ಚಿಕ್ಕಬಳ್ಳಾಪುರ | ವ್ಯಾಪಾರಿಗಳು ನಿಯಮಪಾಲಿಸದಿದ್ದಲ್ಲಿ ಎತ್ತಂಗಡಿ

Date:

Advertisements

ಬೀದಿಬದಿ ವ್ಯಾಪಾರಿಗಳ ಸಭೆಯಲ್ಲಿ ನಗರಸಭೆ ಅಧ್ಯಕ್ಷರಿಂದ ಖಡಕ್‌ ವಾರ್ನಿಂಗ್

‌ಹೋಟೆಲ್‌ ಮಾಲೀಕರು ಸಹ ನಗರದ ಬಿಬಿ ರಸ್ತೆಯಲ್ಲಿ ಪ್ರತ್ಯೇಕ ಆಹಾರ ಬಂಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇನ್ಮುಂದೆ ಈ ರೀತಿ ಮಾಡುವಂತಿಲ್ಲ. ಒಬ್ಬರಿಗೆ ಒಂದು ಕಡೆ ಮಾತ್ರ ಅವಕಾಶ. ನಿಯಮಪಾಲಿಸದಿದ್ದಲ್ಲಿ ನಗರಸಭೆ ವತಿಯಿಂದ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷ ಗಜೇಂದ್ರ ಖಡರ್‌ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ನಗರಸಭೆ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಬೀದಿಬದಿ ವ್ಯಾಪಾರಿಗಳ ಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳನ್ನು ಕುರಿತು ಅವರು ಮಾತನಾಡಿದರು.

ಹೋಟೆಲ್‌ ಮಾಲೀಕರು ರಸ್ತೆಬದಿಯಲ್ಲಿ ಆಹಾರ ಅಂಗಡಿಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುತ್ತಿರುವ ಕುರಿತು ಸಾಕಷ್ಟು ದೂರಗಳು ಬಂದಿವೆ. ಆದ್ದರಿಂದ ಇನ್ನುಮುಂದೆ ಈ ರೀತಿ ಮಾಡುವಂತಿಲ್ಲ. ಆಹಾರ ರಸ್ತೆ ನಿರ್ಮಾಣಕ್ಕೆ ಜಾಗ ನಿಗದಿ ಮಾಡಬೇಕಿದೆ. ಅಲ್ಲಿವರೆಗೆ ನಿಯಮಾನುಸಾರ ವ್ಯಾಪಾರ ಮುಂದುವರಿಸಿ ಎಂದು ಹೇಳಿದರು.

Advertisements

ನಗರಸಭೆ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಚಿಕ್ಕಬಳ್ಳಾಪುರ ನಗರ ಪ್ರವಾಸಿಗರ ನೆಚ್ಚಿನ ತಾಣವಾಗುತ್ತಿದ್ದು, ಹೊರ ಜಿಲ್ಲೆಗಳಿಂದ ಬರುವವರ ಸಂಖ್ಯೆಯೂ ಜಾಸ್ತಿ ಆಗಿದೆ. ಬೀದಿಬದಿ ಆಹಾರ ಬಂಡಿಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸೂಕ್ತ ಸ್ವಚ್ಛತೆ ಕಾಪಾಡುತ್ತಿಲ್ಲ. ಇದರಿಂದ ನಗರದ ಅಂದ ಕೆಡುತ್ತಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ನಗರದ ಸ್ವಚ್ಛತೆ, ಆಹಾರ ಸುರಕ್ಷತೆ, ಸಂಚಾರ ದಟ್ಟಣೆ ಆಗದಂತೆ ತಮ್ಮ ವ್ಯಾಪಾರ ವಹಿವಾಟುಗಳನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು.

ಬಹಳಷ್ಟು ಮಂದಿ ಹೋಟೆಲ್ ಇರುವವರು ಸಂಜೆ ವೇಳೆ ರಸ್ತೆ ಬದಿಗೆ ಅಂಗಡಿಗಳನ್ನು ತಂದು ವ್ಯಾಪಾರ ಮಾಡುತ್ತಿರುವುದು ಸಹ ಕಂಡುಬರುತ್ತಿದೆ. ಬಹುತೇಕ ಮಂದಿ ವ್ಯಾಪಾರಿಗಳು ಯಾವುದೇ ಪರವಾನಗಿ ಇಲ್ಲದೆ ವ್ಯಾಪಾರ ಮಾಡುತ್ತಿದ್ದಾರೆ. ಪರವಾನಗಿ ಇರುವವರು ಹಾಗೂ ಇಲ್ಲದವರನ್ನು ಪತ್ತೆಹಚ್ಚಿ ಡೆನಲ್ಮ್ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಭೀಮಾ ಕೋರೆಗಾಂವ್‌ ವಿಜಯೋತ್ಸವ ಹಿನ್ನೆಲೆ ವಿಜಯ ಸ್ತಂಭ ಮೆರವಣಿಗೆ

ಪರಿಸರ ಇಂಜಿನಿಯರ್‌ ಉಮಾಶಂಕರ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳು ಪಾದಚಾರಿಗಳಿಗೆ ತೊಂದರೆ ಆಗದಂತೆ ನಡೆದುಕೊಳ್ಳಬೇಕು. ಸ್ವಚ್ಛತೆ, ಆಹಾರದ ಗುಣಮಟ್ಟವನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಹೇಳಿದರು.

ಸಂಚಾರಿ ಠಾಣೆ ಎ ಎಸ್ ಐ ನಾಗರಾಜು ಮಾತನಾಡಿ, ಬೀದಿಬದಿ ವ್ಯಾಪಾರಿಗಳ ಅಂಗಡಿಗಳಿಂದ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಇದರಿಂದ ಬಿಬಿ ರಸ್ತೆಯಲ್ಲಿ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳಿಗೆ ದಾರಿಮಾಡಿಕೊಡುತ್ತಿದೆ. ಯಾರಿಗೂ ತೊಂದರೆಯಾಗದಂತೆ ವ್ಯಾಪಾರ ಮಾಡಿಕೊಂಡರೆ ಇಲಾಖೆಯಿಂದ ಯಾವುದೇ ಅಡ್ಡಿಯಿಲ್ಲ ಎಂದು ಹೇಳಿದರು.‌

ನಗರಸಭೆ2

ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ವ್ಯವಸ್ಥಾಪಕ ವೆಂಕಟಾಚಲಪತಿ ಮಾತನಾಡಿ, ಬಾಡಿಗೆ ಅಂಗಡಿಗಳು ಫುಟ್‌ಪಾತ್ ಮೇಲೆ ಬಂಡಿ ಇಟ್ಟು ಪ್ರತ್ಯೇಕ ವ್ಯಾಪಾರ ಮಾಡುತ್ತಿದ್ದಾರೆ. ಯಾರು ಸಹ ಕಾಯಂ ಶೆಡ್ ನಿರ್ಮಾಣ ಮಾಡುವಂತಿಲ್ಲ ಎಂದು ಹೇಳಿದರು. ಯಾರೇ ವ್ಯಾಪಾರಿಗಳ ಆಗಲಿ ಅನುಮತಿ ಪಡೆಯುವುದು ಕಡ್ಡಾಯ. 150ರೂಪಾಯಿ ಕಟ್ಟಿ ಎಲ್ಲರೂ ಸಹ ಕಡ್ಡಾಯವಾಗಿ ಅನುಮತಿ ಪಡೆಯಿರಿ. ಒಮ್ಮೆ ಪಡೆದರೆ 3 ವರ್ಷದವರೆಗೆ ಇರುತ್ತದೆ ಎಂದು ಹೇಳಿದರು.

ನಗರಸಭೆ ಆಯುಕ್ತ ಮನ್ಸೂರ್‌ ಅಲಿ ಮಾತನಾಡಿ, ಹೋಟೆಲ್ ಮಾಲೀಕರು ರಸ್ತೆಬದಿ ಅಂಗಡಿಗಳನ್ನು ಇಡುವಂತಿಲ್ಲ. ಒಬ್ಬರಿಗೆ ಒಂದೇ ಅಂಗಡಿಗೆ ಮಾತ್ರ ಅವಕಾಶ. ಯಾರಾದರೂ ನಿಯಮ ಉಲ್ಲಂಘಿಸಿದಲ್ಲಿ ಸೂಕ್ತ ಕ್ರಮವಹಿಸಿ ಎಂದು ಸೂಚನೆ ನೀಡಿದರು.

ರಸ್ತೆ ಬದಿ ವ್ಯಾಪಾರಿಗಳಿಂದ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗ್ತಿದೆ. ಯಾವುದೇ ಅನುಮತಿ ಇಲ್ಲದೆ ಬೀದಿಬದಿ ವ್ಯಾಪಾರ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ, ತ್ಯಾಜ್ಯ ನಿರ್ವಹಣೆ, ಸ್ವಚ್ಛತೆ, ಗುಣಮಟ್ಟದ ಆಹಾರ ವಿತರಣೆ ಆಗುತ್ತಿಲ್ಲ ಎಂದು ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ನಗರ ಠಾಣೆ ಸಬ್‌ ಇನ್ಸ್‌ಪೆಕ್ಟರ್ ಅಮರ್‌ ಮೋಗ್ಲಿ ಮಾತನಾಡಿ, ರಾತ್ರಿ 11 ಗಂಟೆಗೆ ಸರಿಯಾಗಿ ಅಂಗಡಿಗಳನ್ನು ಬಂದ್‌ ಮಾಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಾರು, ಬೈಕ್‌ಗಳು ರಸ್ತೆ ಬದಿಯಲ್ಲೇ ನಿಲ್ಲುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ರಸ್ತೆ ಬದಿ ದಟ್ಟಣೆ ಆಗದಂತೆ ವ್ಯಾಪಾರಸ್ತರೇ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ವ್ಯಾಪಾರಕ್ಕೆ ಅವಕಾಶ ಇರುವುದಿಲ್ಲ ಎಂದು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರಸಭೆ1

ಇದೇ ವೇಳೆ ಮಾತನಾಡಿದ ಬೀದಿಬದಿ ವ್ಯಾಪಾರಿಗಳು, ಶನಿವಾರ, ಭಾನುವಾರ ಸೇರಿದಂತೆ ರಜಾ ದಿನಗಳಂದು ಅಂಗಡಿಗಳನ್ನು ತೆರೆಯಲು ಹೆಚ್ಚಿನ ಸಮಯಾವಕಾಶಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನಗರ ಠಾಣೆ ಪಿಎಸ್‌ಐ ಅಮರ್‌ ಮೋಗ್ಲಿ ಇದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಸ್ಲಾಂ ಪಾಷ ಮಾತನಾಡಿ, ಪೊಲೀಸ್‌ ಇಲಾಖೆಯಿಂದ ವಾರಕ್ಕೊಮ್ಮೆ ಬಂದು ಬಿಗಿ ಬಂದೋಬಸ್ತ್‌ ಮಾಡುವಂತೆ ಮನವಿ ಮಾಡಿದರು.

ಆಹಾರ ಸುರಕ್ಷತಾ ಅಧಿಕಾರಿ ಬಿ ಹರೀಶ್ ಮಾತನಾಡಿ, ಆಹಾರ ಗುಣಮಟ್ಟ ಮತ್ತು ನೀರಿನಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಗಳಾಗುತ್ತಿವೆ. ಪ್ರತಿಯೊಬ್ಬರೂ ದುಡಿಮೆಯ ದೃಷ್ಟಿಯಲ್ಲಷ್ಟೇ ವ್ಯಾಪಾರ ಮಾಡುತ್ತಿದ್ದಾರೆ. ಆದರೆ, ಜನರ ಆರೋಗ್ಯ ದೃಷ್ಟಿಯಿಂದಲೂ ಪ್ರತಿಯೊಬ್ಬರೂ ಆಲೋಚಿಸಬೇಕು ಎಂದು ಸಲಹೆ ಮಾಡಿದರು.

ಪ್ರತಿಯೊಬ್ಬರೂ ಮಾರಾಟದ ಪರವಾನಗಿ ಪಡೆಯಬೇಕು. ಪ್ರತಿ ವರ್ಷವೂ ಎಲ್ಲರೂ ಪರವಾನಗಿ ನವೀಕರಣ ಮಾಡಿಸಿಕೊಳ್ಳಬೇಕು. ತಪ್ಪಿದಲ್ಲಿ 6 ತಿಂಗಳು ಜೈಲುವಾಸ ಮತ್ತು ಒಂದು ಲಕ್ಷ ರೂಪಾಯಿವರೆಗೆ ದಂಡ ವಿಧಿಸಲಾಗುವುದು. ಅದಷ್ಟೇ ಅಲ್ಲದೇ ಇಲಾಖೆಯಲ್ಲಿ ಕಾನೂನು ರೀತಿ ಕ್ರಮಕ್ಕೆ ಅವಕಾಶವಿದ್ದು, ಎಫ್‌ಐಆರ್‌ ಕೂಡ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಬೋಂಡಾ, ಬಜ್ಜಿ ಮಾರುವ ಕೆಲ ವ್ಯಾಪಾರಿಗಳು ಕರಿದ ತಿಂಡಿ, ತಿನಿಸುಗಳನ್ನು ಪತ್ರಿಕೆಗಳ ಕಾಗದಗಳು ಮತ್ತು ಪ್ಲಾಸ್ಟಿಕ್ ಪೇಪರ್ ಬಳಕೆ ಮಾಡಲಾಗುತ್ತಿದೆ. ಕರಿದ ಆಹಾರಗಳಿಗೆ ಧೂಳು ಬರದಂತೆ ಕ್ರಮವಹಿಸಬೇಕು. ಆದರೆ ಯಾರೊಬ್ಬರೂ ಸಹ ಇದನ್ನು ಪಾಲಿಸುತ್ತಿಲ್ಲ. ಹಾಗಾಗಿ ಎಲ್ಲರೂ ಜನರ ಆರೋಗ್ಯ ಸುರಕ್ಷತಾ ಮನೋಭಾವದಿಂದ ವ್ಯಾಪಾರ ಮಾಡಬೇಕು. ಇದಲ್ಲದೆ ಕುಡಿಯಲು ಆರ್ ಒ ವಾಟರ್ ಕೊಡಬೇಕು. ಇದು ಸಹ ನಿಮ್ಮ ಜವಾಬ್ದಾರಿ. ಆಹಾರ ವಸ್ತುಗಳನ್ನು ಕೀಟಗಳು ಮತ್ತು ಇಲಿಗಳಿಂದಲೂ ರಕ್ಷಣೆ ಮಾಡುವುದು ಸಹ ವ್ಯಾಪಾರಿಗಳು ಮತ್ತು ಮಾಲೀಕರ ಕರ್ತವ್ಯ ಎಂದು ಹೇಳಿದರು.

ಅಡುಗೆ ಮಾಡುವ ಭಟ್ಟರು ಸಾಧ್ಯವಾದಲ್ಲಿ ಯೂನಿಫಾರ್ಮ್‌, ತಲೆಗವಸು, ಬಾಯಿಗವಸು ಧರಿಸುವ ಜತೆಗೆ ಸ್ವಯಂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವ್ಯಾಪಾರದ ಸಂದರ್ಭದಲ್ಲಿ ಗಾಯಗಳು, ಜ್ವರ, ಇತ್ಯಾದಿ ಖಾಯಿಲೆ ಇದ್ದರೆ ಅಂತಹವರು ವ್ಯಾಪಾರ ಮಾಡಬಾರದು. ಸಸ್ಯಾಹಾರ ಮತ್ತು ಮಾಂಸಾಹಾರಗಳನ್ನು ಎಲ್ಲರೂ ಪ್ರತ್ಯೇಕವಾಗಿ ಮಾರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಆಹಾರ ಸುರಕ್ಷತಾ ಅಧಿಕಾರಿಯ ಅಸಹಾಯಕ ಉತ್ತರ :

ಆಹಾರ ಗುಣಮಟ್ಟದ ಜಾಗೃತಿ, ಸುರಕ್ಷತಾ ಕ್ರಮಗಳ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಆಹಾರ ಸುರಕ್ಷತಾ ಅಧಿಕಾರಿ ಹರೀಶ್‌, ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಆದಕಾರಣ ಜಾಗೃತಿ ಮತ್ತು ಸೂಕ್ತ ಕ್ರಮವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ತೋರಿದ ಪ್ರಸಂಗ ನಡೆಯಿತು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಸಭೆಯಲ್ಲಿ ನಗರಸಭೆ ಸದಸ್ಯ ವೆಂಕಟೇಶ್‌, ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಸ್ಲಾಂ ಪಾಷ ಹಾಗೂ ಬಿಬಿ ರಸ್ತೆಯಲ್ಲಿನ ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X