450 ಕೋಟಿ ರೂ. ಹಗರಣ | ಟೀಮ್‌ ಇಂಡಿಯಾ ಆಟಗಾರ ಶುಭ​ಮನ್ ಗಿಲ್‌ಗೆ ಸಿಐಡಿ ಸಮನ್ಸ್‌

Date:

Advertisements

ಬರೋಬ್ಬರಿ 450 ಕೋಟಿ ರೂ. ಹಗರಣವೊಂದಕ್ಕೆ ಸಂಬಂಧಿಸಿದಂತೆ ಟೀಮ್‌ ಇಂಡಿಯಾದ ಬೇಡಿಕೆಯ ಬ್ಯಾಟರ್‌ ಶುಭಮನ್ ಗಿಲ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಗುಜರಾತ್‌ ಸಿಐಡಿ ಸಮನ್ಸ್‌ ಜಾರಿ ಮಾಡಿದೆ.

ಪ್ರಸ್ತುತ ಗಿಲ್‌ ಅವರು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಟವಾಡುತ್ತಿದ್ದು, ಆಸ್ಟ್ರೇಲಿಯಾದಲ್ಲಿದ್ದಾರೆ. ಅವರಿಗೆ ಸಿಬಿಐ ಸಮನ್ಸ್‌ ಜಾರಿ ಮಾಡಿದೆ. ಗಿಲ್ ಮಾತ್ರವಲ್ಲದೆ, ಐಪಿಎಲ್‌ನ ಗುಜರಾತ್ ಟೈಟಾನ್ಸ್‌ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಹಾಗೂ ಮೋಹಿತ್ ಶರ್ಮಾ ಅವರಿಗೂ ಸಮನ್ಸ್‌ ನೀಡಲಾಗಿದೆ.

ಭೂಪೇಂದರ್ ಸಿಂಗ್ ಝಾಲಾ ಎಂಬವರ ನೇತೃತ್ವದಲ್ಲಿ ‘BZ ಫೈನಾನ್ಶಿಯಲ್ ಸರ್ವಿಸಸ್’ ಎಂಬ ಫೈನಾನ್ಸ್‌ ಕಂಪನಿಯನ್ನು ನಡೆಸಲಾಗುತ್ತಿದೆ. ಈ ಕಂಪನಿಯಲ್ಲಿ ಗಿಲ್ ಮತ್ತು ಇತರ ಮೂವರು ಕ್ರಿಕೆಟಿಕೆಗರು ಹೂಡಿಕೆ ಮಾಡಿದ್ದಾರೆ. ಗಿಲ್ 1.95 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದರೆ, ಇತರ ಆಟಗಾರರು ಸಣ್ಣ ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಈ ಕಂಪನಿಯಲ್ಲಿ ಬ್ಯಾಂಕುಗಳಿಗಿಂತ ಹೆಚ್ಚಿನ ಬಡ್ಡಿ ದರ ನೀಡುವುದಾಗಿ ಹೂಡಿಕೆದಾರರಿಂದ ಹಣ ಹೂಡಿಕೆ ಮಾಡಿಸಿ, ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

Advertisements

ಈ ವರದಿ ಓದಿದ್ದೀರಾ?: ಕೆಪಿಎಸ್‌ಸಿ ಕರ್ಮಕಾಂಡ | ಮರುಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲೂ ಎಡವಟ್ಟು: ಬೇಜವಾಬ್ದಾರಿ ಅಧಿಕಾರಿಗಳ ತಲೆದಂಡವೇ ಸೂಕ್ತ ಕ್ರಮ?

ಹೂಡಿಕೆದಾರರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಕಂಪನಿಯ ಮುಖ್ಯಸ್ಥ ಭೂಪೇಂದರ್ ಸಿಂಗ್ ಝಾಲಾ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

“ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರವಾಗಿ ಆಟವಾಡುವ ಶುಭ್​ಮನ್​ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಹಾಗೂ ಮೋಹಿತ್ ಶರ್ಮಾ ಪೊಂಜಿ ಅವರು ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈ ನಾಲ್ವರಿಗೂ ಕೂಡ ಹೆಚ್ಚಿನ ಬಡ್ಡಿಯನ್ನು ಕಂಪನಿ ಪಾವತಿಸಿಲ್ಲವೆಂದು ಆರೋಪಿ ಭೂಪೇಂದರ್ ಹೇಳಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X