ಕೊಪ್ಪಳ | ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ: ಸಂವಿಧಾನ ಸಂರಕ್ಷಣಾ ಒಕ್ಕೂಟ ಒತ್ತಾಯ

Date:

Advertisements

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ಲಘುವಾಗಿ ಮಾತನಾಡಿರುವ ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ, ಕೇಂದ್ರ ಗೃಹಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂವಿಧಾನ ಸಂರಕ್ಷಣಾ ಒಕ್ಕೂಟ ಒತ್ತಾಯಿಸಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಬೃಹತ್‌ ಹೋರಾಟದಲ್ಲಿ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಡಾ ಬಿ ಆರ್ ಅಂಬೇಡ್ಕರ್ ರಚಿಸಿರುವ ಭಾರತದ ಸಂವಿಧಾನ ಮೇಲೆ ಸಂಸತ್‌ ಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅವರು ಕೊಟ್ಟಂತಹ ಎಲ್ಲ ರಾಜಕೀಯ ಅಧಿಕಾರಿವನ್ನು ಮರೆತು ಮಹಾನ್ ಮಾನವತಾವಾದಿ‌ ಅಂಬೇಡ್ಕರ್‌ ಬಗ್ಗೆ ಲಘವಾಗಿ ಮಾತನಾಡಿದ ಅಮಿತ್‌ ಶಾನನ್ನು ಕೇಂದ್ರದ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ದೇಶದಿಂದ ಗಡಿಪಾರು ಮಾಡಬೇಕು. ಅಲ್ಲದೆ ಪದೇಪದೆ ಸಂವಿಧಾನದ ವಿರುದ್ಧ ಹೇಳಿಕೆ ನೀಡುತ್ತಿರುವ ಕೆಲವು ಲೋಕಸಭಾ ಸಂಸದರನ್ನೂ ದೇಶದಿಂದ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.

Advertisements
ಅಮಿತ್‌ ಶಾ ವಿರುದ್ಧ ಪ್ರತಿಭಟನೆ ಕೊಪ್ಪಳ 1

“ಚಹಾ ಮಾರುವ ವ್ಯಕ್ತಿ ಇವತ್ತು ಪ್ರಧಾನ ಮಂತ್ರಿ ಹುದ್ದೆಗೆ ಹೋಗುತ್ತಾರೆಂದರೆ ಅದು ಬಾಬಾ ಸಾಹೇಬ್‌ರು ರಚಿಸಿದ ಸಂವಿಧಾನದ ಅಡಿಯಲ್ಲಿಯೇ ಹೊರತು, ನಿನ್ನ ದೇವರಿಂದಲ್ಲ. ಕೊಟ್ಟಿದ್ದನ್ನು ಮರೆತು ಕಾಲ್ಪನಿಕ ದೇವರುಗಳನ್ನು ಸ್ಮರಿಸುವಂತೆ ಹೇಳುವ ಮೂಢತನಕ್ಕೆ ದಿಕ್ಕಾರವಿರಲಿ” ಎಂದು ಮರಿಯಪ್ಪ ಸಾಲೋನಿ ಆಕ್ರೋಶ ವ್ಯಕ್ತಪಡಿಸಿದರು.

ಸಿರಾಜ್ ಅಹ್ಮದ್ ಅವರು ಮಾತನಾಡಿ, “ಸಂವಿಧಾನದ ಅಡಿಯಲ್ಲಿ ಎಲ್ಲರೂ ಅಧಿಕಾರದ ಗದ್ದುಗೆ ಏರಿ, ಈಗ ಬಾಬಾ ಸಾಹೇಬ್ ಹೆಸೆರು ಒಂದು ವ್ಯಸನವೆಂದು ಹೇಳುತ್ತಿದ್ದಾರೆ. ಇದು ಅಂಬೇಡ್ಕರ್ ಅವರಿಗೆ, ಶೋಷಿತ ಸಮುದಾಯಗಳ ಅಸ್ಮಿತೆಗೆ ಮಾಡಿದ ಅಪಮಾನ. ಮನುವಾದಿ ನಿರಂತರ ಸಂವಿಧಾನವನ್ನು ಹರಿಯುತ್ತಿದ್ದಾರೆ. ಅದು ನಮಗೆ ಅರ್ಥವಾಗುತ್ತಿಲ್ಲ. ಇವತ್ತು ನಾವು ಎಚ್ಚೆತ್ತುಕೊಳ್ಳದಿದ್ದರೆ ಪ್ರಜಾಪ್ರಭುತ್ವದ ಅವನತಿಯಾಗುವ ಕಾಲ ಸಮೀಪ ಬರುತ್ತಿದೆ. ಸಂವಿಧಾನದ ಮೂಲ ಆಶಯವನ್ನು ಬದಲಾಯಿಸುವ ಎಲ್ಲ ತಂತ್ರಗಾರಿಕೆಗಳೂ ನಡೆಯುತ್ತಿವೆ. ಆದ್ದರಿಂದ, ಈಗಿಂದಲೇ ತೀವ್ರ ಹೋರಾಟಕ್ಕೂ ನಾವು ಸಜ್ಜಾಗಬೇಕಿದೆ” ಎಂದು ಪ್ರತಿಭಟನಾಕಾರರಿಗೆ ಎಚ್ಚರಿಕೆ ಕರೆಕೊಟ್ಟರು.

ಅಮಿತ್‌ ಶಾ ವಿರುದ್ಧ ಪ್ರತಿಭಟನೆ ಕೊಪ್ಪಳ 2

ಯಲ್ಲಪ್ಪ ಕಟ್ಟಿಮನಿ ಮಾತನಾಡಿ, “ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಅಮಿತ್ ಶಾ ಅವರು ಬೇಕಾದರೆ ತಮ್ಮ ರಾಮನ ಜಪ ಮಾಡಿ ಸ್ವರ್ಗಕ್ಕೆ ಹೋಗಲಿ. ನಮಗೆ ಅಂಬೇಡ್ಕರ್ ಒಬ್ಬರೇ ಸಾಕು. ಅವರ ಹೆಸರಲ್ಲೇ ಸಮಾನತೆ ಇದೆ, ಜಾಗೃತಿ, ಅರಿವು, ಉಳಿವು ಎಲ್ಲವೂ ಇದೆ. ‘ಸ್ವರ್ಗ ಹೋದರೂ ಹೋಗಲಿ, ಬಾಬಾ ಸಾಹೇಬ್ ಅಂಬೇಡ್ಕರ್ ಮಾತ್ರ ನಮಗಿರಲಿ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮನುಸ್ಮೃತಿ, ಆರೆಸ್ಸೆಸ್ ಕುರಿತು‌ ಅಂಬೇಡ್ಕರ್ ಕಠಿಣವಾಗಿ ಟೀಕಿಸಿದ್ದರು: ಮಾಜಿ ಶಾಸಕ ರಾಜು ಆಲಗೂರ

ವೀರನಗೌಡ ಮಾಲಿ ಪಾಟೀಲ್ ಮಾತನಾಡಿ, “ದೇವರು-ಧರ್ಮದ ಹೆಸರಲ್ಲಿ ರಾಜಕೀಯ ಮಾಡುವ ಕೇಂದ್ರ ಸರ್ಕಾರದ ನಾಯಕರಿಗೆ ಅಂಬೇಡ್ಕರ್ ಶಕ್ತಿಯ ಬಗ್ಗೆ ಗೊತ್ತಿಲ್ಲ. ಇವರಿಗೆ ದಲಿತರು, ಶೋಷಿತರ ನೋವುಗಳೂ ಗೊತ್ತಿಲ್ಲ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ಕಂದಕ ಸೃಷ್ಟಿಸಿ‌ ಕೋಮುದ್ವೇಷ ಹರಡಿ ದೇಶದ ಜನತೆಯ ನೆಮ್ಮದಿ, ಶಾಂತಿಯನ್ನು ಹಾಳುಮಾಡಿದ್ದಾರೆ. ಈಗ ಮತ್ತೆ ವಿಶ್ವಜ್ಞಾನಿಯಾದ ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿ ಅವರಿಗೆ ಅವಮಾನಿ ಮಾಡಿರುವ ಗೃಹಮಂತ್ರಿಯ ಹೇಳಿಕೆಯನ್ನು ಖಡಾಖಂಡಿತವಾಗಿ ಖಂಡಿಸುತ್ತೆವೆ” ಎಂದರು.

ಮರಿಯಪ್ಪ ಸಾಲೋನಿ, ಖಾಜಾಹುಸೇನ್ ಮುಲ್ಲಾ, ಎಸ್ ಡಿ ಮಂಜಪ್ಪ, ಯಲ್ಲಪ್ಪ ಕಟ್ಟಿಮನಿ, ವೀರನಗೌಡ ಬೂದಗುಂಪ, ಅಜ್ಮೀರ್ ಎಸ್‌ಡಿ‌ಪಿಐ, ಸೋಮಶೇಖರ್ ಮೈಲಾಪೂರ, ಅನಂದ, ಉಮ್ಮೇಶ ವಕೀಲರು, ವೀರನಗೌಡ ಮಾಲಿ ಪಾಟೀಲ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X