ರಾಯಚೂರು | ವಿದ್ಯುತ್ ವ್ಯವಸ್ಥೆಯಿಲ್ಲದೆ ಕತ್ತಲಾದ ಪ್ರೌಢಶಾಲೆ; ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತ

Date:

Advertisements

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ‌ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುದ್ದಿನ್ನಿ ಗ್ರಾಮದಿಂದ 1ಕಿಲೋ ಮೀಟರ್ ದೂರದಲ್ಲಿ ಶಾಲೆಯಿದೆ. ಶಾಲೆಯಲ್ಲಿ 100ಕ್ಕಿಂತ ಹೆಚ್ಚು ಮಂದಿ ಮಕ್ಕಳಿದ್ದಾರೆ. ನೂರಾರು ಮಂದಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ವಿದ್ಯುತ್ ಸಂಪರ್ಕದ ಅವಶ್ಯಕತೆಯಿದೆ.

ಬಿಸಿಯೂಟ ತಯಾರಿಸಲು ಮತ್ತು ಕುಡಿಯುವ ನೀರಿಗೆ ಹಾಗೂ ಡಿಜಿಟಲ್ ತರಗತಿಗಳಿಗೆ ವಿದ್ಯುತ್‌ ಅತ್ಯವಶ್ಯಕ ಮತ್ತು ವಿದ್ಯಾರ್ಥಿಗಳಿಗೆ ಶೌಚಾಲಯ ಬಳಕೆ ಮಾಡಲು ಹಾಗೂ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಲು ವಿದ್ಯುತ್ ಸಂಪರ್ಕ ಬೇಕಾಗಿದೆ. ಎಲ್ಲ ಸರ್ಕಾರಿ ಶಾಲೆಗೆ ಡಿಜಿಟಲ್ ಕ್ಲಾಸ್ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಉಚಿತ ವಿದ್ಯುತ್ ಆದೇಶ ಹೊರಡಿಸಿದ್ದಾರೆ.

Advertisements
1000057874

“ಡಿಜಿಟಲ್ ಕ್ಲಾಸ್ ಇದ್ದರೆ ನಮ್ಮ ವಿದ್ಯಾರ್ಥಿಗಳು ತಲ್ಲೀನಗೊಳಿಸುವ ವಾತಾವರಣದಲ್ಲಿ ಕಲಿಯುತ್ತಾರೆ. ಇದು ಅವರ ಆಸಕ್ತಿ ಮತ್ತು ಜ್ಞಾನದ ಧಾರಣೆಯನ್ನು ಹೆಚ್ಚಿಸುತ್ತದೆ” ಎಂಬುದು ಗ್ರಾಮಸ್ಥರ ಅಭಿಪ್ರಾಯ.

ಈ ಬಗ್ಗೆ ಗ್ರಾಮದ ನಿವಾಸಿ ನಾಗರೆಡ್ಡಪ್ಪ ದೇವರಮನಿ ಮಾತನಾಡಿ, “ಶಾಲೆ ಪ್ರಾರಂಭಗೊಂಡು ಮೂರು ವರ್ಷಗಳು ಕಳೆದಿವೆ. ಆದರೆ ಈವರೆಗೂ ವಿದ್ಯುತ್ ಇಲ್ಲದೆ, ಮಕ್ಕಳು ಕತ್ತಲೆಯಲ್ಲೇ ಪಾಠ ಕೇಳುವಂತಾಗಿದೆ. ಎಲ್ಲ ಶಾಲೆಗೆ ಡಿಜಿಟಲ್ ಕ್ಲಾಸ್ ವ್ಯವಸ್ಥೆಯಾಗಬೇಕೆಂದು ಹೇಳುತ್ತಾರೆ. ಆದರೆ ಇಲ್ಲಿ ವಿದ್ಯುತ್ ಇಲ್ಲದೆ ಮಕ್ಕಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ” ಎಂದರು.

“₹30 ಲಕ್ಷದ ಡಿಜಿಟಲ್ ಕ್ಲಾಸ್ ಸಾಮಗ್ರಿಗಳು ಶಾಲೆಗೆ ತಲುಪಿವೆ. ಆದರೆ ವಿದ್ಯುತ್ ಇಲ್ಲದಿರಿವುದರಿಂದ ಉಪಕರಣಗಳನ್ನು ಸ್ಟೋರ್‌ ರೂಂನಲ್ಲಿ ಸಂಗ್ರಹಿಸಿಡಲಾಗಿದೆ. ಕೆಲವು ದಿನದ ಹಿಂದೆ ಊರಿನ ಜನ ಸೇರಿ ಕೆಲವು ಕಟ್ಟಿಗೆ ಕಂಬಗಳನ್ನು ಹಾಕಿ ತಾತ್ಕಾಲಿಕವಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಗಾಳಿ ಮಳೆಗೆ ಕಂಬಗಳು ಬಿದ್ದ ಕಾರಣ ಮತ್ತೆ ಯಥಾಸ್ಥಿತಿಯಂತೆ ಕತ್ತಲಾಗಿದೆ. ಹಲವು ಬಾರಿ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸರಿಪಡಿಸೋಣವೆಂಬ ಆಶ್ವಾಸನೆ ನೀಡುತ್ತಾರೆಯೇ ಹೊರತು ಕಾರ್ಯರೂಪಕ್ಕೆ ತಂದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿ‌ಬದಿ ಮಳಿಗೆ ತೆರವು; ಪರ್ಯಾಯ ವ್ಯವಸ್ಥೆಗೆ ವ್ಯಾಪಾರಿಗಳ‌ ಉಪವಾಸ ಸತ್ಯಾಗ್ರಹ

“ಸುತ್ತಮುತ್ತಲಿನ ಗ್ರಾಮಗಳಾದ ಹೂವಿನಬಾವಿ, ಮುದಬಾಳ, ಕಾಟಗಲ್ ಸಾನಬಾಳ, ಬೆಂಚಮರಡಿ , ಇಲಾಲಪುರ, ಹರ್ವಾಪುರ ಮತ್ತು ತುಪ್ಪದೂರು ಗ್ರಾಮಗಳಿಂದ ಮಕ್ಕಳು ಶಾಲೆಗೆ ಬರುತ್ತಾರೆ. ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಆದಷ್ಟು ಬೇಗ ವಿದ್ಯುತ್ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಗ್ರಾಮಕ್ಕೆ ಫ್ರೌಢಶಾಲೆ ಮಂಜೂರಾಗಬೇಕೆಂದು ಮತದಾನ ಬಹಿಷ್ಕಾರ ಮಾಡಲಾಗಿತ್ತು. ನಂತರ ಪ್ರೌಢಶಾಲೆ ಮುಂಜೂರಾಗಿದ್ದು, ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಆದರೆ ವಿದ್ಯುತ್ ಇಲ್ಲದೆ ಕತ್ತಲೆ ಮನೆಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X