ಚಿಂದಿ ಆಯುತ್ತಿದ್ದ ಮಕ್ಕಳಿಗೆ ಸಿಕ್ತು ಮೂಟೆಗಟ್ಟಲೆ 500 ರೂ. ನೋಟುಗಳು; ವಿಡಿಯೋ ವೈರಲ್

Date:

Advertisements

ಚಿಂದಿ ಆಯುತ್ತಿದ್ದ ಮಕ್ಕಳಿಗೆ 500 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಸಿಕ್ಕಿದ್ದು, ಮಕ್ಕಳು ನೋಟುಗಳ ಕತೆಗಳನ್ನು ಹಿಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದರೆ, ಮಕ್ಕಳಿಗೆ ಸಿಕ್ಕಿರುವ ನೋಟುಗಳು ಪ್ರಸ್ತುತ ಚಲಾವಣೆಯಲ್ಲಿರುವ ನೋಟುಗಳಲ್ಲ. 2016ರ ನವೆಂಬರ್‌ನಲ್ಲಿ ಮೋದಿ ಸರ್ಕಾರ ಅಮಾನ್ಯಗೊಳಿಸಿದ ನೋಟುಗಳಾಗಿವೆ. ಬರೋಬ್ಬರಿ 8 ವರ್ಷಗಳ ಬಳಿಕ, ಮತ್ತೆ ಆ ನೋಟುಗಳ ಕಂತೆಗಳು ಕಸ ಸುರಿಯುವ ಜಾಗದಲ್ಲಿ ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ವಿಡಿಯೋದಲ್ಲಿ, ಇಬ್ಬರು ಮಕ್ಕಳು ನೋಟುಗಳ ಕಂತೆಗಳನ್ನಿಡಿದು ಮುತ್ತಿಕ್ಕುವ ದೃಶ್ಯ ಸೆರೆಯಾಗಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲವರು, “ಚಿಂದಿ ಹೆಕ್ಕುವ ಮಕ್ಕಳಿಗೆ ಹಲವು ಬ್ಯಾಗ್‌ಗಳಲ್ಲಿ ಹಳೆಯ 500 ರೂ. ನೋಟುಗಳು ಸಿಕ್ಕಿವೆ. ಆ ನೋಟುಗಳನ್ನು ಹೊಸ ನೋಟುಗಳೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳಲು ಮಕ್ಕಳಿಗೆ ಆರ್‌ಬಿಯ ಅವಕಾಶ ನೀಡಬೇಕು” ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು, ಅದರಲ್ಲೂ ಹಿಂದುತ್ವ ಕೋಮುವಾದಿಗಳು ಈ ವಿಡಿಯೋ ಪಾಕಿಸ್ತಾನದ್ದು. ಭಾರತದ ನೋಟುಗಳು ಪಾಕಿಸ್ತಾನದಲ್ಲಿ ಪತ್ತೆಯಾಗಿವೆ ಎಂದೆಲ್ಲ ಸುಳ್ಳು ಹಬ್ಬಿಸುತ್ತಿದ್ದಾರೆ.

Advertisements

ಆದರೆ, ಈ ವಿಡಿಯೋ ಇತ್ತೀಚಿನದ್ದಲ್ಲ. 2017ರದ್ದು ಮತ್ತು ಭಾರತದಲ್ಲಿಯೇ ಪತ್ತೆಯಾಗಿದ್ದ ಘಟನೆಯದ್ದು ಎಂದು ‘ಕನ್ನಡ ಫ್ಯಾಕ್ಟ್‌ ಚೆಕ್‌’ ಪತ್ತೆ ಮಾಡಿದೆ. 2017ರ ಜನವರಿ ತಿಂಗಳಿನಲ್ಲಿ ಉತ್ತರಾಖಂಡದ ಋಷಿಕೇಷ ಪಟ್ಟಣದ ತಪೋವನ ಟ್ರೈ ಜಂಕ್ಷನ್ ಬಳಿ ನೋಟುಗಳು ಪತ್ತೆಯಾಗಿದ್ದ ಘಟನೆಯ ವಿಡಿಯೋ ಇದಾಗಿದೆ. 2017ರಲ್ಲಿಯೂ ಈ ವಿಡಿಯೋ ವೈರಲ್ ಆಗಿತ್ತು ಎಂಬುದನ್ನು ಕಂಡುಕೊಂಡಿದೆ.

ಈ ವರದಿ ಓದಿದ್ದೀರಾ?: ಮೋದಿ ಮಂಕುಬೂದಿಗೆ ಇನ್ನೆಷ್ಟು ದಿನ ಮರುಳಾಗುತ್ತಾರೆ ಯುವಜನರು?

ಈ ಹಿಂದೆ, ಚಲಾವಣೆಯಲ್ಲಿದ್ದ 500 ಮತ್ತು 1,000 ಮುಖ ಬೆಲೆಯ ನೋಟುಗಳನ್ನು 2016ರ ನವೆಂಬರ್‌ 8ರಂದು ಪ್ರಧಾನಿ ಮೋದಿ ಅವರು ಏಕಾಏಕಿ ಅಮಾನ್ಯಗೊಳಿಸಿ ಆದೇಶ ಹೊರಡಿಸಿದ್ದರು. ಪರಿಣಾಮ, ನೋಟುಗಳ ಬದಲಾವಣೆಗಾಗಿ ಹಲವಾರು ಮಂದಿ ಬ್ಯಾಂಕುಗಳ ಮುಂದೆ ದಿನಗಟ್ಟಲೆ ಸಾಕುಗಳಲ್ಲಿ ನಿಂತು ಬಸವಳಿದಿದ್ದರು. ನೂರಾರು ಮಂದಿ ಅನಾರೋಗ್ಯಕ್ಕೆ ತುತ್ತಾಗಿ, ಸಾವನ್ನಪ್ಪಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X