ಎಂಎಸ್‌ಪಿ | ಜನವರಿ 4ರಂದು ಕಿಸಾನ್ ಮಹಾ ಪಂಚಾಯತ್: ರೈತರ ಕರೆ

Date:

Advertisements

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡಬೇಕು. ಎಂಎಸ್‌ಪಿಗೆ ಕಾನೂನು ಖಾತ್ರಿ ಒದಗಿಸಬೇಕೆಂದು ಒತ್ತಾಯಿಸಿ ಪಂಜಾಬ್-ಹರಿಯಾಣ ರೈತರು ಸುದೀರ್ಘ ಹೋರಾಟ ನಡೆಸುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಕೃಷಿ ಉತ್ಪನ್ನಗಳನ್ನು ಎಂಎಸ್‌ಪಿ ಮೂಲಕವೇ ಖರೀದಿಸುತ್ತವೆಂದು ಹೇಳಿರುವ ಕೇಂದ್ರ ಸರ್ಕಾರ, ಈವರೆಗೆ ಎಂಎಸ್‌ಪಿ ಜಾರಿಗೆ ತಂದಿಲ್ಲ. ಮಾತ್ರವಲ್ಲದೆ, ಕಾನೂನು ಖಾತ್ರಿಯನ್ನೂ ಒಗಿಸಿಲ್ಲ. ಹೀಗಾಗಿ, ರೈತರು ತಮ್ಮ ಹೋರಾಟವನ್ನು ಮುಂದುವರೆಸಿದ್ದಾರೆ. ಡಿಸೆಂಬರ್ 30ರಂದು ಪಂಜಾಬ್‌ ಬಂದ್ ಮತ್ತು ಜನವರಿ 4ರಂದು ‘ಕಿಸಾನ್ ಮಹಾ ಪಂಚಾಯತ್’ ನಡೆಸಲು ಕರೆ ಕೊಟ್ಟಿದ್ದಾರೆ.

ಪಂಜಾಬ್ ರೈತರು ಪಂಜಾಬ್-ಹರಿಯಾಣ ನಡುವಿನ ಖನೌರಿ-ಶಂಭೂ ಗಡಿಯಲ್ಲಿ ಸುಮಾರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ರೈತ ನಾಯಕ ಜಗಜೀತ್ ಸಿಂಗ್ ದಲೈವಾಲ್ ಅವರು 33 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸದ ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

“ಸಾಲದ ಹೊರೆಯಿಂದ ದೇಶಾದ್ಯಂತ ಏಳು ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರನ್ನು ರಕ್ಷಿಸುವುದು ಅನಿವಾರ್ಯ. ರೈತರ ಉಳಿವಿಗಾಗಿ ನಾನು ಉಪವಾಸ ಕುಳಿತಿದ್ದೇನೆ. ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ನಾನು ಗೆಲ್ಲುತ್ತೇನೆ ಅಥವಾ ಸಾಯುತ್ತೇನೆ. ಆದರೆ, ನನ್ನನ್ನು ಮುಟ್ಟಲು ಸರ್ಕಾರ ಬಿಡಬೇಡಿ” ಎಂದು ದಲೈವಾಲ್ ಅವರು ಹೋರಾಟನಿರತ ರೈತರಿಗೆ ಹೇಳಿದ್ದಾರೆ.

Advertisements

ಇದೆಲ್ಲದರ ಬೆನ್ನಲ್ಲೇ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಹಾಗೂ ಕಿಸಾನ್ ಮಝ್ದೂರ್ ಮೋರ್ಚಾ ಸಂಘಟನೆಗಳು ಡಿಸೆಂಬರ್ ಡಿಸೆಂಬರ್ 30ರಂದು ಪಂಜಾಬ್ ಬಂದ್‌ಗೆ ಕರೆಕೊಟ್ಟಿದೆ. ಅಲ್ಲದೆ, ಜನವರಿ 4ರಂದು ಬೃಹತ್ ಕಿಸಾನ್ ಮಹಾ ಪಂಚಾಯತ್‌ ನಡೆಸಲು ನಿರ್ಧರಿಸಿವೆ.

“ನಾವು ಜನವರಿ 4ರಂದು ಖನೌರಿಯಲ್ಲಿ ಬೃಹತ್ ಕಿಸಾನ್ ಮಹಾ ಪಂಚಾಯತ್ ನಡೆಸಲಿದ್ದೇವೆ. ವಿವಿಧ ರಾಜ್ಯಗಳ ರೈತರು ಪಾಲ್ಗೊಳ್ಳಲಿದ್ದಾರೆ” ಎಸ್‌ಕೆಎಂ ನಾಯಕ ಕಾಕಾ ಸಿಂಗ್ ಕೋತ್ರಾ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X