ಉತ್ತರ ಪ್ರದೇಶ | ಗೋಹತ್ಯೆ ಶಂಕೆ: ವ್ಯಕ್ತಿಯನ್ನು ಥಳಿಸಿ ಕೊಂದ ಸ್ವಘೋಷಿತ ಗೋರಕ್ಷಕರು

Date:

Advertisements

ಹಸುವೊಂದನ್ನು ಕೊಂದಿರುವ ಶಂಕೆಯಿಂದ ಸ್ವಘೋಷಿತ ಗೋರಕ್ಷಕರು ವ್ಯಕ್ತಿಯೊಬ್ಬರನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಸುಕಿನ ವೇಳೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಶಹದೀನ್ ಖುರೇಷಿ ಕೆಲ ಗಂಟೆಗಳ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಈ ಭಯಾನಕ ದಾಳಿಯ ವಿಡಿಯೊವನ್ನು ಗೋರಕ್ಷಕರು ಆನ್‌ಲೈನ್‌ನಲ್ಲಿ ಮಂಗಳವಾರ ಹರಿಯಬಿಟ್ಟಿದ್ದಾರೆ. ಬಲಪಂಥೀಯ ಸಂಘಟನೆಯ ಕೆಲ ಕಾರ್ಯಕರ್ತರು ವ್ಯಕ್ತಿಯನ್ನು ಒದೆಯುತ್ತಿರುವ, ಗುದ್ದುತ್ತಿರುವ ಮತ್ತು ಹರಿತವಾದ ಆಯುಧಗಳಿಂದ ಹೊಡೆಯುತ್ತಿರುವ ದೃಶ್ಯ ವಿಡಿಯೊದಲ್ಲಿ ಕಾಣಿಸುತ್ತಿದೆ.

ನೆಲದಲ್ಲಿ ಬಿದ್ದಿರುವ ವ್ಯಕ್ತಿಯ ಮೈತುಂಬಾ ಗಾಯಗಳು ಕಾಣಿಸುತ್ತಿದ್ದು,ಉಸಿರಾಡಲು ಕಷ್ಟಪಡುತ್ತಿರುವ ದೃಶ್ಯ ಮನ ಕಲುಕುವಂತಿದೆ. ಸಂತ್ರಸ್ತ ವ್ಯಕ್ತಿಯ ಪಕ್ಕದಲ್ಲಿ ಸತ್ತ ಹಸುವಿನ ಕಳೇಬರ ಇದ್ದು, ಹಸುವನ್ನು ಸಂತ್ರಸ್ತ ವ್ಯಕ್ತಿಯೇ ಹತ್ಯೆ ಮಾಡಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

“ಜಾನುವಾರನ್ನು ಹತ್ಯೆ ಮಾಡಲಾಗಿದೆ ಎನ್ನುವುದು ಸ್ಥಳೀಯರಿಗೆ ತಿಳಿದು ಬಂದಿದ್ದು, ಹಸುವನ್ನು ಹತ್ಯೆ ಮಾಡಲಾಗಿದೆ ಎನ್ನಲಾದ ಗುಂಪಿನ ಎಲ್ಲರೂ ತಪ್ಪಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಮಾತ್ರ ಸಾರ್ವಜನಿಕರು ಹಿಡಿದಿದ್ದಾರೆ. ಹಸುವಿನ ಕಳೇಬರವನ್ನು ಕಂಡು ಸಾರ್ವಜನಿಕರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿದ್ದಾರೆ.ಚಿಕಿತ್ಸೆ ವೇಳೆ ವ್ಯಕ್ತಿ ಮೃತಪಟ್ಟಿದ್ದಾನೆ. ವ್ಯಕ್ತಿಯ ಸಹೋದರ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಕೊಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಮೊರದಾಬಾದ್ ನಗರ ಎಸ್ಪಿ ರಣವಿಜಯ ಸಿಂಗ್ ಹೇಳಿದ್ದಾರೆ.

“ನನ್ನ ಸಹೋದರ ಬಾಡಿಬಿಲ್ಡರ್ ಆಗಿದ್ದು, ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಾಂಸದ ವ್ಯವಹಾರಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ ಹಾಗೂ ಈ ಮೊದಲು ಯಾವುದೇ ಯಾವುದೇ ಪ್ರಕರಣ ಅವರ ವಿರುದ್ಧ ದಾಖಲಾಗಿರಲಿಲ್ಲ. ವರ್ಷದ ಹಿಂದೆ ಅಸ್ವಸ್ಥರಾಗಿದ್ದ ಅವರು ಆರು ತಿಂಗಳಿಂದ ಆಸ್ಪತ್ರೆಯಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಗ ಅವರ ಉದ್ಯೋಗ ನಷ್ಟವಾಯಿತು.ನನ್ನ ಸಹೋದರ ಅಂಥ ಕೆಲಸ ಎಂದೂ ಮಾಡಿಲ್ಲ. ಬೇರೆಯವರು ಮಾಡಿರಬಹುದು. ಅದಕ್ಕೆ ಅವರು ಬೆಲೆ ತೆರುವಂತಾಗಿದೆ” ಎಂದು ಮೃತ ವ್ಯಕ್ತಿಯ ಸಹೋದರ ಶಹಜಾದ್ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X