ದೃಢ ಪುರಾವೆ ಲಭ್ಯವಾಗುವವರೆಗೂ ಅದಾನಿ ಗ್ರೀನ್ ವಿರುದ್ಧ ಯಾವುದೇ ಕ್ರಮವಿಲ್ಲ: ಚಂದ್ರಬಾಬು ನಾಯ್ಡು

Date:

Advertisements

ಲಂಚದ ಆರೋಪದ ಮೇಲೆ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (ಎಜಿಇಎಲ್) ವಿರುದ್ಧ ದೃಢ ಪುರಾವೆ ಲಭ್ಯವಾಗುವವರೆಗೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಗುರುವಾರ ಹೇಳಿದ್ದಾರೆ.

ಅದಾನಿ ಗ್ರೂಪ್ ವಿರುದ್ಧ ಈಗಾಗಲೇ ಹಿಂಡನ್‌ಬರ್ಗ್ ಸಂಸ್ಥೆ ಷೇರು ಮಾರುಕಟ್ಟೆಯಲ್ಲಿ ವಂಚನೆ ಮಾಡಿರುವ ಆರೋಪಗಳನ್ನು ಮಾಡಿದೆ. ಇದಾದ ಬೆನ್ನಲ್ಲೇ ಅದಾನಿ ಗ್ರೀನ್ ವಿರುದ್ಧ ಯುನೈಟೆಡ್ ಸ್ಟೇಟ್ಸ್ ನ್ಯಾಯಾಲಯ ದೋಷಾರೋಪಣೆ ಮಾಡಿದೆ.

ಇದನ್ನು ಓದಿದ್ದೀರಾ? ₹371 ಕೋಟಿ ಭಾರೀ ಹಗರಣ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಇಡಿಯಿಂದ ಕ್ಲೀನ್ ಚಿಟ್

Advertisements

ಅಮೆರಿಕನ್ ಹೂಡಿಕೆದಾರರನ್ನು ವಂಚಿಸಿದ, ಅಧಿಕಾರಿಗಳಿಗೆ ಲಂಚ ನೀಡಿದ, ಫೆಡರಲ್ ಸೆಕ್ಯುರಿಟೀಸ್ ಕಾನೂನುಗಳನ್ನು ಉಲ್ಲಂಘಿಸಿದ ದೋಷಾರೋಪಣೆಯನ್ನು ಅದಾನಿ ಗ್ರೀನ್ ಮೇಲೆ ಮಾಡಲಾಗಿದೆ.

ಇದಾದ ಬೆನ್ನಲ್ಲೇ ತೆಲಂಗಾಣ ಸರ್ಕಾರವು ಅದಾನಿ ಗ್ರೀನ್ ಹೂಡಿಕೆಯನ್ನು ನಿರಾಕರಿಸಿದೆ. ಆದರೆ ಎನ್‌ಡಿಎ ಕೂಟದಲ್ಲಿರುವ ಆಂಧ್ರಪ್ರದೇಶದ ಟಿಡಿಪಿ ಸರ್ಕಾರ ಮಾತ್ರ ಅದಾನಿ ಸಂಸ್ಥೆಯಿಂದ ದೂರವಾಗುತ್ತಿಲ್ಲ. ಈ ಮೂಲಕ ವಿಪಕ್ಷಗಳ ವಾಗ್ದಾಳಿಗೆ ಒಳಗಾಗಿದೆ.

ಇದನ್ನು ಓದಿದ್ದೀರಾ? ಅದಾನಿ ಸಮೂಹ ಘೋಷಿಸಿದ್ದ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ತೆಲಂಗಾಣ ಸರ್ಕಾರ

ಅದಾನಿ ಸಂಸ್ಥೆ ಬಗ್ಗೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಪ್ರಧಾನ ಕಚೇರಿಯಲ್ಲಿ ಮಾತನಾಡಿದ ನಾಯ್ಡು “ಸರಿಯಾದ ಪುರಾವೆ ಲಭ್ಯವಾಗದೆ ನಾವು ಒಪ್ಪಂದಗಳಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ದೃಢ ಪುರಾವೆ ಸಿಗುವವರೆಗೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ನಮಗೆ ಹೆಚ್ಚಿನ ಪುರಾವೆ ಬೇಕು” ಎಂದು ಹೇಳಿಕೊಂಡಿದ್ದಾರೆ.

“ನಾವು ಯುಎಸ್ಎಯಲ್ಲಿ ನಡೆಯುತ್ತಿರುವ ಪ್ರಕರಣದ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ದೃಢವಾದ ಪುರಾವೆ ದೊರೆತರೆ ಮಾತ್ರ ಕ್ರಮಕೈಗೊಳ್ಳಲಾಗುವುದು” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X