ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ ಇಬ್ಬರು ಸಮುದ್ರಪಾಲಾದ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಎಳ್ಳಾಮವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ 6 ಜನರ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಮೃತಪಟ್ಟ ದುರ್ದೈವಿಗಳು. ರಕ್ಷಿಸಲ್ಪಟ್ಟ ನಾಲ್ವರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
