ಮಂಡ್ಯ | ಸ್ಟೇಷನ್‌ನಲ್ಲೇ ಕಾನ್ಸ್‌ಟೇಬಲ್‌ ಕೆನ್ನೆಗೆ ಬಾರಿಸಿದ ಯುವಕ: ವಿಡಿಯೋ ವೈರಲ್

Date:

Advertisements

ತನ್ನ ಕಪಾಳಕ್ಕೆ ಹೊಡೆದ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಯುವಕನೊಬ್ಬ ಪೊಲೀಸ್‌ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಶನಿವಾರ ನಡೆದಿದೆ.

ಪಟ್ಟಣದ ಹಿರೋಡೆ ಬೀದಿಯ ಪಿ.ಎಸ್.ಜಗದೀಶ್ ಅವರ ಪುತ್ರ ಸಾಗರ್ (30) ಎಂಬಾತ ಪೊಲೀಸ್ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ ನಡೆಸಿದವ ಎನ್ನಲಾಗಿದೆ. ಪೊಲೀಸ್‌ ಕಾನ್ಸ್‌ಟೇಬಲ್‌ ಅಭಿಷೇಕ್ ಮೇಲೆ ಹಲ್ಲೆ ಮಾಡಿದ ಸಾಗರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನಿನ ವಿಚಾರವಾಗಿ ನಡೆದಿದ್ದ ಜಗಳದ ಸಂಬಂಧ ಲಕ್ಷ್ಮೀನಾರಾಯಣ ಎಂಬುವವರು ಸಾಗರ್ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆಯಿಸಲಾಗಿತ್ತು.

Advertisements

ಠಾಣೆಯಲ್ಲಿ ಮತ್ತೆ ಸಾಗರ್, ಲಕ್ಷ್ಮೀನಾರಾಯುಣ್‌ ನಡುವೆ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಕಾನ್ಸ್‌ಟೇಬಲ್‌ ಅಭಿಷೇಕ್, ಸಾಗರ್‌ನನ್ನು ಸಮಾಧಾನಪಡಿಸಲು ಯತ್ನಿಸಿದ್ದಾರೆ. ಕೋಪ ಗೊಂಡಿದ್ದ ಸಾಗ‌ರ್, ಪೊಲೀಸ್‌ ಕಾನ್ಸ್‌ಟೇಬಲ್‌ ಅಭಿಷೇಕ್ ಅವರ ಕೊರಳಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾನೆ.

ಕರ್ತವ್ಯದಲ್ಲೇ ಇದ್ದ ಪೊಲೀಸರುಗಳಾದ ಲಕ್ಷ್ಮೀ ಮತ್ತು ಆನಂದ್ ಮಧ್ಯ ಪ್ರವೇಶಿಸಿ ಜಗಳ ಬಿಡಿಸಲು ಮುಂದಾಗಿದ್ದಾರೆ. ಆದರೆ ಸಾಗರ್, ನನ್ನ ವಿಚಾರಕ್ಕೆ ಬರಬೇಡಿ ಎಂದು ಲಕ್ಷ್ಮೀ ಮತ್ತು ಆನಂದ ಅವರಿಗೂ ಧಮ್ಕಿ ಹಾಕಿ, ಕುಡಿಯುವ ನೀರಿನ ಕ್ಯಾನ್ ಎತ್ತಿ ಬಿಸಾಡಿ ದಾಂಧಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ‌.

ಕಾನ್ಸ್‌ಟೇಬಲ್ ಅಭಿಷೇಕ್ ನೀಡಿದ ದೂರಿನ ಮೇಲೆ ಪೊಲೀಸರು ಆರೋಪಿ ಸಾಗರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X