ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಓರ್ವ ಯುವಕ ಸಾವು

Date:

Advertisements

ಗುಂಪು ಹಲ್ಲೆಯಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದ ಪರಿಣಾಮ 19 ವರ್ಷದ ಸಮೀರ್ ಶೇಖ್ ಎಂಬ ಯುವಕನು ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕಳೆದ ಸೋಮವಾರ ಮಕ್ಕಳ ಜಗಳ ತಾರಕಕ್ಕೇರಿದ ಪರಿಣಾಮ ಸಮೀರ್ ಮತ್ತು ಆತನ ಚಿಕ್ಕಪ್ಪ ಜಾವೀದ್ ಮೇಲೆ ಸ್ಥಳೀಯ ಯುವಕರು ಮುಗಿಬಿದ್ದು, ಚಾಕುವಿನಿಂದ ಇರಿದಿರುವ ಘಟನೆ ಹಳೆ ಹುಬ್ಬಳ್ಳಿಯ ಗೋಡ್ಕೆ ಪ್ಲಾಟ್ ನಲ್ಲಿ ನಡೆದಿದ್ದು, ಹಲ್ಲೆಗೊಳಗಾಗಿದ್ದ ಜಾವೀದ್ ಮತ್ತು ಸಮೀರ್ ಇಬ್ಬರನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಜ. 1ರಂದು ಸಮೀರ್ ಸಾವೀಗಿಡಾಗಿದ್ದಾನೆ.

ಓಣಿಯಲ್ಲಿ ಸಣ್ಣ ಮಕ್ಕಳು ಜಗಳವಾಡಿದ್ದು, ಸಮೀರ್ ಜಗಳವಾಡುತ್ತಾನೆ. ಮನೆಯ ಮಹಿಳೆಯರೊಂದಿಗೆ ಜಗಳ ತೆಗೆಯಲು ಬಂದಿದ್ದೀರಿ ಎಂದು ಯುವಕರೆಲ್ಲ ಸೇರಿ ಸಮೀರ್ ಮತ್ತು ಜಾವೀದ್ ಇಬ್ಬರನ್ನು ಬೆನ್ನುಹತ್ತಿ ಚಾಕುವಿನಿಂದ ಇರಿದಿದ್ದಾರೆ. ಸಮೀರ್ ಸಾವಿಗೀಡಾಗಿದ್ದು, ಆತನ ಚಿಕ್ಕಪ್ಪ ಜಾವೀದ್ ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಳೆಹುಬ್ಬಳ್ಳಿ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.

Advertisements

ಈ ಮೊದಲು ಎರಡು ಕುಟುಂಬಗಳ ನಡುವೆ ಹಳೆ ವೈಷಮ್ಯವಿದ್ದು, ಆ ಕ್ಷುಲ್ಲಕ ಕಾರಣವಾನ್ನಿಟ್ಟುಕೊಂಡು ಸಮೀರ್ ಮೇಲೆ ಮುಗಿಬಿದ್ದು, ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ವರದಿ ಓದಿದ್ದೀರಾ? ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಸಾವು

ಹಲ್ಲೆ ಮಾಡಿದ ಗುಂಪಿನಲ್ಲಿ 15ಜನರಿದ್ದು, ಆರೋಪಿಗಳ ಪೈಕಿ ಇದುವರೆಗೂ 7 ಜನರನ್ನು ಬಂಧಿಸಲಾಗಿದ್ದು, ಈ ಕುರಿತ ಆರೋಪಿ ಮುಜಾಮಿಲ್ ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ಮತ್ತು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X