ಅಂತಿಮ ಟೆಸ್ಟ್‌ನಲ್ಲಿ ಬುಮ್ರಾಗೆ ನಾಯಕತ್ವ| ಭಾರತದ 4 ವಿಕೆಟ್ ಪತನ: ಕನ್ನಡಿಗನಿಗೆ ಸ್ಥಾನ

Date:

Advertisements

ಬಾರ್ಡರ್-ಗವಾಸ್ಕರ್‌ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾ ಟಿಂಗ್ ಆರಂಭಿಸಿದ್ದು, ಭೋಜನ ವಿರಾಮಕ್ಕೆ ಅಗ್ರ ಕ್ರಮಾಂಕದ ನಾಲ್ವರ ವಿಕೆಟ್ ಕಳೆದುಕೊಂಡಿದೆ.ಟೀಂ ಇಂಡಿಯಾ 38 ಓವರ್‌ಗಳಲ್ಲಿ 81 ರನ್‌ಗಳಿಗೆ 4 ವಿಕೆಟ್ ಪತನವಾಗಿದೆ

ಜನವರಿ 2ರಂದು ನಡೆದ ಬೆಳವಣಿಗೆಗಳು ನೀಡಿದ ಸುಳಿವಿನಂತೆ ರೋಹಿತ್ ಶರ್ಮಾ ಅವರು ಈ ಪಂದ್ಯ ದಿಂದ ಹಿಂದೆ ಸರಿದಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುವ ಅವಕಾಶ ಪಡೆದಿದ್ದಾರೆ.

ಟಾಸ್ ಗೆದ್ದ ಬುಮ್ರಾ ಮೊದಲು ಬ್ಯಾಟ್ ಆರಂಭಿಸುವ ತೀರ್ಮಾನ ತೆಗೆದುಕೊಂಡರು. ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶುಭ್‌ಮನ್ ಗಿಲ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಂಡ ಕೂಡಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ ಹಾಗೂ ಆಕಾಶ್‌ದೀಪ್ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

Advertisements

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ಕೆ ಎಲ್ ರಾಹುಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನು ಮೆಲ್ಬರ್ನ್ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೇವಲ 10 ರನ್ ಗಳಿಸಿ ಸ್ಕಾಟ್ ಬೊಲೆಂಡ್‌ಗೆ ವಿಕೆಟ್ ಒಪ್ಪಿಸಿದರು.

ಈ ಸುದ್ದಿ ಓದಿದ್ದೀರಾ? IND vs AUS | ಶೋಯೆಬ್ ಅಖ್ತರ್ ದಾಖಲೆ ಮುರಿದ ಜಸ್‌ಪ್ರೀತ್ ಬೂಮ್ರಾ

 ಜೈಸ್ವಾಲ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ಸಿಕ್ಕ ಜೀವದಾನವನ್ನು ಬಳಸಿಕೊಳ್ಳುವತ್ತ ದಿಟ್ಟ ಹೆಜ್ಜೆಯಿಡಲಾರಂಭಿಸಿದ್ದಾರೆ. ಮೂರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಅಮೂಲ್ಯ 40 ರನ್‌ಗಳ ಜತೆಯಾಟ ನಿಭಾಯಿಸಿದರು.

ಇನ್ನೇನು ಊಟದ ವಿರಾಮಕ್ಕೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಶುಭ್‌ಮನ್ ಗಿಲ್, ಸ್ಪಿನ್ನರ್ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಗಿಲ್ ವಿಕೆಟ್ ಒಪ್ಪಿಸುವ ಮುನ್ನ 64 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 20 ರನ್ ಗಳಿಸಿದರು. ಪಾನೀಯ ವಿರಾಮದ ವೇಳೆಗೆ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ(17) ಕೂಡ ಬೊಲೆಂಡ್‌ ಬೌಲಿಂಗ್‌ನಲ್ಲಿ ಔಟಾದರು.

ಪಂತ್‌(14) ಹಾಗೂ ರವೀಂದ್ರ ಜಡೇಜಾ(4 ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X