ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

Date:

Advertisements

ನವದೆಹಲಿಯಲ್ಲಿ ಧರಣಿನಿರತ ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ ನಂತರ ಏನಾಯಿತು ಎಂಬುದನ್ನು ಕೇಳಿ ಬೇಸರವಾಯಿತು. ಸರಿಯಾದ ಮಾತುಕತೆಯ ಮೂಲಕ ಯಾವುದನ್ನಾದರೂ ಪರಿಹರಿಸಬಹುದು. ಆದಷ್ಟು ಬೇಗ ಪರಿಹಾರವಾಗಲೆಂದು ಆಶಿಸುತ್ತೇನೆ” ಎಂದು ತಿಳಿಸಿದ್ದಾರೆ.

ಈ ನಡುವೆ ತಾವು ಕೂಡ ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Advertisements

ಕ್ರಿಕೆಟಿಗರ ಪೈಕಿ ಭಾರತ ತಂಡದ ಮಾಜಿ ನಾಯಕ ಕಪಿಲ್‌ ದೇವ್ ಹಾಗೂ ಇರ್ಫಾನ್ ಪಠಾಣ್ ಬೆಂಬಲ ವ್ಯಕ್ತಪಡಿಸಿದ ನಂತರ ಅನಿಲ್‌ ಕುಂಬ್ಳೆ ಸಹ ಕುಸ್ತಿಪಟುಗಳ ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಅವರನ್ನು ಬಂಧಿಸುವಂತೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಕ್ರೀಡಾಪಟುಗಳು ಪದಕಗಳನ್ನು ಗಂಗಾ ನದಿಯಲ್ಲಿ ಎಸೆಯಲು ತೀರ ಪ್ರದೇಶಕ್ಕೆ ಮಂಗಳವಾರ ಸಂಜೆ ಆಗಮಿಸಿದ್ದರು. ಆದರೆ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದನ್ನು ರೈತ ನಾಯಕರು ತಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹರಿದ್ವಾರದಲ್ಲಿ ಚಾರಿತ್ರಿಕ ಪ್ರತಿಭಟನೆ; ಕುಸ್ತಿಪಟುಗಳು ಪದಕ ನದಿಗೆಸೆಯುವುದ ತಡೆದ ರೈತ ನಾಯಕ

ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯತ್, ನದಿಯಲ್ಲಿ ಬಿಡುವುದಕ್ಕಾಗಿ ಕುಸ್ತಿಪಟುಗಳು ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಸಮಸ್ಯೆ ಪರಿಹಾರಕ್ಕೆ ತಮಗೆ ʻಐದು ದಿನಗಳ ಸಮಯವನ್ನು ಕೊಡಿʼ ಎಂದು ಟಿಕಾಯತ್‌ ಕುಸ್ತಿಪಟುಗಳಲ್ಲಿ ಮನವಿ ಮಾಡಿದ್ದಾರೆ.

ಇನ್ನು ತಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸುವ ಬದಲು ಹಲ್ಲೆಯ ಮೂಲಕ, ಪ್ರತಿಭಟನೆಗೆ ಜಾಗ ನಿರಾಕರಿಸುವ ಮೂಲಕ ಪ್ರತಿಭಟನೆ ಹತ್ತಿಕ್ಕುವುದಕ್ಕೆ ಕುಸ್ತಿಪಟುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗಣ್ಯ ಅಥ್ಲೀಟ್‌ಗಳಲ್ಲಿ ಒಬ್ಬರಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್, “ನಾವು ಗೆದ್ದ ಪದಕಗಳನ್ನ ಗಂಗಾ ನದಿಗೆ ಎಸೆದು ಅಮರಣಾಂತ ಉಪವಾಸ ಕೂರುತ್ತೇವೆ” ಎಂದು ಪತ್ರ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X