ವಿಜಯಪುರ | ಜ.4ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್: ಜಿಲ್ಲಾಧಿಕಾರಿ ಟಿ ಭೂಬಾಲನ್

Date:

Advertisements

ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ವಿಜಯಪುರ ಜಿಲ್ಲೆಯ 13 ಗ್ರಾಮಗಳಲ್ಲಿ ಜನವರಿ 4ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.

ಪತ್ರಿಕೆ ಪ್ರಕಟಣೆ ತಿಳಿಸಿರುವ ಅವರು, “ಜನವರಿ 4ರ ಬೆಳಿಗ್ಗೆ 11ಕ್ಕೆ ನಗರದ ಯೋಗಾಪುರ ಕಾಲೋನಿಯ ವಾರ್ಡ್ ನಂ.16ರ ಹನುಮಾನ ದೇವಸ್ಥಾನ, ಬಿಸನಾಳ ಗ್ರಾಮದ ಹನುಮಾನ ದೇವಸ್ಥಾನ, ಕೋಟ್ಯಾಳ ಗ್ರಾಮದ ಹನುಮಾನ ದೇವಸ್ಥಾನ, ಬೆಳ್ಳುಬ್ಬಿ ಗ್ರಾಮದ ಮಳೆಸ್ವಾಮಿ ದೇವಸ್ಥಾನ, ಗಣಿ ಗ್ರಾಮದ ಬಸವೇಶ್ವರ ದೇವಸ್ಥಾನ, ತಡಲಗಿ ಗ್ರಾಮದ ರಾಮಾ ಅವದೂತ ಮಠ, ಆಲಕೋಪ್ಪರ ಗ್ರಾಮದ ಗ್ರಾಮದೇವತೆ ದೇವಸ್ಥಾನ, ಶಿವಪುರ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ನಂದ್ರಾಳ ಗ್ರಾಮದ ಗ್ರಾಮ ಚಾವಡಿ, ಕಣ್ಣಗುಡ್ಡಿಹಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಸರ್ಕಾರಿ ಶಾಲೆ, ಹಂಚಲಿ ಗ್ರಾಮದ ಹನುಮಾನ ದೇವಸ್ಥಾನ, ಆಹೇರಿ ಗ್ರಾಮದ ಕನ್ನಡ ಗಂಡು ಮಕ್ಕಳ ಸರ್ಕಾರಿ ಶಾಲೆಯಲ್ಲಿ ಪಿಂಚಣಿ ಅದಾಲತ್ ಜರುಗಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

Advertisements

“ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಎನ್‌ಪಿಸಿಐ ಮ್ಯಾಪಿಂಗ್ ಕಾರ್ಯವನ್ನು ಮಾಡಿಸಬೇಕು. ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X