ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರ ಸಚಿವರ ನೇತೃತ್ವದ ನಿಯೋಗ ನಾಳೆ ಬೆಂಗಳೂರಿಗೆ ಭೇಟಿ

Date:

Advertisements

ರಾಜ್ಯದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರ ಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜನ‌ಮೆಚ್ಚುಗೆ ಗಳಿಸಿದೆ. ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜನಪ್ರಿಯ ಗಳಿಸಿರುವ ಯೋಜನೆಯಾಗಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ರಾಜ್ಯದ ಶಕ್ತಿ ಯೋಜನೆಯತ್ತ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಚಿತ್ತ ನೆಟ್ಟಿದೆ.

ಆಂಧ್ರ ಪ್ರದೇಶ ಸರ್ಕಾರ ಅಲ್ಲಿ ಕರ್ನಾಟಕ ಮಾದರಿಯಲ್ಲೇ ಶಕ್ತಿ ಯೋಜನೆಯನ್ನು ಜಾರಿ ಮಾಡಲು ಒಲವು ಹೊಂದಿದೆ. ಈ ನಿಟ್ಟಿನಲ್ಲಿ ಆಂಧ್ರದ ಸಚಿವರು ಹಾಗೂ ಅಧಿಕಾರಿಗಳ ನಿಯೋಗ ನಾಳೆ (ಜ.2ಕ್ಕೆ) ರಾಜ್ಯಕ್ಕೆ ಭೇಟಿ ನೀಡಲಿದೆ. ಬೆಂಗಳೂರಿಗೆ ಆಗಮಿಸಿ ಶಕ್ತಿ ಯೋಜನೆ ಬಗ್ಗೆ ಅಧ್ಯಯನ ನಡೆಸಲಿದೆ. ರಾಜ್ಯದ ಶಕ್ತಿ ಯೋಜನೆ ಅನುಷ್ಠಾನ, ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ರಾಜ್ಯಕ್ಕೆ ಆಂಧ್ರ ಪ್ರದೇಶದ ಮೂವರು ಸಚಿವರು ಸೇರಿ ಹಿರಿಯ ಅಧಿಕಾರಿಗಳ ಸುಮಾರು 15 ಸದಸ್ಯರ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ. ಜ.3ರಂದು ಸಿಎಂ, ಸಾರಿಗೆ ಸಚಿವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಭೇಟಿಯಾಗಿ ಶಕ್ತಿ ಯೋಜನೆಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ನಿಯೋಗದಲ್ಲಿ ಆಂಧ್ರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ಶೆಟ್ಟಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಇರಲಿದ್ದಾರೆ. ಇದರ ಜೊತೆಗೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹಣಕಾಸು ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಎಪಿಎಸ್​ಆರ್​ಟಿಸಿಯ ಅಧಿಕಾರಿಗಳನ್ನೊಳಗೊಂಡ 15 ಅಧಿಕಾರಿಗಳ ತಂಡ ಆಗಮಿಸಿ ಶಕ್ತಿ ಯೋಜನೆಯ ಅಧ್ಯಯನ ನಡೆಸಲಿದೆ.

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಆಂಧ್ರ ಪ್ರದೇಶ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಜ.3ಕ್ಕೆ ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಶಕ್ತಿ ಯೋಜನೆ ಅನುಷ್ಠಾನ, ಹಣಕಾಸು ನಿರ್ವಹಣೆ, ಹೊರೆ, ನಿರ್ವಹಣೆ, ಮಾನದಂಡಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಶಕ್ತಿ ಯೋಜನೆಯ ಯಶಸ್ಸು, ರಸ್ತೆ ಸಾರಿಗೆ ನಿಗಮ ತೆಗೆದುಕೊಂಡ ಕ್ರಮಗಳ ಬಗ್ಗೆ ನಿಯೋಗಕ್ಕೆ ವಿವರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X