ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

Date:

Advertisements

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ’ ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ.

ಉತ್ತರ ಪ್ರದೇಶದ ಬಾರಬಂಕಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬ್ರಿಜ್​ ಭೂಷಣ್, ʻಕುಸ್ತಿಪಟುಗಳು ಸರ್ಕಾರದ ಬಳಿ ನನ್ನನ್ನು ನೇಣುಗಂಬಕ್ಕೆ ಏರಿಸಬೇಕೆಂದು ಪಟ್ಟು ಹಿಡಿಯಲು ಪ್ರಾರಂಭಿಸಿ ಸುಮಾರು ನಾಲ್ಕು ತಿಂಗಳಾಗಿದೆ. ಆದರೆ ಸರ್ಕಾರ ನನ್ನನ್ನು ನೇಣಿಗೇರಿಸುತ್ತಿಲ್ಲ. ಅದಕ್ಕಾಗಿ ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಗೆ ಎಸೆಯಲು ತೀರ್ಮಾನಿಸಿದ್ದರು. ಪದಕಗಳನ್ನು ಗಂಗೆಗೆ ಎಸೆಯುವುದರಿಂದ ಬ್ರಿಜ್‌ ಭೂಷಣ್‌ನನ್ನು ಗಲ್ಲಿಗೇರಿಸಲು ಸಾಧ್ಯವಾಗುವುದಿಲ್ಲ. ಬದಲಾಗಿ ನನ್ನ ಮೇಲಿನ ಆರೋಪಗಳಲ್ಲಿ ಒಂದನ್ನಾದರೂ ಸಾಬೀತುಪಡಿಸಿʼ ಎಂದು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದನೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಹೇಳಿದ್ದಾರೆ.

 ʻಕುಸ್ತಿಪಟುಗಳು ನನಗೆ ಮಕ್ಕಳಿದ್ದಂತೆ. ನಾನು ಯಾವತ್ತೂ ಅವರನ್ನು ತೆಗಳುವ ಮಾತುಗಳನ್ನಾಡುವುದಿಲ್ಲ. ಏಕೆಂದರೆ ಅವರ ಸಾಧನೆಗಳಲ್ಲಿ ನನ್ನ ರಕ್ತದ, ಬೆವರಿನ ಫಲವೂ ಇದೆ. ಆದರೆ, ನನ್ನ ವಿರುದ್ಧ ಮಾಡಲಾಗಿರುವ ಒಂದೇ ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ ಎಂಬ ನನ್ನ ಹಿಂದಿನ ಮಾತನ್ನು ಮತ್ತೆ ಪುನರಾವರ್ತನೆ ಮಾಡುತ್ತಿದ್ದೇನೆʼ ಎಂದು ಸಿಂಗ್‌  ಹೇಳಿದ್ದಾರೆ.

Advertisements

ʻನನ್ನ ವಿರುದ್ಧದ ದೂರಿನ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಬಳಿ ಯಾವುದೇ ಪುರಾವೆಗಳಿದ್ದರೂ ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿ. ಆರೋಪದಲಿ ಸತ್ಯವಿದ್ದರೆ ಪೊಲೀಸರು ನನ್ನನ್ನು ಬಂಧಿಸುತ್ತಾರೆ. ಯಾವುದೇ ಶಿಕ್ಷೆಯನ್ನು ಎದುರಿಸಲು ನಾನು ಸಿದ್ದನಿದ್ದೇನೆʼ ಎಂದು ಸಿಂಗ್‌ ಹೇಳಿದ್ದಾರೆ.

ಡಬ್ಲ್ಯೂಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಘೋಷಿಸಿದ್ದರು. ಆದರೆ ಮಂಗಳವಾರ ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯಿತ್, ನದಿಯಲ್ಲಿ ಬಿಡುವುದಕ್ಕಾಗಿ ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X