ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪತ್ತೆ; ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್

Date:

Advertisements

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮಂಗಳವಾರ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಸಂಸ್ಥೆಯು ಇಂದು (ಡಿಸೆಂಬರ್ 31) ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗವು ಸಿಬ್ಬಂದಿಗಳಿಗೆ ಮಾಹಿತಿ ನೀಡಿದೆ. “ಆತ್ಮೀಯ ಇನ್ಫೋಶಿಯನ್‌ಗಳೇ, ಇಂದು ಮೈಸೂರು ಕ್ಯಾಂಪಸ್‌ನಲ್ಲಿ ಕಾಡು ಪ್ರಾಣಿ ಕಾಣಿಸಿಕೊಂಡಿದೆ. ಕಾರ್ಯಪಡೆಯ ಸಹಯೋಗದೊಂದಿಗೆ ಕ್ಯಾಂಪಸ್ ಸುರಕ್ಷತೆಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಚಿರತೆ ಹಿಡಿಯಲು ‘ಸೊಳ್ಳೆ ಪರದೆ’ ಜೊತೆ ಕಾಡಿಗೆ ಹೊರಟ ಬಿಜೆಪಿ ಮಾಜಿ ಶಾಸಕ; ವಿಡಿಯೋ ವೈರಲ್

Advertisements

ವರದಿ ಪ್ರಕಾರ, ಕ್ಯಾಂಪಸ್‌ಗೆ ಪ್ರವೇಶವನ್ನು ನಿರ್ಬಂಧಿಸುವಂತೆ ಇನ್ಫೋಸಿಸ್ ಕ್ಯಾಂಪಸ್‌ನ ಭದ್ರತಾ ತಂಡಕ್ಕೆ ಸೂಚಿಸಿದೆ. “ದಯವಿಟ್ಟು ಇಂದು (ಡಿಸೆಂಬರ್ 31) ಕ್ಯಾಂಪಸ್‌ಗೆ ಪ್ರವೇಶಿಸಬೇಡಿ” ಎಂದು ನೋಟಿಸ್ ಹಾಕಲಾಗಿದೆ.

ನಸುಕಿನ 2 ಗಂಟೆ ಸುಮಾರಿಗೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಚಿರತೆ ಓಡಾಟ ಕಂಡುಬಂದಿದೆ. ಕೆಲವೇ ಕ್ಷಣದಲ್ಲಿ ಚಿರತೆ ಸೆರೆಹಿಡಿಯಲು ತಂಡವನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆ ಆರಂಭವಾಗಿದೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಐಬಿ ಪ್ರಭುಗೌಡ, “ಬೆಳಿಗ್ಗೆ 2 ಗಂಟೆ ಸುಮಾರಿಗೆ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದೆ. ನಮ್ಮ ತಂಡವು 4 ಗಂಟೆಗೆ ಸ್ಥಳಕ್ಕೆ ತಲುಪಿ ತಕ್ಷಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗುಬ್ಬಿ | ಚಿರತೆ ದಾಳಿಗೆ 9 ಕುರಿಗಳ ಬಲಿ : ಆತಂಕದಲ್ಲಿ ಸುರುಗೇನಹಳ್ಳಿ ಗ್ರಾಮಸ್ಥರು.

ಇನ್ನು ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ. ಆದರೆ ಇನ್ಫೋಸಿಸ್ ಗ್ಲೋಬಲ್ ಎಜುಕೇಶನ್ ಸೆಂಟರ್‌ನ ಶಿಕ್ಷಣಾರ್ಥಿಗಳಿಗೆ ತೊಂದರೆ ಉಂಟಾಗಿದೆ ಎಂದು ಹೇಳಲಾಗಿದೆ. ತರಬೇತಿ ಕಾರ್ಯಕ್ರಮಗಳು, ಮೌಲ್ಯಮಾಪನಗಳನ್ನು ಮುಂದೂಡಲಾಗಿದ್ದು, ಕ್ಯಾಂಪಸ್‌ಗೆ ಬರದಂತೆ ಸೂಚಿಸಲಾಗಿದೆ.

ಇನ್ನು 2011ರಲ್ಲಿಯೂ ಚಿರತೆಯೊಂದು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿತ್ತು. ಹೆಬ್ಬಾಳ ಇಂಡಸ್ಟ್ರಿಯಲ್ ಏರಿಯಾ ಬಳಿ ಚಿರತೆ ಕಾಣಿಸಿಕೊಂಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X