ವಿಜಯಪುರ | ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ; ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಸರ್ಕಾರಿ ಬಸ್

Date:

ಚಾಲನೆ ಮಾಡುತ್ತಿರುವಾಗಲೇ ಸರ್ಕಾರಿ ಬಸ್‌ನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಬಸ್‌ ಪೆಟ್ರೋಲ್‌ ಬಂಕಿಗೆ ನುಗ್ಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಕಂಡಕ್ಟರ್‌ನ ಸಮಯ ಪ್ರಜ್ಞೆಯಿಂದ ಅಪಾಯ ತಪ್ಪಿದೆ.

ಮರಿಗೆಪ್ಪ ಅಥಣಿ ಮೃತ ಚಾಲಕ. ಅವರು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ ಚಾಲಕನಾಗಿದ್ದರು. ಕಲಬುರಗಿ ಜಿಲ್ಲೆಯ ಅಪ್ಜಲ್‌ಪುರದಿಂದ ವಿಜಯಪುರ ಮಾರ್ಗದ ಬಸ್‌ ಚಾಲಕನಾಗಿ ಮಂಗಳವಾರ ಕೆಲಸಕ್ಕೆ ಹೋಗಿದ್ದರು. ಅಪ್ಜಲ್‌ಪುರದಿಂದ ವಿಜಯಪುರಕ್ಕೆ ಬಸ್‌ ತೆರಳುವಾಗ ಸಿಂದಗಿ ಬಳಿ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಅದೃಷ್ಟವಶಾತ್, ಘಟನೆಗೂ ಮುನ್ನವೇ ಬಸ್‌ನ ಹೆಡ್‌ಲೈಟ್‌ ಸಮಸ್ಯೆಯಾಗಿತ್ತು. ಆದ್ದರಿಂದ, ಪ್ರಯಾಣಿಕರನ್ನು ಮಾರ್ಗ ಮಧ್ಯೆ ಇಳಿಸಿ, ಬಸ್‌ ಸಿಂದಗಿ ಡಿಪೋಗೆ​​ ಹೊರಟಿತ್ತು. ಈ ವೇಳೆ, ಮುರಿಗಪ್ಪ ಮೃತಪಟ್ಟಿದ್ದು, ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೂಡಲೇ ಬಸ್‌ನ ನಿರ್ವಾಹಕ ಶರಣು ಟಾಕಳಿಮ ಬಸ್​ನ ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ. ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...