ಉಡುಪಿ | ಪಿಡಿಒ ಕಿರುಕುಳ: ಗ್ರಾಮ ಪಂಚಾಯತಿ ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆ

Date:

Advertisements

ಹೊಸ ವರ್ಷದ ಆರಂಭದ ದಿನದಂದೇ ಗ್ರಾಮ ಪಂಚಾಯತಿ ಕಚೇರಿಯ ಸಿಬ್ಬಂದಿಗಳು ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆ ಉಡುಪಿ ಜಿಲ್ಲೆಯ ಬೈರಂಪಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಪಂಚಾಯತಿಯ ಸದಸ್ಯ ಸಂತೋಷ್ ಮತ್ತು ಪಿಡಿಒ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ಸಿಬ್ಬಂದಿಗಳು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಜನವರಿ 1ರ ಬುಧವಾರ ಗ್ರಾಮ ಪಂಚಾಯತಿಯನ್ನು ತೆರೆದೆ ಇರಲಿಲ್ಲ. ತಮ್ಮ ಕೆಲಸ, ಕಾರ್ಯಗಳಿಗಾಗಿ ಪಂಚಾಯತಿಗೆ ಬಂದಿದ್ದ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಕಚೇರಿಗೆ ಬೀಗ ಹಾಕಿರುವುದನ್ನು ಕಂಡು ಬೆರಗಾಗಿದ್ದಾರೆ. ಕಚೇರಿ ತೆರೆಯದೇ ಇದ್ದಿದ್ದರಿಂದ ತಮ್ಮ ಕೆಲಸಗಳಾಗದೆ ಪರದಾಡಿದ್ದಾರೆ.

ಪಂಚಾಯತಿ ಸದಸ್ಯ ಸಂತೋಷ್ ಮತ್ತು ಪಿಡಿಒ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಚೇರಿಯ ಸಿಬ್ಬಂದಿಗಳು ಈ ಹಿಂದೆಯೇ ಆರೋಪಿಸಿದ್ದರು. ಪಂಚಾಯತಿ ಅಧ್ಯಕ್ಷರಿಗೆ ದೂರನ್ನೂ ನೀಡಿದ್ದರು. ಆದರೆ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಸಂತೋಷ್ ಮತ್ತು ಪಿಡಿಒ ಉಪಟಳ ಮುಂದುವರೆದಿತ್ತು. ಹೀಗಾಗಿ, ಬೇಸತ್ತ ಸಿಬ್ಬಂದಿಗಳು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

Advertisements
image 36 3

ಬೈರಂಪಳ್ಳಿ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್ ಸುಮನಾ, ಡಿಇಒ ವಾಸಂತಿ, ಜಲಗಾರ ಮನೋಹರ್ ರಾಜೀನಾಮೆ ನೀಡಿದ್ದಾರೆ. ಪಂಚಾಯತಿ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ಪಂಚಾಯತಿ ಕಚೇರಿಯಲ್ಲಿ ಕೆಲಸದ ಸಮಯದಲ್ಲಿ ತಾವು ಎದುರಿಸುತ್ತಿರುವ ಮಾನಸಿಕ ನೋವು, ಸಂಕಟ, ಒತ್ತಡಗಳ ಬಗ್ಗೆ ವಿವರಿಸಿದ್ದು, ತಮ್ಮ ಭವಿಷ್ಯ ಮತ್ತು ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡಿರುವುದಾಗಿ ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಡೆಲ್ಲಿ ಪತ್ರಿಕೆಯಲ್ಲಿ ಮಂಡ್ಯದ ‘ಬಾಡೂಟ ಆಂದೋಲನ’ದ ಸದ್ದು-ಸುದ್ದಿ!

ಜನವರಿ 1ರಂದು ಗ್ರಾಮ ಪಂಚಾಯತಿಗೆ ಬೀಗ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉಡುಪಿ ತಾಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಂಚಾಯತಿಗೆ ಭೇಟಿ ನೀಡಿದ್ದು, ಪಂಚಾಯತಿಯ ಬಾಗಿಲು ತೆರೆಸಿದ್ದಾರೆ. ಆದರೆ, ರಾಜೀನಾಮೆ ನೀಡಿರುವ ಸಿಬ್ಬಂದಿಗಳು ಇನ್ನೂ ಕೆಲಸಕ್ಕೆ ಹಾಜರಾಗಿಲ್ಲ. ಸಮಸ್ಯೆಯನ್ನು ಜಿಲ್ಲಾಡಳಿತ ಪರಿಹರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X