ರಾಯಚೂರು | ಕತ್ತಲಾಗಿದ್ದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆ; ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ಇಲಾಖೆ

Date:

Advertisements

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆಗೆ ಇದೀಗ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ.

ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ ರಾಯಚೂರು | ವಿದ್ಯುತ್ ವ್ಯವಸ್ಥೆಯಿಲ್ಲದೆ ಕತ್ತಲಾದ ಪ್ರೌಢಶಾಲೆ; ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತ ಎಂಬ ಶೀರ್ಷಕೆಯಡಿ ವರದಿ ಪ್ರಕಟಿಸಿತ್ತು.

ಈ ದಿನ.ಕಾಮ್‌ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಂಡು ಕೆಲಸ ಪ್ರಾರಂಭಿಸಿ ಮಕ್ಕಳಿಗೆ ಅನುಕೂಲ ಮಾಡುವುದಕ್ಕೆ ಮುಂದಾಗಿದೆ. ಬುದ್ದಿನ್ನಿ ಗ್ರಾಮದಿಂದ ಸರ್ಕಾರಿ‌ ಪ್ರೌಢಶಾಲೆವರೆಗೆ ಸುಮಾರು 45 ವಿದ್ಯುತ್ ಕಂಬಗಳನ್ನು ಹಾಕುವ ಮೂಲಕ ಶಾಲೆಗೆ ಬೆಳಕು ನೀಡುವುದಕ್ಕೆ ಮುಂದಾಗಿದ್ದಾರೆ.

Advertisements
1000059103

ಈ ಬಗ್ಗೆ ಗ್ರಾಮದ ಮುಖಂಡ ನಾಗರೆಡ್ಡೆಪ್ಪ ದೇವರಮನಿ ಮಾತನಾಡಿ, “ಶಾಲೆಯ ಅಭಿವೃದ್ಧಿ ಕಾಮಗಾರಿಗಾಗಿ ₹20 ಲಕ್ಷ ಅನುದಾನ ಬಿಡುಗಡೆಯಾಗಿದೆಯೆಂದು ಹೇಳಲಾಗಿದೆ. ವಿದ್ಯುತ್ ಇಲ್ಲದೆ ಮಕ್ಕಳು ಡಿಜಿಟಲ್ ಕಲಿಕೆಯಿಂದ ಮಕ್ಕಳು ವಂಚಿತರಾಗಿದ್ದರು. ಇದೀಗ ಶಾಲೆಗೆ ನಿರಂತರ ವಿದ್ಯುತ್ ಜ್ಯೋತಿ ಕರೆಂಟ್ ನೀಡಲಾಗಿದೆ. ನಾವೂ ಡಿಜಿಟಲ್ ಶಿಕ್ಷಣ ಕಲಿತಿಲ್ಲ. ನಮ್ಮ ಮಕ್ಕಳಾದರೂ ಡಿಜಿಟಲ್‌ ಶಿಕ್ಷಣ ಕಲಿಯಬೇಕೆಂಬ ಗ್ರಾಮಸ್ಥರ ಬೇಡಿಕೆ ಈಡೇರಿದೆ” ಎಂದರು.

“ಜನವರಿ 10ರಂದು ಈ ಶಾಲೆಯ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಗೆ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

1000059100
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X