ಬೀದರ್‌ | ಸಚಿನ್‌‌ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

Date:

Advertisements

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ.

ಸಿಐಡಿ ಡಿವೈಎಸ್ಪಿ ಸುಲೇಮಾನ್ ತಹಸೀಲ್ದಾರ್ ನೇತೃತ್ವದ ತಂಡ ಶುಕ್ರವಾರ(ಡಿ.3) ಬೀದರ್ ನಗರಕ್ಕೆ ಆಗಮಿಸಿದ್ದು, ತನಿಖೆ ಶುರುವಾಗಿದೆ.

ನಗರ ಹೊರವಲಯದ ಹಬ್ಸಿ ಕೋಟೆ ಅತಿಥಿ ಗೃಹದಿಂದ ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲಿಂದ ಸಚಿನ್‌ ಆತ್ಮಹತ್ಯೆ ಮಾಡಿಕೊಂಡ ಹೈದ್ರಾಬಾದ್-ಬೀದರ್‌ ಮಾರ್ಗದ ರೈಲು ಹಳಿಗೆ ಭೇಟಿ ಕೊಟ್ಟು ಸ್ಥಳ ಮಹಜರು ಮಾಡಲಿದ್ದಾರೆ. ಬಳಿಕ ಸಚಿನ್‌ ಅವರ ಗ್ರಾಮ ಭಾಲ್ಕಿ ತಾಲ್ಲೂಕಿನ ಕಟ್ಟಿ ತೂಗಾಂವ್‌ಗೆ ತೆರಳಲಿದ್ದಾರೆ. ಅಲ್ಲಿಂದ ಬೀದರ್‌ನ ಗಾಂಧಿ ಗಂಜ್‌ ಪೊಲೀಸ್‌ ಠಾಣೆ, ಅನಂತರ ಭಾಲ್ಕಿ ತಾಲ್ಲೂಕಿನ ಧನ್ನೂರ್‌ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಮೇಲೇಕೆ ಆರೆಸ್ಸೆಸ್‌ನಿಂದ ವ್ಯವಸ್ಥಿತ ದಾಳಿ?

ಗುತ್ತಿಗೆದಾರ ಸಚಿನ್‌ ಪಾಂಚಾಳ್ ಡಿ.26ರಂದು‌ ಸಚಿನ್‌ ಪಾಂಚಾಳ್ ಮರಣ ಪತ್ರ ಬರೆದಿಟ್ಟು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.‌ ಕಾಂಗ್ರೆಸ್‌ ಮುಖಂಡ ರಾಜು ಕಪನೂರ ಸೇರಿದಂತೆ ಇತರೆ ಎಂಟು ಎಂಟು ಜನರ ವಿರುದ್ಧ ಬೀದರ್‌ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X