ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

Date:

Advertisements

ಮಂಡ್ಯ ವಿವಿ(ವಿಶ್ವವಿದ್ಯಾಲಯ)ಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವುದು ಹಾಗೂ ವಿವಿಗೆ ರಾಜಮಾತೆ ಕೆಂಪನಂಜಮ್ಮಣಿ ಅವರ ಹೆಸರಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ಯಿಂದ ಕುಲಪತಿಗಳು ಮತ್ತು ಕುಲಸಚಿವರ ಮೂಲಕ ಉನ್ನತ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

“ಮಂಡ್ಯ ವಿಶ್ವವಿದ್ಯಾಲಯವು ಸರ್ವ ಸಾಮಾನ್ಯ ಸೌಲಭ್ಯ ಹೊಂದಿದ್ದು, ಹಲವಾರು ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಪ್ರಸ್ತುತ ಪ್ರಪಂಚಕ್ಕೆ ಕೌಶಲ್ಯಾಧಾರಿತ ಪದವೀಧರರನ್ನು ನೀಡುತ್ತ ಬರುತ್ತಿರುವುದು ಶ್ಲಾಘನೀಯ” ಎಂದರು.

“ವಿಶ್ವವಿದ್ಯಾಲಯದಲ್ಲಿ ನಮ್ಮ ಸ್ಥಳೀಯ ರೈತರು, ಕಾರ್ಮಿಕರು, ಬಡವರು, ಕಟ್ಟಡ ಕಾರ್ಮಿಕರ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತಯ್ತಿರುವುದರಿಂದ ಅವರು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಪದವಿ ತರಗತಿಗಳಿಗೆ ಬೆಂಗಳೂರು, ಮೈಸೂರು ಭಾಗದ ಖಾಸಗಿ ವಿವಿಗಳಿಗೆ ತೆರಳಬೇಕಿದೆ. ಅದಲ್ಲದೆ ಅಲ್ಲಿಗೆ ಭರಿಸುವ ಪದವಿ ಶುಲ್ಕ ಲಕ್ಷಾಂತರ ರೂಪಾಯಿಗಳಾಗಿರುತ್ತದೆ. ಆದಕಾರಣ ತರಗತಿಗಳನ್ನು 2024-25ನೇ ಸಾಲಿಗೆ ಪ್ರಾರಂಭವಾಗುವಂತೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸಬೇಕು” ಎಂದು ಸರ್ಕಾರ ಮತ್ತು ವಿಶ್ವವಿದ್ಯಾಲಯಕ್ಕೆ ಒತ್ತಾಯಿಸಿದರು.

Advertisements

“ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪನಂಜಮ್ಮಣಿಯವವರ ಹೆಸರಿನಲ್ಲಿ ಕ್ಷೇಮಾಭಿವೃದ್ಧಿ ಮತ್ತು ಸಮಸ್ತ ಮೈಸೂರು ಸಂಸ್ಥಾನದ ಅಭಿವೃದ್ಧಿಗೂ ಹಿನ್ನೆಲೆಯಾಗಿ ನಿಂತು ಕಾರಣರಾಗಿರುವುದರಿಂದ ಅಲ್ಲದೆ ಮಹಿಳಾ ಸಮಾನತೆಗಾಗಿ ಮತ್ತು ಸಾಧಕಿಯಾಗಿರುವುದರಿಂದ ಮಂಡ್ಯ ವಿಶ್ವವಿದ್ಯಾಲಯಕ್ಕೆ ಮಾತೆ ಕೆಂಪನಂಜಮ್ಮಣ್ಣಿ ಅವರ ಹೆಸರನ್ನು ನಾಮಕರಣ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

“ಕುಲಪತಿಗಳು, ಕುಲಸಚಿವರು, ಉನ್ನತ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ಸೂಕ್ತ ಕ್ರಮ ವಹಿಸಬೇಕು” ಎಂದು ಕೋರಿದರು.

ಮಂಡ್ಯ ಜಿಲ್ಲಾಧ್ಯಕ್ಷ ಎಚ್ ಡಿ ಜಯರಾಂ, ಶಿವರಾಮೆಗೌಡ, ಮಂಚಶೆಟ್ಟಿ, ಪಲ್ಲವಿ, ಮನು ಸೇರಿದಂತೆ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X