ದಕ್ಷಿಣ ಕೊರಿಯಾ | ಭೀಕರ ವಿಮಾನ ಅಪಘಾತ; ಮೃತರ ಸಂಖ್ಯೆ 177ಕ್ಕೆ ಏರಿಕೆ

Date:

Advertisements

ದಕ್ಷಿಣ ಕೊರಿಯಾದಲ್ಲಿ ಭಾನುವಾರ ನಡೆದ ಅತ್ಯಂತ ಭೀಕರ ವಿಮಾನ ಅಪಘಾತದಲ್ಲಿ ಮೃತರ ಸಂಖ್ಯೆ ಕನಿಷ್ಠ 177ಕ್ಕೆ ಏರಿಕೆಯಾಗಿದೆ. ವಿಮಾನ ಲ್ಯಾಂಡ್ ಆಗುವ ವೇಳೆ ಬೆಂಕಿ ಹೊತ್ತಿ ಈ ಅವಘಡ ಸಂಭವಿಸಿದೆ.

ಜೆಜು ಏರ್ ಫ್ಲೈಟ್ 2216 ಥೈಲ್ಯಾಂಡ್‌ನಿಂದ ಹಿಂದಿರುಗಿತ್ತು. ಥಾಯ್ ರಾಜಧಾನಿ ಬ್ಯಾಂಕಾಕ್‌ನಿಂದ 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳನ್ನು ಹೊತ್ತು ತಂದಿತ್ತು. ಲ್ಯಾಂಡಿಂಗ್ ಆಗುವ ವೇಳೆ ಪತನಗೊಂಡಿತ್ತು.

ಇದನ್ನು ಓದಿದ್ದೀರಾ? ದಕ್ಷಿಣ ಕೊರಿಯಾ | ರನ್‌ವೇನಲ್ಲಿ ಹೊತ್ತಿ ಉರಿದ ವಿಮಾನ, ಮೃತರ ಸಂಖ್ಯೆ 171ಕ್ಕೆ ಏರಿಕೆ

Advertisements

ಇಬ್ಬರು ಸಿಬ್ಬಂದಿಗಳ ರಕ್ಷಣೆ ಮಾಡಲಾಗಿದ್ದು, ನಾಪತ್ತೆಯಾಗಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸದ್ಯ ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ವರದಿಯಾಗಿದೆ.

ಇನ್ನು ಸಾರಿಗೆ ಸಚಿವಾಲಯದ ಪ್ರಕಾರ, ದಕ್ಷಿಣ ಕೊರಿಯಾದ ನೆಲದಲ್ಲಿ ಸಂಭವಿಸಿದ ಅತೀ ಮಾರಣಾಂತಿಕ ವಿಮಾನ ಅಪಘಾತ ಇದಾಗಿದೆ. ಸುಮಾರು ಮೂರು ದಶಕಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ಇಂತಹ ಅಪಘಾತ ಸಂಭವಿಸಿಲ್ಲ.

ಇದನ್ನು ಓದಿದ್ದೀರಾ? ದಕ್ಷಿಣ ಕೊರಿಯಾ | ತುರ್ತು ಮಿಲಿಟರಿ ಆದೇಶ ವಾಪಸ್

“ವಿಮಾನದ ಕೊನೆಯ ಭಾಗ ಮಾತ್ರ ಕೊಂಚ ಆಕಾರ ಹೊಂದಿದೆ. ಉಳಿದ ಭಾಗಗಳನ್ನು ಗುರುತಿಸಲು ಅಸಾಧ್ಯವಾದ ಸ್ಥಿತಿಗೆ ತಲುಪಿದೆ. ಇಬ್ಬರನ್ನು ವಿಮಾನದ ಕೊನೆಯ ಭಾಗದಲ್ಲಿ ರಕ್ಷಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮುವಾನ್ ಅಗ್ನಿಶಾಮಕ ಮುಖ್ಯಸ್ಥ ಲೀ ಜಂಗ್-ಹ್ಯುನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಭೀಕರ ವಿಮಾನ ಅಪಘಾತಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ.

ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 1997ರಲ್ಲಿ ಗುವಾಮ್‌ನಲ್ಲಿ ಕೊರಿಯನ್ ಏರ್ ಅಪಘಾತ ಸಂಭವಿಸಿತ್ತು. ಸುಮಾರು 200ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಈ ಅಪಘಾತವು ದಕ್ಷಿಣ ಕೊರಿಯಾದ ವಿಮಾನಯಾನ ಸಂಸ್ಥೆಯ ಇತಿಹಾಸದಲ್ಲೇ ಅತೀ ಭೀಕರ ಅಪಘಾತವಾಗಿದೆ. 2002ರಲ್ಲಿ ಏರ್ ಚೀನಾ ಅಪಘಾತ ಸಂಭವಿಸಿದ್ದು ಇದರಿಂದಾಗಿ 129 ಮಂದಿ ಸಾವನ್ನಪ್ಪಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X