಡಿಕ್ಕಿಯಲ್ಲಿಎರಡು ಹಾವು ಪತ್ತೆಯಾಗಿದ್ದು, ಅವರ ನಿವಾಸ ಬಳಿಯಲ್ಲಿದ್ದ ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳು ಪತ್ತೆಯಾಗಿವೆ. ಹಾವುಗಳನ್ನ ಹಿಡಿದು ಕಾರಿನಲ್ಲಿ ಶೇಖರಿಸಿಕೊಂಡಿದ್ದ ನರೇಶ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನು ಸುರಕ್ಷಿತವಾಗಿ ಬಿಟ್ಟು ಬರುತ್ತಿದ್ದರು. ಉಳಿದಂತೆ ಸೆರೆ ಹಿಡಿತ ಹಾವುಗಳನ್ನು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X